Fraud: ಜಿಎಸ್ಟಿ ಅಧಿಕಾರಿಗಳಿಂದ ಉದ್ಯಮಿ ಕಿಡ್ನ್ಯಾಪ್, ಸುಲಿಗೆ

ಜಿಎಸ್‌ಟಿ, ಇಡಿ ಅಧಿಕಾರಿಗಳು ಎಂದು ಹೇಳಿ 1.5 ಕೋಟಿ ರೂ. ವಂಚನೆ

Team Udayavani, Sep 12, 2024, 10:59 AM IST

4

ಬೆಂಗಳೂರು: ಬೇಲಿಯೇ ಎದ್ದು ಹೊಲ ಮೇಯ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಅಧಿಕಾರ ದುರ್ಬಳಕೆ ಮಾಡಿಕೊಂಡು ಉದ್ಯಮಿಯೊಬ್ಬರ ಮನೆಗೆ ನುಗ್ಗಿ ಅಪಹರಿಸಿ, ಹಲ್ಲೆ ನಡೆಸಿದಲ್ಲದೆ,

1.5 ಕೋಟಿ ರೂ. ಸುಲಿಗೆ ಮಾಡಿದ ಆರೋಪದಲ್ಲಿ ಕೇಂದ್ರ ಜಿಎಸ್‌ಟಿಯ ಬೆಂಗಳೂರು ದಕ್ಷಿಣ ವಿಭಾಗದ ಅಧೀಕ್ಷಕ ಸೇರಿ ನಾಲ್ವರು ಬೈಯಪ್ಪನಹಳ್ಳಿ ಮತ್ತು ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಬೆಂಗಳೂರು ದಕ್ಷಿಣ ಕಮಿಷನರೇಟ್‌ ವಿಭಾಗದ ಕೇಂದ್ರ ಆದಾಯ ತೆರಿಗೆ ಅಧೀಕ್ಷಕ ಅಭಿಷೇಕ್‌ (34), ಜಿಎಸ್‌ಟಿ ಗುಪ್ತಚರ ವಿಭಾಗದ ಹಿರಿಯ ಅಧಿಕಾರಿ ಮನೋಜ್‌ ಸೈನಿ (39), ನಾಗೇಶ್‌ ಬಾಬು (35) ಮತ್ತು ಗುಪ್ತಚರ ಅಧಿಕಾರಿ ಸೋನಾಲಿ ಸಹಾಯ್‌(30) ಎಂಬುವರನ್ನು ಬಂಧಿಸಲಾಗಿದೆ.

ಆರೋಪಿಗಳಿಂದ 32 ಮೊಬೈಲ್‌ಗ‌ಳು, 2 ಲ್ಯಾಪ್‌ಟಾಪ್‌ಗ್ಳು, 50 ಚೆಕ್‌ಬುಕ್‌ಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳು ಇತ್ತೀಚೆಗೆ ಆ.30ರಂದು ಕೇಶವ್‌ ತಕ್‌ ಎಂಬುವರ ಮನೆಗೆ ನುಗ್ಗಿ, ಕೇಶವ್‌ ತಕ್‌ ಹಾಗೂ ಅವರು ಮೂವರು ಕುಟುಂಬ ಸದಸ್ಯರನ್ನು ಅಪಹರಿಸಿ, ಅವರ ಕಚೇರಿಯಲ್ಲೇ ಗೃಹ ಬಂಧನದಲ್ಲಿರಿಸಿದ್ದರು. ಅಲ್ಲದೆ, 1.5 ಕೋಟಿ ರೂ. ಸುಲಿಗೆ ಮಾಡಿದ್ದರು. ಈ ಸಂಬಂಧ ಕೇಶವ್‌ ತಕ್‌ ಬೈಯಪ್ಪನಹಳ್ಳಿ ಠಾಣೆಗೆ ದೂರು ನೀಡಿದ್ದರು. ಬಳಿಕ ಸಿಸಿಬಿಗೆ ಪ್ರಕರಣ ವರ್ಗಾವಣೆಯಾಗಿದ್ದು, ಇಬ್ಬರು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಬೈಯಪ್ಪನಹಳ್ಳಿ ಠಾಣೆ ವ್ಯಾಪ್ತಿಯ ಜಿ.ಎಂ. ಪಾಳ್ಯದಲ್ಲಿ ವಾಸವಾಗಿರುವ ದೂರುದಾರ ಕೇಶವ ತಕ್‌, ಜೀವನ್‌ ಭೀಮಾನಗರದಲ್ಲಿ ಮ್ಯಾಕೆ ಸಲ್ಯೂಷನ್‌ ಪ್ರೈವೇಟ್‌ ಲಿಮಿಟೆಡ್‌ ಎಂಬ ಕಂಪನಿ ನಡೆಸುತ್ತಿದ್ದಾರೆ. ಈ ಮಧ್ಯೆ ಆ.30ರಂದು ಬೆಳಗ್ಗೆ 9 ಗಂಟೆ ಸುಮಾರಿಗೆ ನಾಲ್ವರು ಆರೋಪಿಗಳು ಜಿಎಸ್‌ಟಿ ಮತ್ತು ಇಡಿ ಅಧಿಕಾರಿಗಳು ಎಂದು ಹೇಳಿಕೊಂಡು ಮನೆಗೆ ನುಗ್ಗಿದ್ದಾರೆ. ಬಳಿಕ ಎಲ್ಲರ ಮೊಬೈಲ್‌ಗ‌ಳನ್ನು ಕಸಿದುಕೊಂಡು, ಕೇಶವ್‌ ತಕ್‌, ಪವನ್‌ ತಕ್‌, ಮುಖೇಶ್‌ ಜೈನ್‌, ರಾಕೇಶ್‌ ಮಾಣಕ್‌ ಚಾಂದನಿ ಅವರನ್ನು ಅಪಹರಿಸಿ 2 ಕಾರುಗಳಲ್ಲಿ ಕೂರಿಸಿಕೊಂಡು ದೂರುದಾರರ ಕಚೇರಿಗೆ ಕರೆದೊಯ್ದು, ಹಲ್ಲೆ ನಡೆಸಿ ಅಲ್ಲಿಯೇ ಗೃಹ ಬಂಧನದಲ್ಲಿ ಇರಿಸಿದ್ದರು. ಈ ವೇಳೆ ಆರೋಪಿ ಮನೋಜ್‌ ತಾನೂ ಹಿರಿಯ ಜಿಎಸ್‌ಟಿ ಅಧಿಕಾರಿ ಎಂದು ಹೇಳಿ, ಕೇಶವ್‌ ತಕ್‌ನನ್ನು ಇಂದಿರಾನಗರಕ್ಕೆ ಕರೆದೊಯ್ದು ಮೊಬೈಲ್‌ನ ಹಾಟ್‌ ಸ್ಪಾಟ್‌ ಆನ್‌ ಮಾಡಿ ರೋಷನ್‌ ಜೈನ್‌ ಎಂಬಾತನಿಗೆ ಕರೆ ಮಾಡಿಸಿದ್ದಾನೆ. ಬಳಿಕ 3 ಕೋಟಿ ರೂ. ತಂದು ಕೊಡು ವಂತೆ ಹೇಳಿಸಿದ್ದಾರೆ. ಬಳಿಕ ಮತ್ತೆ ದೂರುದಾರರ ಕಚೇ ರಿಗೆ ಕರೆತಂದು, ಆ.31ರಂದು ಬೆಳಗ್ಗೆ 10.30ರ ಸುಮಾ ರಿಗೆ ನಗರದ ಕೆಲ ಸ್ಥಳಗಳಿಗೆ ಕರೆದೊಯ್ದು ವಾಪಸ್‌ ಕರೆತಂದಿದ್ದಾರೆ. ಇನ್ನು ತನ್ನ ಸ್ನೇಹಿತ ರೋಷನ್‌ ಜೈನ್‌ ಹಣ ತಂದುಕೊಡಲು ತಡ ಮಾಡಿದಕ್ಕೆ ಹಲ್ಲೆ ನಡೆಸಿದ್ದಾರೆ ಎಂದು ಕೇಶವ್‌ ತಕ್‌ ದೂರಿನಲ್ಲಿ ಆರೋಪಿಸಿದ್ದಾರೆ.

ಮತ್ತೂಂದೆಡೆ ದೂರುದಾರರ ಒತ್ತಾಯದ ಮೇರೆಗೆ ರೋಷನ್‌ ಜೈನ್‌ 1.5 ಕೋಟಿ ರೂ. ಅನ್ನು ಅಂಗಾಡಿಯ ಎಂಬಾತನ ಬಳಿ ಪಡೆದುಕೊಳ್ಳುವಂತೆ ಸೂಚಿಸಿದ್ದರು. ಆದರಿಂದ ಸೆ.1ರಂದು ನಸುಕಿನ 3 ಗಂಟೆ ಸುಮಾರಿಗೆ ಎಲ್ಲರಿಂದಲೂ ಸಹಿ ಪಡೆದುಕೊಂಡು ಬಿಟ್ಟು ಕಳುಹಿಸಿದ್ದರು. ಸೆ.2ರಂದು ಅನುಮಾನಗೊಂಡ ದೂರುದಾರ ಕೇಶವ್‌ ತಕ್‌, ಕೆಲ ಅಧಿಕಾರಿಗಳ ಬಳಿ ವಿಚಾರಣೆ ನಡೆಸಿದಾಗ ಅಧಿಕಾರ ದುರ್ಬಳಕೆ ಪತ್ತೆಯಾಗಿದೆ. ಹೀಗಾಗಿ ಜಿಎಸ್‌ಟಿ ಮತ್ತು ಇಡಿ ಅಧಿಕಾರಿಗಳು ಎಂದು ಹೇಳಿಕೊಂಡು ಬೆದರಿಸಿ ಸುಲಿಗೆ ಮಾಡಿದ್ದ ನಾಲ್ವರು ಆರೋಪಿಗಳ ವಿರುದ್ಧ ದೂರು ನೀಡಿದ್ದರು. ಈ ದೂರು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.

ಅಕ್ರಮ ದಾಳಿಗೆ ಖಾಸಗಿ ವಾಹನಗಳ ಬಳಕೆ: ಪ್ರಕರಣದ ತನಿಖೆಯಲ್ಲಿ ನಾಲ್ವರು ಆರೋಪಿಗಳು, ಹಿರಿಯ ಅಧಿಕಾರಿಗಳ ಅನುಮತಿ ಪಡೆಯದೆ ದಾಳಿ ಮಾಡಿ, ಹಲವಾರು ವಸ್ತುಗಳನ್ನು ಜಪ್ತಿ ಮಾಡಿರುವುದು ಪತ್ತೆಯಾಗಿದೆ. ಅಲ್ಲದೆ, ಎರಡು ದಿನಗಳ ಕಾಲ ದೂರುದಾರ ಹಾಗೂ ಕುಟುಂಬ ಸದಸ್ಯರನ್ನು ಅಕ್ರಮವಾಗಿ ಬಂಧನಲ್ಲಿಸಿರುವುದು ಕಂಡು ಬಂದಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ. ಆರೋಪಿಗಳು ಇದೇ ಮಾದರಿಯಲ್ಲಿ ಬೇರೆ ಬೇರೆ ಉದ್ಯಮಿಗಳಿಂದಲೂ ಕೋಟ್ಯಂತರ ರೂ. ಸುಲಿಗೆ ಮಾಡಿರುವುದು ಪ್ರಾಥಮಿಕ ಮಾಹಿತಿಯಿಂದ ಪತ್ತೆಯಾಗಿದೆ. ಜೊತೆಗೆ ಈ ರೀತಿ ಅಕ್ರಮ ದಾಳಿಗೆ ಖಾಸಗಿ ವಾಹನಗಳನ್ನು ಬಳಸಿಕೊಳ್ಳುತ್ತಿರುವುದು ಬೆಳಕಿಗೆ ಬಂದಿದೆ.

ನಕಲಿ ದಾಖಲೆ ನೀಡಿ 32 ಮೊಬೈಲ್‌ ಖರೀದಿ: ಆರೋಪಿಗಳ ಪೈಕಿ ಮನೋಜ್‌, ನಾಗೇಶ್‌ ಬಾಬು ಹಾಗೂ ಸೋನಾಲಿ ಸಹಾಯ್‌ ಕೇಶವ್‌ ತಕ್‌ ವ್ಯವಹಾರದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದರು. ಅವರ ಕೋಟ್ಯಂತರ ರೂ. ವ್ಯವಹಾರ ಹಾಗೂ ಜಿಎಸ್‌ಟಿ ಪಾವತಿ ಕುರಿತು ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಅಕ್ರಮವಾಗಿ ದಾಳಿ ನಡೆಸಿ, ಸುಲಿಗೆ ಮಾಡಿದ್ದಾರೆ. ಅಲ್ಲದೆ, ಆರೋಪಿಗಳು ನಕಲಿ ದಾಖಲೆಗಳನ್ನು ನೀಡಿ ಸಿಮ್‌ ಕಾರ್ಡ್‌ಗಳನ್ನು ಪಡೆದುಕೊಂಡು ಇದೇ ರೀತಿಯ ಅಕ್ರಮ ಎಸಗಲು 32 ಮೊಬೈಲ್‌ಗ‌ಳನ್ನು ಬಳಸಿರುವ ಮಾಹಿತಿ ಇದೆ. ಇನ್ನು ಪತ್ತೆಯಾಗಿರುವ 50 ಚೆಕ್‌ ಬುಕ್‌ಗಳು ಯಾರ ಖಾತೆದಾರರದ್ದು ಎಂಬ ಬಗ್ಗೆ ತನಿಖೆ ನಡೆಯಬೇಕಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.