ಸಿಎಎ: 70 ಲಕ್ಷ ಮಂದಿಗೆ ನೇರ ಮಾಹಿತಿ


Team Udayavani, Jan 20, 2020, 3:07 AM IST

caa-bj

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಕುರಿತ ಜಾಗೃತಿ ಅಭಿಯಾನದಡಿ ಈವರೆಗೆ 70 ಲಕ್ಷಕ್ಕೂ ಹೆಚ್ಚು ಮಂದಿಯನ್ನು ರಾಜ್ಯದಲ್ಲಿ ನೇರವಾಗಿ ಭೇಟಿಯಾಗಿ ಮಾಹಿತಿ ನೀಡಲಾಗಿದ್ದು, ಒಂದು ಕೋಟಿ ಜನರಿಗೆ ಮಾಹಿತಿ ಒದಗಿಸುವ ಗುರಿ ಹೊಂದಲಾಗಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯ ದರ್ಶಿ, ಜಾಗೃತಿ ಅಭಿ ಯಾನದ ಸಂಚಾಲಕ ಎನ್‌.ರವಿ ಕುಮಾರ್‌ ಹೇಳಿದರು.

ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಭಾನುವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತ ನಾಡಿ, ಅಭಿಯಾನ ಡಿ.26ರವರೆಗೆ ನಡೆಯಲಿದ್ದು, ಗಣರಾಜ್ಯೋ ತ್ಸವದಂದು ರಾಜ್ಯದ 58,000 ಬೂತ್‌ಗಳಲ್ಲಿ ಏಕಕಾಲದಲ್ಲಿ ಧ್ವಜಾರೋಹಣ ನೆರವೇರಿಸಿ ಕಾಯ್ದೆ ಜಾರಿಗೊಳಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸಿ, ಸಭೆ ನಡೆಸಲಾಗುವುದು ಎಂದು ಹೇಳಿದರು.

ದಿನ ಕಳೆದಂತೆ ದೇಶಾದ್ಯಂತ ಸಿಎಎಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಸಿಎಎ ಕುರಿತ ಜಾಗೃತಿ ಅಭಿಯಾನ ಜ.20ಕ್ಕೆ ಮುಕ್ತಾಯವಾಗಬೇಕಿತ್ತು. ಅದನ್ನು ಜ.26ರವರೆಗೆ ವಿಸ್ತರಿಸಲಾಗಿದೆ. ಜ.26ರಂದು ಬೆಳಗ್ಗೆ 9.30ರಿಂದ 10.30ರವರೆಗೆ ಎಲ್ಲ ಬೂತ್‌ಗಳಲ್ಲೂ ಧ್ವಜಾರೋಹಣ ನೆರವೇರಿಸಿ, ಪ್ರಧಾನಿಗೆ ಅಭಿನಂದಿಸಿ, ಸಭೆ ನಡೆಸಲಾಗುವುದು. ಹಾಗೆಯೇ ಕಾಯ್ದೆ ಬಗ್ಗೆ ಸುಳ್ಳು, ಅಪಪ್ರಚಾರ ಮಾಡುತ್ತಿರುವ ಕಾಂಗ್ರೆಸ್‌ ಧೋರಣೆ ಖಂಡಿಸಲಾಗುವುದು.

ಕಾಂಗ್ರೆಸ್‌ನ ನಿಜ ಬಣ್ಣ ಬಯಲು ಮಾಡಲಾಗುವುದು ಎಂದು ತಿಳಿಸಿದರು. ಎಲ್ಲ ಸಂಸದರು, ಶಾಸಕರು, ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಸದಸ್ಯರು, ನಗರಸಭೆ ಸದಸ್ಯರು, ಪುರಸಭೆ ಸದಸ್ಯರು, ಮಾಜಿ ಸಂಸದರು, ಶಾಸಕರು, ಪಕ್ಷದ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ “ಉಟ್ಟು ಬಟ್ಟೆಯಲ್ಲಿ ಹೊರಟು ಬಂದವರು’ ಕೃತಿ ಕುರಿತು ಚರ್ಚೆಯಾಗಲಿದೆ.

ಕಾಯ್ದೆಯಲ್ಲಿ ಮುಸ್ಲಿಮರಿಗೆ ತೊಂದರೆಯಾಗುವ ಒಂದು ಅಂಶವೂ ಇಲ್ಲ. ಹಾಗಿದ್ದರೂ ಕಾಂಗ್ರೆಸ್‌ ಸುಳ್ಳು ಹೇಳುತ್ತಾ ಅಪಪ್ರಚಾರ ಮಾಡುತ್ತಿದೆ. ಕಾಯ್ದೆಯ ಅಂಶಗಳ ಬಗ್ಗೆ ಬಹಿರಂಗ ಮುಕ್ತ ಚರ್ಚೆಗೆ ಬರುವಂತೆ ಕೇಂದ್ರ ಗೃಹ ಸಚಿವರಾದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಶನಿವಾರ ಹೇಳಿದ್ದಾರೆ. ಹಾಗಾಗಿ ಕಾಂಗ್ರೆಸ್‌ನವರು ಚರ್ಚೆಗೆ ಬರಲಿ ಎಂದು ಹೇಳಿದರು.

ಸಿಎಎ ಬಗ್ಗೆ ಉದ್ದೇಶಪೂರ್ವಕವಾಗಿ ವಿರೋಧಿಸುವವರಿಗೆ ಏನೂ ಮಾಡಲಾಗದು, ಅವರನ್ನು ಸರಿಪಡಿಸಲಾಗದು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಂಸದ ವಿ.ಎಸ್‌. ಉಗ್ರಪ್ಪ ಅವರು ಎಲ್ಲದಕ್ಕೂ ವಿರೋಧ ವ್ಯಕ್ತಪಡಿಸುತ್ತಾರೆ. ಕಾಂಗ್ರೆಸ್‌ ರಚನಾತ್ಮಕ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತಿಲ್ಲ. ಸಿಎಎ ಬಗ್ಗೆ ಬಹಿರಂಗ ಚರ್ಚೆಗೆ ಬಿಜೆಪಿ ಸಿದ್ಧವಿದೆ. ಮುಸ್ಲಿಮರನ್ನು ದೇಶದಿಂದ ಹೊರಗೆ ಕಳುಹಿಸಲಾಗುತ್ತದೆ ಎಂಬ ಅಂಶವನ್ನು ಕಾಂಗ್ರೆಸ್‌ನವರು ತೋರಿಸಲಿ.

ಕೇಂದ್ರ ಗೃಹ ಸಚಿವರು ಮುಕ್ತ ಚರ್ಚೆಗೆ ಕರೆ ನೀಡಿರುವುದರಿಂದ ನಾವು ಸಿದ್ಧರಿದ್ದೇವೆ. ಕಾಂಗ್ರೆಸ್‌ನವರೇ ಸಮಯ ನಿಗದಿಪಡಿಸಲಿ. ಕಾಂಗ್ರೆಸ್‌ನವರು ಮೊದಲಿಗೆ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಸಮಸ್ಯೆ ಬಗೆಹರಿಸಿಕೊಳ್ಳಲಿ ಎಂದು ತಿಳಿಸಿದರು. ರಾಜ್ಯ ಬಿಜೆಪಿ ಮಾಧ್ಯಮ ಸಂಚಾಲಕ ಎ.ಎಚ್‌.ಆನಂದ್‌ ಉಪಸ್ಥಿತರಿದ್ದರು.

ಸಿಎಎ ಅಭಿಯಾನ ವಿವರ
* 61 ಚಿಂತನಾ ಸಭೆಗಳಾಗಿದ್ದು, 24,981 ಮಂದಿ ಭಾಗಿ.
* ಮನೆ- ಮನೆ ಸಂಪರ್ಕ ಅಭಿಯಾನದಡಿ 20.04,701 ಮನೆಗಳಿಗೆ ಸಂಪರ್ಕ.
* ಮಿಸ್ಡ್ ಕಾಲ್‌ ಅಭಿಯಾನದಡಿ 10,15,031 ಮಂದಿ ಮಿಸ್ಡ್ ಕಾಲ್‌ ನೀಡಿ ಬೆಂಬಲ.
* 8,065 ಕಡೆ ಭಾರತ ಮಾತಾ ಪೂಜಾ ಕಾರ್ಯಕ್ರಮಗಳಾಗಿದ್ದು, ಕಾಯ್ದೆ ಬೆಂಬಲಿಸುವಂತೆ ಚರ್ಚೆ.
* ಸಿಎಎ ಬೆಂಬಲಿಸಿ ಪ್ರಧಾನಿಯವರಿಗೆ 2,14,705 ಮಂದಿಯಿಂದ ಪತ್ರ.
* ಸಹಿ ಸಂಗ್ರಹ ಅಭಿಯಾನದಡಿ 5,23,332 ಮಂದಿ ಬೆಂಬಲ.
* 24 ರ್ಯಾಲಿಗಳಾಗಿದ್ದು, 1,93,700 ಮಂದಿ ಭಾಗಿ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.