ಕಸಾಪ ಚುನಾವಣೆ ಮುಂದೂಡಲು ಅಭ್ಯರ್ಥಿಗಳ ಒತ್ತಾಯ


Team Udayavani, Apr 25, 2021, 12:56 PM IST

ಕಸಾಪ ಚುನಾವಣೆ ಮುಂದೂಡಲು ಅಭ್ಯರ್ಥಿಗಳ ಒತ್ತಾಯ

ಬೆಂಗಳೂರು: “ದಯವಿಟ್ಟು ನಮ್ಮನೆ ಕಡೆ ಬರಬೇಡಿ. ನೀವು ನಮ್ಮ ಮನಸಿನಲ್ಲಿದ್ದೀರಿ, ನಿಮಗೆ ನಮ್ಮ ಮತ… ಬೇಸರ ಮಾಡಿಕೊಳ್ಳಬೇಡಿ…’ ಇದು ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಗೆ ನಿಂತಿರುವ ಅಭ್ಯರ್ಥಿಗಳಿಗೆ ಮತದಾರರು ಹೇಳುವ ಮಾತು.

ಮೇ 9ರಂದು ಕಸಾಪ ಚುನಾವಣೆ ನಡೆಯಲಿದ್ದು ಅಭ್ಯರ್ಥಿಗಳು ಕೋವಿಡ್‌ ಸೋಂಕಿನ ನಡುವೆ ಮನೆ ಮನೆ ಪ್ರಚಾರ ಕೈಗೊಂಡಿದ್ದಾರೆ. ಕೆಲವರು ತಮ್ಮ ಆಪ್ತರ ಜತೆಗೂಡಿ ಜಿಲ್ಲಾವಾರು ಪ್ರವಾಸದಲ್ಲಿದ್ದಾರೆ. ಆದರೆ ಕೋವಿಡ್‌ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ಭಯದಿಂದಾಗಿ ಮತದಾರರು ಮಾತ್ರ ದಯವಿಟ್ಟು ನಮ್ಮ ಮನೆಗೆ ಬರಬೇಡಿ ಎಂದು ಮನವಿ ಮಾಡಿಕೊಳ್ಳುತ್ತಿದ್ದಾರೆ.

ಹೀಗಾಗಿ ಜಿಲ್ಲಾವಾರು ಮತ್ತು ಪ್ರದೇಶವಾರು ಪ್ರಚಾರದಲ್ಲಿರುವ ಅಭ್ಯರ್ಥಿಗಳಿಗೆ ಇದು ನಿರಾಸೆ ಉಂಟು ಮಾಡಿದೆ. ಈಗಾಗಲೇ ರಾಜ್ಯದ ಹಲವು ಕಡೆ ಚುನಾವಣಾ ಪ್ರಚಾರ ಮಾಡಿರುವ ಕಸಾಪ ರಾಜ್ಯಾಧ್ಯಕ್ಷ ಸ್ಥಾನದ ಅಭ್ಯರ್ಥಿ ಮಹೇಶ್‌ ಜೋಶಿ ಅವರಿಗೆ ಕೋವಿಡ್‌ ಸೋಂಕು ಕಾಣಿಸಿಕೊಂಡಿದೆ. ಆ ಹಿನ್ನೆಲೆಯಲ್ಲಿ ಅವರು ಆರೈಕೆ ಪಡೆಯುತ್ತಿದ್ದಾರೆ. ಅಲ್ಲದೆ ತಮ್ಮ ಸಂಪರ್ಕಕ್ಕೆ ಬಂದಿದ್ದ ಮತದಾರರು ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.

ಇದರಿಂದಾಗಿ ಎಚ್ಚೆತ್ತುಕೊಂಡಿರುವ ಮತದಾರರು ಮೊಬೈಲ್‌ ಮೂಲಕ ಸಂಪರ್ಕಿಸಿದ ರಾಜ್ಯಾಧ್ಯಕ್ಷ ಮತ್ತು ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿಗಳಿಗೆ ಮನೆಕಡೆ ಬರಬೇಡಿ ಎಂದು ಮನವಿ ಮಾಡಿಕೊಳ್ಳುತ್ತಿ ದ್ದಾರೆ. ಈ ಬಗ್ಗೆಪ್ರತಿಕ್ರಿಯೆ ನೀಡಿದ ಹೆಸರು ಹೇಳಲು ಇಚ್ಚಿಸಿದ ಅಭ್ಯರ್ಥಿಯೊಬ್ಬರು ಈಗಾಗಲೇ ಬೆಳಗಾವಿ ಸೇರಿ ಉತ್ತರ ಕರ್ನಾಟಕದ ಪ್ರವಾಸದಲ್ಲಿದ್ದೇನೆ, ಆದರೆ ಯಾರೂ ಕೂಡ ಭೇಟಿಗೆ ಸಿಗುತ್ತಿಲ್ಲ ಎಂದು ಹೇಳಿದರು.

ಚುನಾವಣೆ ಮುಂದೂ‌ಡಿಕೆಗೆ ಆಗ್ರಹ:‌ ಕಸಾಪ ಚುನಾವಣೆ ಮುಂದೂಡುವಂ ತೆ ಒತ್ತಾಯ ಕೇಳಿಬಂದಿದೆ. ಈ ಬಗ್ಗೆ ಪರಿಷತ್ತಿನ ಕೇಂದ್ರ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿರುವ ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಸ್ಥಾನದ ಅಭ್ಯರ್ಥಿ ಕುವೆಂಪು ಪ್ರಕಾಶ್‌, ಬೆಂಗಳೂರಿನಲ್ಲಿ ಕೋವಿಡ್‌ ಸೋಂಕು ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳಿಗೆ ಮನೆ ಮನೆಗೆ ಹೋಗಿ ಮತ ಕೇಳಲು ಸಾಧ್ಯವಾಗುತ್ತಿಲ್ಲ. 2-3 ತಿಂಗಳು ಚುನಾವಣೆ ಮುಂದೂಡುವಂತೆ ಒತ್ತಾಯಿಸಿದ್ದಾರೆ. ನಾಡೋಜ ಡಾ.ಮಹೇಶ್‌ ಜೋಶಿ ಪ್ರತಿಕ್ರಿಯಿಸಿ, ಚುನಾವಣೆಗಿಂತಲೂ ಜನರ ಆರೋಗ್ಯ ಮುಖ್ಯ. ಸದ್ಯದ ಪರಿಸ್ಥಿತಿಯಲ್ಲಿ ಚುನಾವಣಾಧಿಕಾರಿಗಳು ಪರಿಷತ್ತಿನ ಚುನಾವಣೆ ಮುಂದೂಡುವುದು ಒಳ್ಳೆಯದು ಎಂದು ಹೇಳಿದ್ದಾರೆ.

ಜಿಪಂ, ತಾಪಂ ಚುನಾವಣೆಗೆ ಯಾವುದೇ ರೀತಿಯ ಸುತ್ತೋಲೆ ಹೊರಬಿದ್ದಿಲ್ಲ. ಹಾಗಾಗಿ ಆ ಚುನಾವಣೆ ಮುಂದೂಡಬಹುದು. ಆದರೆ ಕಸಾಪ ಚುನಾವಣೆಗೆ ಆಯೋಗ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಸರ್ಕಾರ, ಸಹಕಾರಇಲಾಖೆಯಲ್ಲಿರುವ ಚುನಾವಣಾ ಆಯೋಗದಿಂದ ಯಾವುದೇ ರೀತಿಯ ಸೂಚನೆ ಬಂದಿಲ್ಲ. ಹೀಗಾಗಿ ಚುನಾವಣಾ ಸಿದ್ಧತೆ ಅಂತಿಮ ಹಂತಕ್ಕೆ ಬಂದಿದೆ. ಎಸ್‌.ಟಿ. ಮೋಹನ್‌ರಾಜ್‌, ವಿಶೇಷ ಚುನಾವಣಾಧಿಕಾರಿ

ಕೋವಿಡ್‌ ಸೋಂಕಿನ ಪ್ರಮಾಣ ದಿನೇದಿನೆ ಅಧಿಕವಾಗುತ್ತಿದೆ. ಹೀಗಾಗಿ ಚುನಾವಣಾಧಿಕಾರಿಗಳು ಯಾವ ತೀರ್ಮಾನ ಕೈಗೊಳ್ಳುತ್ತಾರೋ ಆ ತೀರ್ಮಾನಕ್ಕೆ ಬದ್ಧ. ವ.ಚ.ಚನ್ನೇಗೌಡ, ಕಸಾಪ ರಾಜ್ಯಾಧ್ಯಕ್ಷ ಸ್ಥಾನದ ಅಭ್ಯರ್ಥಿ

ಈಗಾಗಲೇ ಕೋವಿಡ್‌ ನಿಯಮಗಳನ್ನು ಅನುಸರಿಸಿ ರಾಜ್ಯದಲ್ಲಿ ಉಪಚುನಾವಣೆಗಳು ನಡೆದಿದೆ. ಅದೇ ರೀತಿ ಪರಿಷತ್ತಿನ ಚುನಾವಣೆ ನಡೆಯಬೇಕು. ಯಾವುದೇ ಕಾರಣಕ್ಕೂ ಚುನಾವಣೆ ಮುಂದೂಡಬಾರದು.ಶೇಖರ್‌ಗೌಡ ಮಾಲಿಪಾಟೀಲ್‌, ಕಸಾಪ ರಾಜ್ಯಾಧ್ಯಕ್ಷ ಸ್ಥಾನದ ಅಭ್ಯರ್ಥಿ

 

ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Langoti Man Movie Review

Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.