ಪರಪ್ಪನ ಅಗ್ರಹಾರದ ಸುತ್ತಲು ಫೋನ್ ನೆಟ್ವರ್ಕ್ ಸಿಗಲ್ಲ,ಜೈಲಿನಲ್ಲಿ ಮಾತ್ರ ಹೇಗೆ ಸಿಗುತ್ತೆ?
Team Udayavani, Aug 27, 2024, 11:41 AM IST
ಬೆಂಗಳೂರು: ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ಆರೋಪಿ ನಟ ದರ್ಶನ್ಗೆ ವಿಶೇಷ ಆತಿಥ್ಯ ನೀಡಿರುವ ವಿಚಾರಕ್ಕೆ ಸ್ಥಳೀಯ ನಿವಾಸಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾರಾಗೃಹದ ಸುತ್ತಮುತ್ತಲ ಬಡಾವಣೆಗಳಲ್ಲಿ ನೆಟ್ವರ್ಕ್ ಸಿಗದೆ ಮೊಬೈಲ್ ಕರೆ ಮಾಡಲು ಸಾಧ್ಯವಾ ಗುತ್ತಿಲ್ಲ. ನೆಟ್ವರ್ಕ್ ಸಮಸ್ಯೆ ಬಗ್ಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಆದರೆ, ಕೇಂದ್ರ ಕಾರಾಗೃಹದಲ್ಲಿ ಮೊಬೈಲ್ ಜಾಮರ್ ಅಳವಡಿಸಿದರೂ ಕೈದಿಗಳು ಹೇಗೆ ಮೊಬೈಲ್ನಲ್ಲಿ ಮಾತನಾಡುತ್ತಾರೆ. ಅವರಿಗೆ ಸಿಗುವ ನೆಟ್ವರ್ಕ್ ನಮಗೆ ಯಾಕೆ ಸಿಗುವುದಿಲ್ಲ ಎಂದು ಸ್ಥಳೀಯರು ಕಿಡಿಕಾರಿದ್ದಾರೆ.
ಸ್ಥಳೀಯ ನಿವಾಸಿ ಲಕ್ಷ್ಮಣ್ ಎಂಬುವರು ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಕಾರಾಗೃಹದಲ್ಲಿ ಬೇಲಿಯೇ ಎದ್ದು ಹೊಲ ಮೇಯುತ್ತಿದೆ. ಕೈದಿಗಳ ಕಳ್ಳಾಟಕ್ಕೆ ಕಾರಾಗೃಹದ ಅಧಿಕಾರಿಗಳು, ಸಿಬ್ಬಂದಿ ಸಹಕಾರ ನೀಡುತ್ತಿದ್ದಾರೆ. ನಮಗೆ ಇಲ್ಲಿ ಮೊಬೈಲ್ ನೆಟ್ವರ್ಕ್ ಸಿಗುವುದಿಲ್ಲ. ಆದರೆ, ಜೈಲಿನಲ್ಲಿ ಕೊಲೆ ಆರೋಪಿ ನಟ ದರ್ಶನ್, ರೌಡಿಗಳು ಮೊಬೈಲ್ ಬಳಸುತ್ತಾರೆ. ಕಾಫಿ ಕುಡಿ ಯುತ್ತಾ, ಸಿಗರೆಟ್ ಸೇದುತ್ತಾ ಆರಾಮವಾಗಿದ್ದಾರೆ. ಕಾರಾಗೃಹದಲ್ಲಿ ಕೈದಿಗಳು ಐಷಾರಾಮಿ ಜೀವನ ನಡೆಸುತ್ತಿದ್ದಾರೆ. ದುಡ್ಡು ಇದ್ದರೆ ಕಾರಾಗೃಹದಲ್ಲಿ ಏನು ಬೇಕಾದರೂ ಸಿಗುತ್ತದೆ. ಈ ಬಗ್ಗೆ ಸರ್ಕಾರ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ
Bantwala: ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು
Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
Davanagere; ಪ್ಯಾಲೇಸ್ತೀನ್ ಬಾವುಟದ ಸ್ಟಿಕ್ಕರ್ ಅಂಟಿಸಿಕೊಂಡವರ ವಿರುದ್ಧ ಪ್ರಕರಣ ದಾಖಲು
Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.