![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 22, 2022, 11:53 AM IST
ಬೆಂಗಳೂರು: ಕಾರು ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ, ಫ್ಲೈಓವರ್ ಬಿದ್ದು, ಓರ್ವ ಸಾವನ್ನಪ್ಪಿದ್ದು, ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಜಕ್ಕೂರು ಏರೊಡ್ರಮ್ ಬಳಿ ಭಾನುವಾರ ಮುಂಜಾನೆ ನಡೆದಿದೆ.
ಬೆಂಗಳೂರು ಮೂಲದ ಗೋವಿಂದಪ್ಪ(45) ಮೃತ ದುರ್ದೈವಿ. ಬಾಲಕ ಸಂಜಯ್ (11) ಗಂಭೀರವಾಗಿ ಗಾಯಗೊಂಡಿದ್ದಾನೆ.
ಗೋವಿಂದಪ್ಪ ಅವರ ಮನೆಗೆ ಪತ್ನಿಯ ತಂಗಿ ಮಗ ಸಂಜಯ್ ಬಂದಿದ್ದ. ಈ ವೇಳೆ ಸಂಜಯ್ಗೆ ಜಕ್ಕೂರು ಏರೋಡ್ರಮ್ ತೋರಿಸಲು ಬಂದಿದ್ದರು. ಏರ್ಪೋರ್ಟ್ ಫ್ಲೈಓವರ್ ಮೇಲೆ ಮೊಪೆಡ್ ಬೈಕ್ ನಿಲ್ಲಿಸಿ, ಏರೋಡ್ರಮ್ ತೋರಿಸುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಮೊಪೆಡ್ ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ಗೋವಿಂದಪ್ಪ ಫ್ಲೈ ಓವರ್ ಮೇಲಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಬಾಲಕ ಸಂಜಯ್ ಗಂಭೀರ ಗಾಯಗೊಂಡು, ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಇದನ್ನೂ ಓದಿ:ಮರಕ್ಕೆ ಢಿಕ್ಕಿ ಹೊಡೆದ ಕಾರು: ಗೋವಾದಲ್ಲಿ ಬೆಳಗಾವಿ ಮೂಲದ ಮೂವರು ಸಾವು
ಕಾರು ಟಿವಿಎಸ್ ಎಕ್ಸ್ಎಲ್ ಮೊಪೆಡ್ ಢಿಕ್ಕಿ ಹೊಡೆದು, ಟಿವಿಎಸ್ ಕಾರಿಗೆ ಸಿಲುಕಿಕೊಂಡಿದ್ದರೂ ಕಾರಿನ ಚಾಲಕ ಕಾರನ್ನು ನಿಲ್ಲಿಸದೆ ಸುಮಾರು 150 ಮೀಟರ್ ದೂರದವರೆಗೆ ಎಳೆದುಕೊಂಡು ಹೋಗಿದ್ದಾನೆ. ಬಳಿಕ ಉದ್ದೇಶಪೂರ್ವಕವಾಗಿ ಪರಾರಿಯಾಗಲು ಯತ್ನಿಸಿ, ಸುಮಾರು 4 ರಿಂದ 5 ಕಿಮೀ ದೂರ ಹೋಗುತ್ತಿದ್ದ ವೇಳೆ ಸಾರ್ವಜನಿಕರು ಆತನನ್ನು ಹಿಡಿದು, ಪೊಲೀಸರಿಗೊಪ್ಪಿಸಿದ್ದಾರೆ.
ಯಲಹಂಕ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕಾರು ಚಾಲಕ ವರುಣ್ ಎಂಬಾತನ್ನು ಪೊಲೀಸರು ಬಂಧಿಸಿದ್ದಾರೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.