ನಿವೃತ್ತ ಐಪಿಎಸ್‌ ಅಧಿಕಾರಿ ಸೇರಿ ನಾಲ್ವರ ವಿರುದ್ಧ ಕೇಸ್‌  


Team Udayavani, Feb 19, 2023, 3:14 PM IST

tdy-14

ಬೆಂಗಳೂರು: ಅನುಮತಿ ಪಡೆಯದೆ ಕ್ಲಬ್‌ನಲ್ಲಿ ಹಿಂದಿ ಹಾಡುಗಳನ್ನು ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಇಂದಿರಾನಗರ ಕ್ಲಬ್‌ ಹಾಗೂ ಅದರ ಅಧ್ಯಕ್ಷರಾದ ನಿವೃತ್ತ ಐಪಿಎಸ್‌ ಅಧಿಕಾರಿ ಬಿಎನ್‌ಎಸ್‌ ರೆಡ್ಡಿ ಸೇರಿ ನಾಲ್ವರ ವಿರುದ್ಧ ಇಂದಿರಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂಬೈ ಮೂಲದ ನೋವೆಕ್ಸ್‌ ಕಮ್ಯೂನಿಕೇಷನ್‌ ಪ್ರೈವೇಟ್‌ ಲಿಮಿಟೆಡ್‌ನ‌ ಪ್ರತಿನಿಧಿ ಸಂತೋಷ್‌ ಎಂಬುವರು ನೀಡಿದ ದೂರಿನ ಮೇರೆಗೆ ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಇಂದಿರಾನಗರ ಕ್ಲಬ್‌, ಅದರ ಅಧ್ಯಕ್ಷ ಬಿಎನ್‌ಎಸ್‌ ರೆಡ್ಡಿ, ಕಾರ್ಯದರ್ಶಿ ನಾಗೇಂದ್ರ, ಜನರಲ್‌ ಮ್ಯಾನೆಜರ್‌ ಶಾಮ್‌ ಸುಂದರ್‌ ವಿರುದ್ಧ ಪ್ರಕರಣ ದಾಖಲಾಗಿದೆ.

ನೋವೆಕ್ಸ್‌ ಕಮ್ಯೂನಿಕೇಷನ್ಸ್‌ ಪ್ರೈವೇಟ್‌ ಲಿಮಿಟೆಡ್‌ ಹಿಂದಿಯ ಬಾರ್‌ ಬಾರ್‌ ದೇಖೋ ಸಿನಿಮಾದ ಕಾಲಾ ಚಸ್ಮಾ, ಖಳನಾಯಕ್‌ ಚಿತ್ರದ ಚೋಲಿ ಕೆ ಪೀಚೆ, ಫ್ರಾಡ್‌ ಸೈಯ್ನಾ ಚಿತ್ರದ ಚಮ್ಮಾ ಚಮ್ಮಾ, ಆರ್‌.ರಾಜ್‌ಕುಮಾರ್‌ ಚಿತ್ರದ ಗಂಧೀ ಬಾತ್‌ ಹಾಡುಗಳನ್ನು ಯಾವುದೇ ಆಡಿಯೋ, ಸಭೆ ಸಮಾರಂಭ, ರೆಸ್ಟೋರೆಂಟ್‌, ಕ್ಲಬ್‌, ಡಿಸ್ಕೋಥೆಕ್‌, ಇವೆಂಟ್‌, ಜಾಕಿ ಮಾಲ್‌ಗ‌ಳಲ್ಲಿ ಹಾಡುವ ಅಥವಾ ಪ್ರಸಾರ ಮಾಡುವ ಅಧಿಕೃತ ಹಕನ್ನು ಈರೋಸ್‌, ಜೀ ಎಂಟರ್‌ಟ್ರೈನ್‌ಮೆಂಟ್‌, ಟಿಪ್ಸ್‌ ಕಂಪನಿಯಿಂದ ಪಡೆದಿದೆ.

ಆದರೆ 2019ರ ಮಾರ್ಚ್‌ 21ರಂದು ಇಂದಿರಾನಗರದ ಕ್ಲಬ್‌ ನಲ್ಲಿ ನಡೆದಿದ್ದ ಮಹೋಲಿ ಎಕ್ಸ್‌ ಡಿವೈನ್‌ 2019 ಕಾರ್ಯಕ್ರಮದಲ್ಲಿ ಈ ಹಾಡುಗಳನ್ನು ಪ್ರಸಾರ ಮಾಡಲಾಗಿದ್ದು, ಕಾಪಿರೈಟ್ಸ್‌ ಉಲ್ಲಂಘನೆ ಮಾಡಲಾಗಿದೆ. ಈ ಸಂಬಂಧ ಈ ಮೂವರು ಆರೋಪಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಸಂತೋಷ್‌ ಎಫ್ಐಆರ್‌ನಲ್ಲಿ ಉಲ್ಲೇಖೀಸಿದ್ದಾರೆ. ಮುಂದಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಇಂದಿರಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

army

J&K ; ಮತ್ತೆ ಉಗ್ರರ ಅಟ್ಟಹಾಸ: ದಾಳಿಯಲ್ಲಿ ನಾಗರಿಕ ಸಾ*ವು, ಹಲವು ಯೋಧರಿಗೆ ಗಾಯ

1-kutti

Mangaluru CCB: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊ*ಲೆ ಆರೋಪಿ ಬಂಧನ

court

Koppal; ಮರುಕುಂಬಿ ಪ್ರಕರಣ: 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

1-bharat

BJP; ಶಿಗ್ಗಾವಿಯಲ್ಲಿ ನಾಮಪತ್ರ ಸಲ್ಲಿಸಿದ ಭರತ್ ಬೊಮ್ಮಾಯಿ

1-congress

By Election; ಕೈ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಅನ್ನಪೂರ್ಣ

u

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಚೀನಾದಲ್ಲೂ ಭಾರತದ ಜ್ಞಾನದ ಕುರಿತು ಮಾಹಿತಿ ಇದೆ:ಭಾಟೇ

somashekar st

Karnataka BJP ; 8 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ..!; ಎಸ್.ಟಿ.ಸೋಮಶೇಖರ್ ಬಾಂಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBMP: ಬಿಬಿಎಂಪಿಯಲ್ಲಿ 2067 ಕೋಟಿ ರೂ. ಅಕ್ರಮ: ಎನ್‌.ಆರ್‌.ರಮೇಶ್‌

BBMP: ಬಿಬಿಎಂಪಿಯಲ್ಲಿ 2067 ಕೋಟಿ ರೂ. ಅಕ್ರಮ: ಎನ್‌.ಆರ್‌.ರಮೇಶ್‌

4

Kannada Pustaka Habba: ನಾಡಿದ್ದಿನಿಂದ ಡಿ.1ರವರೆಗೆ ಕನ್ನಡ ಪುಸ್ತಕ ಹಬ್ಬ

Blackmail: ಅಶ್ಲೀಲ ವಿಡಿಯೋ; ಅಕ್ಕನಿಂದ ತಂಗಿಯ ಬ್ಲ್ಯಾಕ್‌ಮೇಲ್ ‌

Blackmail: ಅಶ್ಲೀಲ ವಿಡಿಯೋ; ಅಕ್ಕನಿಂದ ತಂಗಿಯ ಬ್ಲ್ಯಾಕ್‌ಮೇಲ್ ‌

Bengaluru Rain: ದ್ವೀಪದಂತಾದ ಬಡಾವಣೆ, ಅಪಾರ್ಟ್‌ಮೆಂಟ್‌ಗಳು!

Bengaluru Rain: ದ್ವೀಪದಂತಾದ ಬಡಾವಣೆ, ಅಪಾರ್ಟ್‌ಮೆಂಟ್‌ಗಳು!

Bengaluru Rain: ರಾಜಧಾನಿಯ ಹಿಂಡಿ ಹಿಪ್ಪೆ ಮಾಡಿದ ಹಿಂಗಾರು  

Bengaluru Rain: ರಾಜಧಾನಿಯ ಹಿಂಡಿ ಹಿಪ್ಪೆ ಮಾಡಿದ ಹಿಂಗಾರು  

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

POlice

Udupi: 30ಕ್ಕೂ ಮೊಬೈಲ್‌ಪೋನ್‌ಗಳು ಮರಳಿ ಮಾಲಕರ ಮಡಿಲಿಗೆ

complaint

Kasaragod: ಸಚಿತಾ ರೈ ವಿರುದ್ಧ ಇನ್ನೆರಡು ಕೇಸು ದಾಖಲು

army

J&K ; ಮತ್ತೆ ಉಗ್ರರ ಅಟ್ಟಹಾಸ: ದಾಳಿಯಲ್ಲಿ ನಾಗರಿಕ ಸಾ*ವು, ಹಲವು ಯೋಧರಿಗೆ ಗಾಯ

13

Siddapura: ಅಂಪಾರು ಮನೆ ಕಳವು; 24 ತಾಸಿನಲ್ಲಿ ಆರೋಪಿ ಸೆರೆ

15

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ; ಪ್ರಗತಿಯತ್ತ ದಾಪುಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.