ಸಾರ್ವಜನಿಕರ ಆಸ್ತಿ ಕಬಳಿಸುತ್ತಿದ್ದ ಮೋಸಸ್ ಗ್ಯಾಂಗ್ ವಿರುದ್ಧ ಕೋಕಾಸ್ತ್ರ
Team Udayavani, Jul 23, 2024, 11:07 AM IST
ಬೆಂಗಳೂರು: ನಗರ ಹಾಗೂ ಹೊರವಲಯದ ಪ್ರದೇಶ ಗಳಲ್ಲಿ ನಕಲಿ ದಾಖಲೆ ಸೃಷ್ಟಿಸಿ ಅಮಾಯಕರ ಆಸ್ತಿ ಕಬಳಿಸುತ್ತಿದ್ದ ಕುಖ್ಯಾತ ವಂಚಕ ಜಾನ್ ಮೋಸಸ್ ಹಾಗೂ ಆತನ ಸಹಚರರ ವಿರುದ್ಧ ಸಿಐಡಿ ಪೊಲೀಸರು ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೋಕಾ) ಪ್ರಯೋಗಿಸಿದ್ದಾರೆ.
ನಿವೇಶನವೊಂದರ ಸಂಬಂಧ ನಕಲಿ ದಾಖಲೆ ಸೃಷ್ಟಿಸಿ, ನ್ಯಾಯಾಲಯಕ್ಕೆ ಸುಳ್ಳು ಮಾಹಿತಿ ನೀಡಿ ಡಿಕ್ರಿ ಪಡೆದುಕೊಂಡಿದ್ದ ಆರೋಪದ ಮೇರೆಗೆ ಲಘುವ್ಯವಹಾರಗಳ ನ್ಯಾಯಾಲಯದ ರಿಜಿಸ್ಟ್ರಾರ್ 2020ರಲ್ಲಿ ಈ ಜಾನ್ ಮೋಸಸ್ ಹಾಗೂ ಸಹಚರರ ವಿರುದ್ಧ ಹಲಸೂರುಗೇಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ಈ ಪ್ರಕರಣವನ್ನು ಸಿಐಡಿ ವರ್ಗಾವಣೆ ಮಾಡಲಾಗಿತ್ತು. ತನಿಖೆ ವೇಳೆ ಈ ಗ್ಯಾಂಗ್ 100ಕ್ಕೂ ಅಧಿಕ ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದೆ ಎಂಬುದು ಪತ್ತೆಯಾಗಿತ್ತು. ಈ ಪ್ರಕರಣಗಳು ಸಿಐಡಿಗೆ ವರ್ಗಾವಣೆಯಾಗಿದ್ದವು. ಈ ಪೈಕಿ 51 ಪ್ರಕರಣಗಳ ತನಿಖೆ ಪೂರ್ಣಗೊಳಿಸಿದ್ದ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ಉಳಿದ ಪ್ರಕರಣಗಳು ತನಿಖೆ ಹಂತದಲ್ಲಿವೆ.
ಈ ವಂಚಕರ ಗ್ಯಾಂಗ್ ಸಂಘಟಿತ ತಂಡ ಕಟ್ಟಿಕೊಂಡು ಬಡಜನರ ನಿವೇಶನ ಹಾಗೂ ಮನೆಗಳನ್ನು ಕಬಳಿಸಿರುವುದು ಮತ್ತು ಸ್ವತ್ತಿನ ಮೂಲ ಮಾಲೀಕರನ್ನು ಬೆದರಿಸಿ ಕೋಟ್ಯಂತರ ರೂ. ಸುಲಿಗೆ ಮಾಡಿರುವುದು ತನಿಖೆಯಲ್ಲಿ ಸಾಬೀತಾಗಿದೆ. ಹೀಗಾಗಿ ಈ ಗ್ಯಾಂಗ್ ವಿರುದ್ಧ ಸಿಐಡಿ ಅಧಿಕಾರಿಗಳು ಕೋಕಾ ಕಾಯ್ದೆ ಅಡಿ ಹೆಚ್ಚುವರಿ ಪ್ರಕರಣ ದಾಖಲಿಸಿದ್ದಾರೆ. ಗ್ಯಾಂಗ್ನ ಮುಖ್ಯಸ್ಥ ಜಾನ್ ಮೋಸಸ್ ಸಿಐಡಿ ವಶದಲ್ಲಿದ್ದು, ತನಿಖೆ ಮುಂದುವರಿದಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು
Bengaluru: ನಗರದಲ್ಲಿ ಏಕಕಾಲಕ್ಕೆ 200 ಗಣೇಶ ಮೂರ್ತಿಗಳ ಮೆರವಣಿಗೆ
Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್ಗಳು ಪತ್ತೆ
Bengaluru: ಚಿನ್ನಾಭರಣ ಮಳಿಗೆಯಲ್ಲಿ ತಡರಾತ್ರಿ ದುಷ್ಕರ್ಮಿಗಳಿಂದ ಕಳವಿಗೆ ಯತ್ನ
BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.