![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 13, 2019, 3:00 AM IST
ಬೆಂಗಳೂರು: ಸರ್ಕಾರಿ ಖಜಾನೆಗೆ ಜಮೆ ಮಾಡಬೇಕಾದ 9 ಲಕ್ಷಕ್ಕೂ ಹೆಚ್ಚು ಹಣವನ್ನು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ 9 ಖಾಸಗಿ ಖಾತೆಗಳಿಗೆ ಜಮೆ ಮಾಡಿದ ಆರೋಪದ ಮೇಲೆ ಪ್ರಧಾನ ಅಂಚೆ ಕಚೇರಿಯ ಪೋಸ್ಟಲ್ ಅಸಿಸ್ಟೆಂಟ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ವಂಚನೆ ಆರೋಪದಡಿ ಪ್ರಕರಣ ದಾಖಲಾಗಿದೆ.
ಪ್ರಧಾನ ಅಂಚೆ ಕಚೇರಿಯ ಅಸಿಸ್ಟೆಂಟ್ ಸೂಪರಿಡೆಂಟ್ ಬಿ.ಜಿ.ತಿಮ್ಮೊàಜಿರಾವ್ ಅವರು ನೀಡಿದ ದೂರಿನ ಆಧಾರದ ಮೇಲೆ ಅದೇ ಕಚೇರಿಯ ಖಜಾನೆ-2ರಲ್ಲಿ ಪೋಸ್ಟಲ್ ಅಸಿಸ್ಟೆಂಟ್ ಆಗಿ ಕರ್ತವ್ಯನಿರ್ವಹಿಸುತ್ತಿರುವ ಎ.ವಿ.ಶ್ರೀನಿವಾಸರೆಡ್ಡಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಶ್ರೀನಿವಾಸರೆಡ್ಡಿಗೆ ರಾಜ್ಯ ಸರ್ಕಾರದ ಹಣವನ್ನು ಇಎಂಒ (ಎಲೆಕ್ಟ್ರಾನಿಕ್ ಮನಿ ಆರ್ಡರ್) ಮೂಲಕ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಕಳುಹಿಸುವುದು ಮತ್ತು ಫಲಾನುಭವಿಗಳಿಗೆ ಪಾವತಿಯಾಗದೆ ವಾಪಸ್ ಬಂದ ಹಣವನ್ನು ಪುನಃ ರಾಜ್ಯ ಸರ್ಕಾರದ ಖಜಾನೆಗೆ ಜಮಾ ಮಾಡುವ ಹೊಣೆ ನೀಡಲಾಗಿದೆ.
ಆದರೆ, ಆರೋಪಿ ರೆಡ್ಡಿ ಮೇ 6ರಂದು 9,16,750 ರೂ. ಮೊತ್ತದ ಚೆಕ್ ಅನ್ನು ಸರ್ಕಾರದ ಖಾತೆಗೆ ಜಮೆ ಮಾಡುವ ಬದಲು, ಸುಳ್ಳು ದಾಖಲೆಗಳನ್ನು ಸೃಷ್ಟಿಸಿಕೊಂಡು 9 ಖಾಸಗಿ ಖಾತೆಗಳಿಗೆ ಹಾಕಿಕೊಂಡು ಸರ್ಕಾರಕ್ಕೆ ಮೋಸ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಅಲ್ಲದೆ, ಅದೇ ರೀತಿಯ ಇತರೆ ವ್ಯವಹಾರಗಳಲ್ಲಿ ಭಾಗಿಯಾಗಿರುವ ಅನುಮಾನವಿದೆ. ಹೀಗಾಗಿ ಶ್ರೀನಿವಾಸರೆಡ್ಡಿ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಬಿ.ಜಿ.ತಿಮ್ಮೊàಜಿರಾವ್ ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.