Cauvery Water: ತಿಂಗಳೊಳಗೆ ಬರಲಿದೆ ಕಾವೇರಿ 5ನೇ ಹಂತದ ನೀರು


Team Udayavani, Aug 21, 2024, 10:59 AM IST

Cauvery  Water: ತಿಂಗಳೊಳಗೆ ಬರಲಿದೆ ಕಾವೇರಿ 5ನೇ ಹಂತದ ನೀರು

ಬೆಂಗಳೂರು: ರಾಜಧಾನಿ ಬೆಂಗಳೂರಿನ 110 ಹಳ್ಳಿಗಳಿಗೆ ಕಾವೇರಿ ನೀರು ಹರಿಸುವ ಉದ್ದೇಶದಿಂದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಕೈಗೊಂಡಿರುವ 5ನೇ ಹಂತದ ಯೋಜ ನೆಯ ಕಾಮಗಾರಿ ಮುಕ್ತಾಯಗೊಂಡಿದೆ.

ಇದೀಗ ಅಂತಿಮ ಹಂತದಲ್ಲಿ ಪ್ರಾಯೋಗಿಕವಾಗಿ ನೀರು ಹರಿಸಿ ಕೊಳವೆ ಪರೀಕ್ಷೆ (ಟೆಸ್ಟಿಂಗ್‌) ಕಾರ್ಯ ಭರದಿಂದ ಸಾಗಿದೆ. ಕಾವೇರಿ 5ನೇ ಹಂತದ ಯೋಜನೆಯ ಕಾಮಗಾ ರಿಯು ಕೊನೆಗೂ ಮುಕ್ತಾಯಗೊಂಡಿದ್ದು, ಕೊಳವೆಗಳ ಟೆಸ್ಟಿಂಗ್‌ ಕಾರ್ಯ ಮುಗಿಯುತ್ತಿದ್ದಂತೆ 110 ಹಳ್ಳಿಗಳಿಗೆ ಕಾವೇರಿ ಹರಿದು ಬರಲಿದ್ದಾಳೆ. ಸೆಪ್ಟೆಂಬರ್‌ 2ನೇ ವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಯೋಜನೆಗೆ ಚಾಲನೆ ನೀಡುವ ಸಾಧ್ಯತೆಗಳಿವೆ. ಇನ್ನೂ ಸೂಕ್ತ ದಿನಾಂಕ ನಿಗದಿಯಾಗಿಲ್ಲ. ಸದ್ಯ ಕಿಲೋಮೀಟರ್‌ ಲೆಕ್ಕದಲ್ಲಿ ಪ್ರತಿದಿನ ಜಲಮಂಡಳಿ ಅಧಿಕಾರಿಗಳು ಹಂತ-ಹಂತ ವಾಗಿ ನೀರಿನ ಕೊಳವೆಗಳನ್ನು ಪರಿಶೀಲಿಸುತ್ತಿದ್ದಾರೆ.

ಕೊಳವೆ ಟೆಸ್ಟಿಂಗ್‌ ಹೇಗೆ?: ನಗರದ ಟಿ.ಕೆ.ಹಳ್ಳಿಯಲ್ಲಿರುವ ಮೊದಲ ಪಂಪಿಂಗ್‌ ಸ್ಟೇಷನ್‌ನಿಂದ ಹಾರೋಹಳ್ಳಿಯ 2ನೇ ಪಂಪಿಂಗ್‌ ಸ್ಟೇಷನ್‌ವರೆಗೆ ಕಾವೇರಿ ನೀರು ಹರಿಸಲಾಗಿದೆ. ಹಾರೋಹಳ್ಳಿಯಿಂದ ತಾತಗುಣಿ ಯಲ್ಲಿರುವ 3ನೇ ಪಂಪಿಂಗ್‌ ಸ್ಟೇಷನ್‌ಗೆ ನೀರು ಹರಿಸುವ ಕೆಲಸ ನಡೆಯುತ್ತಿದೆ. ಕಾವೇರಿ ನದಿಯಿಂದ ಪಂಪಿಂಗ್‌ ಸ್ಟೇಷನ್‌ಗಳಿಗೆ ಸಂಪರ್ಕಿಸಿ ರುವ ಬೃಹತ್‌ ಆಕಾರದ ಕೊಳವೆಗಳಲ್ಲಿ ಏನಾದರೂ ಸಮಸ್ಯೆ ಇದೆಯಾ ಅಥವಾ ಸರಾಗವಾಗಿ ನೀರು ಹರಿದು ಹೋಗಲಿವೆಯಾ ಎಂಬುದನ್ನು ಪರೀಕ್ಷಿಸುವ ಉದ್ದೇಶದಿಂದ ಪ್ರಾಯೋಗಿಕವಾಗಿ ಕೈಗೊಂಡಿದ್ದ ನೀರು ಹರಿಸುವ ಕಾರ್ಯ ಮುಕ್ತಾಯಗೊಂಡಿದೆ. ಇದೀಗ ಹೆಚ್ಚಿನ ಒತ್ತಡದಲ್ಲಿ ವೇಗವಾಗಿ (ಪ್ರಜರ್‌) ನೀರನ್ನು ಹರಿಸಿ ಕೊಳವೆಗಳಲ್ಲಿ ಸೋರಿಕೆ ಇವೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ.

ಬಹುತೇಕ ಕಡೆ ಕೊಳವೆಗಳು ಸರಿಯಾಗಿವೆ: 110 ಹಳ್ಳಿಗಳಿಗೆ ಅಳವಡಿಸಿರುವ ನೂರಾರು ಕಿಲೋ ಮೀಟರ್‌ ಉದ್ದದ ಕೊಳವೆಗಳನ್ನು ಹಂತ-ಹಂತವಾಗಿ ಪರೀಕ್ಷಿಸಲಾಗುತ್ತಿದೆ. ಬಹುತೇಕ ಕಡೆ ಕೊಳವೆಗಳಲ್ಲಿ ಯಾವುದೇ ಸಮಸ್ಯೆಗಳು ಕಂಡು ಬಂದಿಲ್ಲ. ನೀರು ಹರಿಸಲು ಯೋಗ್ಯವಾಗಿದೆ ಎಂದು ಎಂಜಿನಿಯರ್‌ ಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದರ ಜೊತೆಗೆ ನೀರಿನ ಕೊಳವೆಗಳಿಗೆ ಅಳವಡಿಸಿರುವ ವಾಲ್ಸ್‌ಗಳು ಸಡಿಲಗೊಂಡಿವೆಯೇ, ನೀರು ಹರಿಯುವಿಕೆ ಸರಾಗ ವಾಗಿವೆಯೇ, ಪೈಪ್‌ ಹಾನಿಯಾದ ಕೆಲವು ಕಡೆ ಅನ್ನು ಕೂಡಲೇ ರಿಪೇರಿ ಪಡಿಸುವುದು ಸೇರಿದಂತೆ ತಾಂತ್ರಿಕ (ಟೆಕ್ನಿಕಲ್‌) ವಿಚಾರಕ್ಕೆ ಸಂಬಂಧಿಸಿದ ಅಂಶಗಳ ಕುರಿತು ಪರಿಶೀಲನೆ ಅಂತಿಮ ಹಂತದಲ್ಲಿದೆ. ಲೋಪ ಗಳು ಕಂಡು ಬಂದಲೆಲ್ಲ ಅದನ್ನು ಕೂಡಲೇ ಬಗೆಹರಿ ಸಲಾಗಿದೆ ಎಂದು ಜಲಮಂಡಳಿ ಮೂಲಗಳು ತಿಳಿಸಿವೆ.

ನೀರಿನ ಸಂಪರ್ಕ ಪಡೆಯಲು ಹಿಂದೇಟು: ಕಾವೇರಿ 5ನೇ ಹಂತದ ಯೋಜನೆಯ ಮೂಲಕ ಒಟ್ಟು 775 ಎಂಎಲ್‌ಡಿ ಕಾವೇರಿ ನೀರನ್ನು ಬೆಂಗಳೂರಿನ 110 ಹಳ್ಳಿಗಳಿಗೆ ಹರಿಸುವ ಸಾಮರ್ಥ್ಯವಿದೆ. 110 ಹಳ್ಳಿಗಳಲ್ಲಿ 3.50 ಲಕ್ಷ ಕಡೆ ಕಾವೇರಿ ನೀರಿನ ಸಂಪರ್ಕ ಕಲ್ಪಿಸಲು ಅವಕಾಶಗಳಿದ್ದರೂ, ಇದುವರೆಗೆ ಕೇವಲ 55 ಸಾವಿರ ಪ್ರದೇಶಗಳಲ್ಲಿ ಮಾತ್ರ ಕಾವೇರಿ 5ನೇ ಹಂತದ ಯೋಜನೆಯ ಸಂಪರ್ಕ ಅಳವಡಿಸಲಾಗಿದೆ. ಹೀಗಾಗಿ 775 ಎಂಎಲ್‌ಡಿ ಕಾವೇರಿ ನೀರು ತರಿಸಿದರೆ ಬಳಕೆ ಮಾಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಅಗತ್ಯಕ್ಕೆ ತಕ್ಕಷ್ಟು ನೀರನ್ನು ಪೂರೈಕೆ ಮಾಡಲು ಜಲಮಂಡಳಿಯು ನಿರ್ಧರಿಸಿದೆ.

ಕಾವೇರಿ ನೀರಿನ ಸೌಲಭ್ಯ ಪಡೆಯುವ ಅವಕಾಶಗಳಿದ್ದರೂ 3 ಲಕ್ಷ ಕುಟುಂಬಗಳು ಬೋರ್‌ ವೆಲ್‌ ನೀರನ್ನೇ ಆಶ್ರಯಿಸಲು ಹೆಚ್ಚಿನ ಒಲವು ತೋರುತ್ತಿದೆ. ಈ ಪ್ರದೇಶಗಳಿಗೆ ಸರ್ಕಾರವು ಉಚಿತವಾಗಿ ಬೋರ್‌ವೆಲ್‌ ನೀರನ್ನು ಹರಿಸುತ್ತಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದೆ.

5ನೇ ಹಂತದ ಯೋಜನೆಯ ಕಾಮಗಾರಿ ಪೂರ್ಣಗೊಂಡಿದ್ದು, ಸದ್ಯ ಅಂತಿಮ ಹಂತದಲ್ಲಿ ಪರೀಕ್ಷಿಸುವ ಕಾರ್ಯಗಳು ನಡೆಸಲಾಗುತ್ತಿದೆ. ಆ ವೇಳೆ ಯಾವುದೇ ಸಮಸ್ಯೆಗಳು ಕಂಡು ಬಂದರೆ ಅದನ್ನು ಬಗೆಹರಿಸಲಾಗುವುದು. ಶೀಘ್ರದಲ್ಲೇ ಯೋಜನೆಗೆ ಚಾಲನೆ ನೀಡಲು ಸಿದ್ಧತೆಗಳು ಭರದಿಂದ ಸಾಗಿದೆ. ಡಾ.ವಿ.ರಾಮ್‌ ಪ್ರಸಾತ್‌ ಮನೋಹರ್‌, ಜಲಮಂಡಳಿ ಅಧ್ಯಕ್ಷ

ಟಾಪ್ ನ್ಯೂಸ್

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

7-bng

Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.