ಪ್ರಧಾನಿ ಓಡಾಡಿದ ರಸ್ತೆ ಗುಣಮಟ್ಟ ಪರಿಶೀಲಿಸಿ


Team Udayavani, Oct 11, 2022, 1:40 PM IST

ಪ್ರಧಾನಿ ಓಡಾಡಿದ ರಸ್ತೆ ಗುಣಮಟ್ಟ ಪರಿಶೀಲಿಸಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನಗರಕ್ಕೆ ಆಗಮಿಸಿದಾಗ ಮಾಡಲಾಗಿದ್ದ ರಸ್ತೆ ದುರಸ್ತಿ ಕಾಮಗಾರಿಯ ಗುಣಮಟ್ಟ ಪರಿಶೀಲಿಸುವಂತೆ ರಾಜ್ಯ ಸರ್ಕಾರವು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚಿಸಿ ದೆ. ಅದರ ಜತೆಗೆ ಕಲಂ 4ಜಿ ಅಡಿಯಲ್ಲಿ ಕಾಮಗಾರಿ ಮೊತ್ತ ಬಿಡುಗಡೆ ಮಾಡುವಂತೆಯೂ ತಿಳಿಸಿದೆ.

ವಿವಿಧ ಕಾಮಗಾರಿಗಳ ಅನುಷ್ಠಾನಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಕಳೆದ ಜೂನ್‌ನಲ್ಲಿ ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ನಗರದ 14 ಕಿ.ಮೀ. ಉದ್ದದ ರಸ್ತೆಯನ್ನು ದುರಸ್ತಿ ಮಾಡಿ ಮರು ಡಾಂಬರೀಕರಣ ಮಾಡಲಾಗಿತ್ತು. ಅದರಲ್ಲಿ ಕೊಮ್ಮಘಟ್ಟ ವ್ಯಾಪ್ತಿಯಲ್ಲಿ ಮಾಡಲಾಗಿದ್ದ ದುರಸ್ತಿ ಕಾಮಗಾರಿ ಪ್ರಧಾನಿ ನಗರಕ್ಕೆ ಬಂದು ಹೋದ ಮರುದಿನವೇ ಕಿತ್ತು ಹೋಗಿ ಕಳಪೆ ಕಾಮಗಾರಿ ಎಂಬ ಆರೋಪ ಕೇಳಿಬಂದಿತ್ತು. ಇದೀಗ ಆ ಕಾಮಗಾರಿಗೆ ಸಂಬಂಧಿಸಿದಂತೆ ಗುಣಮಟ್ಟ ಪರಿಶೀಲನೆಗೆ ರಾಜ್ಯ ಸರ್ಕಾರ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚಿಸಿದೆ.

14 ಕಿ.ಮೀ.ನಲ್ಲಿ 7 ಕಿ.ಮೀ.ಗಷ್ಟೇ ಬಿಲ್‌ ಪಾವತಿ: ಮೋದಿ ನಗರಕ್ಕಾಗಮಿಸಿದ ಸಂದರ್ಭದಲ್ಲಿ 23.5 ಕೋಟಿ ರೂ. ವೆಚ್ಚದಲ್ಲಿ 14 ಕಿ.ಮೀ. ಉದ್ದದ ರಸ್ತೆಯನ್ನು ದುರಸ್ತಿ ಮಾಡಲಾಗಿತ್ತು. ಬಳ್ಳಾರಿ ರಸ್ತೆ, ಮೈಸೂರು ರಸ್ತೆ, ಬೆಂಗಳೂರು ವಿವಿ ರಸ್ತೆ, ತುಮಕೂರು ರಸ್ತೆ ಹಾಗೂ ಕೊಮ್ಮಘಟ್ಟ ರಸ್ತೆಯನ್ನು ದುರಸ್ತಿ ಮಾಡಲಾಗಿತ್ತು. ಇದರಲ್ಲಿ ಕೊಮ್ಮಘಟ್ಟ ವ್ಯಾಪ್ತಿಯ ರಸ್ತೆಯಲ್ಲಿ ಗುಂಡಿ ಕಾಣಿಸಿಕೊಂಡಿತ್ತು. ಇದೀಗ ಅದೇ ರಸ್ತೆಯ ಕಾಮಗಾರಿಗೆ 4ಜಿ ಅಡಿಯಲ್ಲಿ ವಿನಾಯಿತಿ ಪಡೆದು ಬಿಲ್‌ ಪಾವತಿಸುವಂತೆ ನಗರಾಭಿವೃದ್ಧಿ ಇಲಾಖೆ ಬಿಬಿಎಂಪಿಗೆ ಸೂಚಿಸಿದೆ. ಅದು ಕೂಡ ಅಮೃತ ನಗರೋತ್ಥಾನ ಅನುದಾನದಲ್ಲಿ ಮುಖ್ಯ ಮಂತ್ರಿಗಳ ವಿವೇಚನಾ ಕಾಮಗಾರಿಗಾಗಿ ಮೀಸಲಿ ಟ್ಟಿರುವ 40 ಕೋಟಿ ರೂ. ಅನುದಾನದಲ್ಲಿ 11.5 ಕೋಟಿ ರೂ.ಗಳನ್ನು ಗುತ್ತಿಗೆದಾರರಿಗೆ ಪಾವತಿಸುವಂತೆ ಸೂಚಿಸಲಾಗಿದೆ.

ಗುಂಡಿ ಬಿದ್ದ ರಸ್ತೆಗೆ 1 ಕೋಟಿ ರೂ. ನಿಗದಿ : ಕೊಮ್ಮಘಟ್ಟ ಮುಖ್ಯರಸ್ತೆ ವ್ಯಾಪ್ತಿಯಲ್ಲಿ 8 ಕಡೆ ರಸ್ತೆಗೆ ಮರು ಡಾಂಬರೀಕರಣ ಮಾಡಲಾಗಿತ್ತು. ಅದರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಿಂದ ಕೆಂಗೇರಿ ಹೊರವರ್ತುಲ ರಸ್ತೆವರೆಗಿನ ಮರಿಯಪ್ಪನಪಾಳ್ಯ ರಸ್ತೆಯಲ್ಲಿ ಮಾಡಲಾಗಿದ್ದ ಡಾಂಬರೀಕರಣ ಒಂದೇ ದಿನಕ್ಕೆ ಕಿತ್ತು ಬಂದಿತ್ತು. ಹೀಗಿದ್ದರೂ, ಆ ರಸ್ತೆಗೆ 1 ಕೋಟಿ ರೂ. ಬಿಲ್‌ ಮೊತ್ತ ನಿಗದಿ ಮಾಡಲಾಗಿದೆ. ಆ ಮೊತ್ತವನ್ನು ಪಾವತಿಸುವಂತೆ ನಗರಾಭಿವೃದ್ಧಿ ಇಲಾಖೆ ತನ್ನ ಆದೇಶದಲ್ಲಿ ಉಲ್ಲೇಖೀಸಿದೆ.

ಗುಣಮಟ್ಟ ತಪಾಸಣೆ ನಡೆಸಿ, ವರದಿ ಸಿದ್ಧಪಡಿಸಿ : ಕಾಮಗಾರಿ ನಡೆದು 4 ತಿಂಗಳಾಗುತ್ತಿದ್ದು, ಕಾಮಗಾರಿ ನಡೆದ ಎರಡೇ ದಿನದಲ್ಲಿ ರಸ್ತೆ ಕಿತ್ತು ಬಂದು ಹಾಳಾದಾಗ ಯಾವುದೇ ಕ್ರಮ ಕೈಗೊಳ್ಳದ ನಗರಾಭಿವೃದ್ಧಿ ಇಲಾಖೆ ಇದೀಗ ಬಿಲ್‌ ಪಾವತಿ ವೇಳೆ ರಸ್ತೆ ಗುಣಮಟ್ಟ ಪರಿಶೀಲಿಸುವಂತೆ ಬಿಬಿಎಂಪಿಗೆ ಸೂಚನೆ ನೀಡಿದೆ. ಪ್ರಮುಖವಾಗಿ ಬಿಲ್‌ ಪಾವತಿ ಮಾಡಲಾಗುತ್ತಿರುವ ಕಾಮಗಾರಿ ಪೂರ್ಣಗೊಳಿಸಲಾಗಿದೆ ಎಂಬುದನ್ನು ಖುದ್ದು ಮುಖ್ಯ ಆಯುಕ್ತರು ಪರಿಶೀಲಿಸಬೇಕು ಎಂದು ತಿಳಿಸಲಾಗಿದೆ. ಜತೆಗೆ ಸಂಬಂಧಪಟ್ಟ ಮುಖ್ಯ ಎಂಜಿನಿಯರ್‌ರಿಂದ ಕಾಮಗಾರಿ ಗುಣಮಟ್ಟ ಪರಿಶೀಲಿಸಬೇಕು ಎಂದು ಸೂಚಿಸಲಾಗಿದೆ. ಹಾಗೆಯೇ ಪ್ರತಿಷ್ಠಿತ ಸಂಸ್ಥೆಯಿಂದ ರಸ್ತೆ ದುರಸ್ತಿ ಕಾಮಗಾರಿಯ ಗುಣಮಟ್ಟ ತಪಾಸಣೆ ನಡೆಸಿ ವರದಿ ಸಿದ್ಧಪಡಿಸಿ, ಆ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆಯೂ ಆದೇಶಿಸಲಾಗಿದೆ.

-ಗಿರೀಶ್‌ ಗರಗ

ಟಾಪ್ ನ್ಯೂಸ್

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್‌ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.