
ಜಾಲಪ್ಪನವರ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ
Team Udayavani, Sep 13, 2017, 11:25 AM IST

ಯಲಹಂಕ: ಕಳೆದ ಮೂರು ದಿನಗಳಿಂದ ಹೆಬ್ಟಾಳದ ಸಿಎಂಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಚಿವ ಆರ್.ಎಲ್ ಜಾಲಪ್ಪ ಅವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು ಜಾಲಪ್ಪ ಅವರ ಆರೋಗ್ಯ ವಿಚಾರಿಸಿದ್ದಾರೆ. ಮಂಗಳವಾರ ಭೇಟಿ ನೀಡಿದ್ದ ಸಿಎಂ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಕುಟುಂಬಸ್ಥರು ಮತ್ತು ಆಸ್ಪತ್ರೆ ವೈದ್ಯರಿಂದ ಮಾಹಿತಿ ಪಡೆದರು.
ಜಾಲಪ್ಪ ಅವರ ಅರೋಗ್ಯದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಆಸ್ಪತ್ರೆಯ ಯುರೋಲಾಜಿಸ್ಟ್, ಕಸಿ ಮತ್ತು ರೋಬೋಟಿಕ್ ತಜ್ಞರಾದ ಡಾ.ರವೀಶ್ “ಮೂತ್ರ ವಿಸರ್ಜನೆಯ ತೊಂದರೆ, ನೋವಿನಿಂದ ಆಸ್ವತ್ರೆಗೆ ಮೂರು ದಿನಗಳ ಹಿಂದೆ ಜಾಲಪ್ಪ ಅವರನ್ನು ದಾಖಲಿಸಲಾಗಿದೆ. ನೋವಿಲ್ಲದ ರೊಬೊಟಿಕ್ ಶಸ್ತ್ರಚಿಕಿತ್ಸೆಯನ್ನು ಅವರಿಗೆ ನೀಡಲಾಗುತ್ತಿದೆ.
ಜಾಲಪ್ಪ ಅವರ ಆರೋಗ್ಯ ಸ್ಥಿರವಾಗಿದ್ದು, ಮಾಮೂಲಿಯಂತೆ ಓಡಾಡುತ್ತಿದ್ದಾರೆ. ಆದ್ದರಿಂದ ಶೀಘ್ರವೇ ಡಿಸಾcರ್ಜ್ ಮಾಡಲಾಗುವುದು, ‘ ಎಂದು ಸ್ಪಷ್ಟಪಡಿಸಿದರು. ಸಮಾಜ ಕಲ್ಯಾಣ ಸಚಿವರಾದ ಆಂಜಿನೇಯ, ವಿಧಾನಪರಿಷತ್ ಸದಸ್ಯ ಉಗ್ರಪ್ಪ, ಮತ್ತಿತರರು ಜಾಲಪ್ಪ ರವರ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.