ಸಾರ್ವಜನಿಕ ಸಾರಿಗೆ ಲಕಲಕ!


Team Udayavani, Mar 5, 2020, 3:08 AM IST

sarvajanika

ಬೆಂಗಳೂರು: “ಕೊರೊನಾ ವೈರಸ್‌’ ಬೆಂಗಳೂರು ಮೂಲಕವೇ ಹಾದುಹೋಗಿದೆ ಎಂಬುದು ಖಾತ್ರಿಯಾದ ಬೆನ್ನಲ್ಲೇ ಎಚ್ಚೆತ್ತ ನಗರದ ವಿವಿಧ ಸಮೂಹ ಸಾರಿಗೆಗಳು ಸಮರೋಪಾದಿಯಲ್ಲಿ ಸ್ವಚ್ಛತಾ ಕಾರ್ಯ ಆರಂಭಿಸಿವೆ.

ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ನೈರುತ್ಯ ರೈಲ್ವೆ ಬೆಂಗಳೂರು ವಿಭಾಗ, “ನಮ್ಮ ಮೆಟ್ರೋ’ದಲ್ಲಿ ಬೆಳಗ್ಗೆಯಿಂದಲೇ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಿ, ನೀರಿನಲ್ಲಿ ರಾಸಾಯನಿಕ ಅಂಶ ಮಿಶ್ರಣ ಮಾಡಿ, ಸ್ವಚ್ಛಗೊಳಿಸುವ ಕೆಲಸ ಭರದಿಂದ ನಡೆಯಿತು. ಬಸ್‌ಗಳ ಆಸನ, ಕಂಬಿಗಳು, ದ್ವಾರಗಳು, ರೈಲ್ವೆ ಮತ್ತು ಮೆಟ್ರೋ ನಿಲ್ದಾಣಗಳನ್ನು ಒದ್ದೆಬಟ್ಟೆಯಿಂದ ಆಗಾಗ್ಗೆ ಒರೆಸುವುದು ಕಂಡುಬಂತು.

ಅಲ್ಲದೆ, ಘಟಕಗಳಿಂದ ಬಸ್‌ಗಳೊಂದಿಗೆ ಹೊರಬೀಳುವ ಚಾಲನಾ ಸಿಬ್ಬಂದಿಗೆ ಮೇಲಧಿಕಾರಿಗಳು ಕೊರೊನಾ ವೈರಸ್‌ ಬಗ್ಗೆ ಅರಿವು ಮೂಡಿಸಿದರು. ಕರ್ತವ್ಯದಲ್ಲಿದ್ದಾಗ ಈ ವೈರಸ್‌ ಸೋಂಕದಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ಪ್ರಯಾಣಿಕರಿಗೆ ತಿಳಿವಳಿಕೆ ನೀಡುವುದು, ಅನಾರೋಗ್ಯಪೀಡಿತ ಪ್ರಯಾಣಿಕರು ಕಂಡುಬಂದರೆ ಅನುಸರಿಸಬೇಕಾದ ವಿಧಾನಗಳ ಬಗ್ಗೆ ಅರಿವು ಮೂಡಿಸಿದರು.

ವಿಶೇಷವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನೇರವಾಗಿ ಮೈಸೂರು, ತಿರುಪತಿ ಸೇರಿದಂತೆ ವಿವಿಧೆಡೆ ಕಾರ್ಯಾಚರಣೆ ಮಾಡುವ ಕೆಎಸ್‌ಆರ್‌ಟಿಸಿಯ ಫ್ಲೈಬಸ್‌ಗಳು, ನಗರದ ಮೆಜೆಸ್ಟಿಕ್‌, ಮಾರತ್‌ಹಳ್ಳಿ, ವೈಟ್‌ಫೀಲ್ಡ್‌ ಮತ್ತಿತರ ಕಡೆಗಳಿಂದ ವಿಮಾನ ನಿಲ್ದಾಣದ ಮಾರ್ಗಗಳಲ್ಲಿ ಸಂಚರಿಸುವ ಬಿಎಂಟಿಸಿಯ ವಾಯುವಜ್ರ ಬಸ್‌ಗಳ ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಲಾಯಿತು.

ಇನ್ನು ಬಿಎಂಟಿಸಿ ಬಸ್‌ಗಳಲ್ಲಿ ಚಾಲನಾ ಸಿಬ್ಬಂದಿ ಮುಖಗವಸು ಧರಿಸಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಂಸ್ಥೆಯಿಂದ ಯಾವುದೇ ಮಾಸ್ಕ್ಗಳನ್ನು ಹಂಚಿಕೆ ಮಾಡಿಲ್ಲ. ಆದರೆ, ಚಾಲನಾ ಸಿಬ್ಬಂದಿಯೇ ಸ್ವಂತ ಖರ್ಚಿನಿಂದ ಮಾಸ್ಕ್ ಖರೀದಿಸಿ ಧರಿಸುತ್ತಿದ್ದಾರೆ. ಈ ನಡುವೆ ಚಾಲಕ ಕಂ ನಿರ್ವಾಹಕ ಯೋಗೇಶ್‌ ಗೌಡ ಎಂಬುವವರು ಸ್ವಯಂಪ್ರೇರಿತರಾಗಿ ಬುಧವಾರ ಸುಮಾರು 250 ಮಾಸ್ಕ್ ಖರೀದಿಸಿ, ಶಾಂತಿನಗರ ಬಸ್‌ ನಿಲ್ದಾಣದಲ್ಲಿ ಚಾಲನಾ ಸಿಬ್ಬಂದಿಗೆ ವಿತರಿಸಿ, ಜಾಗೃತಿ ಮೂಡಿಸಿದರು.

ರೈಲ್ವೆಯಿಂದ ಮುನ್ನೆಚ್ಚರಿಕಾ ಕ್ರಮ: ನೈಋತ್ಯ ರೈಲ್ವೆ ಬೆಂಗಳೂರು ವಿಭಾಗವು ರೈಲುಗಳು ಹಾಗೂ ರೈಲು ನಿಲ್ದಾಣಗಳಲ್ಲಿ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಪ್ರಯಾಣಿಕರು ಹಾಗೂ ಸಿಬ್ಬಂದಿಗೆ ಕೆಲವು ಸಲಹೆ ನೀಡಿದೆ. ಪ್ರಯಾಣದ ವೇಳೆ ಅನಾರೋಗ್ಯಕ್ಕೆ ತುತ್ತಾದರೆ ಟ್ರೈನ್‌ ಕ್ಯಾಪ್ಟನ್‌ ಅಥವಾ ಟಿಕೆಟ್‌ ಪರೀಕ್ಷಕರ ಗಮನಕ್ಕೆ ತಂದು ವೈದ್ಯಕೀಯ ನೆರವು ಪಡೆಯಬೇಕು ಎಂದು ಮೇಲಧಿಕಾರಿಗಳು ಸೂಚನೆ ನೀಡಿದ್ದಾರೆ.

ಅಲ್ಲದೆ, ರೈಲು ನಿಲ್ದಾಣಗಳು, ಬೋಗಿಗಳನ್ನು ಸ್ವಚ್ಛತೆಗೊಳಿಸುವವರು ಪ್ರಯಾಣಿಕರು ಬಳಸುವ ಶೌಚಾಲಯ, ಕಮೋಡ್‌, ಬಾಗಿಲು, ಆಸನಗಳು, ವಿಶ್ರಾಂತಿ ಕೊಠಡಿ, ಫ್ಲಾಟ್‌ಫಾರ್ಮ್ಗಳು, ವಾಟರ್‌ ಟ್ಯಾಪ್‌ಗ್ಳು ಮೊದಲಾದವುಗಳನ್ನು ಆಲ್ಕೋಹಾಲ್‌ ಅಂಶವಿರುವ ಬ್ಯಾಕ್ಟೀರಿಯಾ ನಿರೋಧಕ ರಾಸಾಯನಿಕದಿಂದ ಸ್ವಚ್ಚಗೊಳಿಸಬೇಕು. ಸ್ವಚ್ಛಗೊಳಿಸುವವರು ಮಾಸ್ಕ್ ಹಾಗೂ ಗ್ಲೌಸ್‌ ಕಡ್ಡಾಯವಾಗಿ ಧರಿಸಬೇಕು ಎಂದು ರೈಲ್ವೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ರಾಸಾಯನಿಕದಿಂದ ಮೆಟ್ರೋ ಸ್ವಚ್ಛತೆ: “ನಮ್ಮ ಮೆಟ್ರೋ’ ನಿಲ್ದಾಣಗಳಲ್ಲಿ ಸ್ವಚ್ಛತಾ ಕಾರ್ಯ ತೀವ್ರಗೊಳಿಸಲಾಗಿದೆ. ಉದಾಹರಣೆಗೆ ಈ ಮೊದಲು ನಾಲ್ಕು ಬಾರಿ ಸ್ವಚ್ಛಗೊಳಿಸುತ್ತಿದ್ದರೆ, ಈಗ ಆ ಸಂಖ್ಯೆಯನ್ನು ಆರಕ್ಕೆ ಹೆಚ್ಚಿಸಲಾಗಿದೆ ಎಂದು ಬಿಎಂಆರ್‌ಸಿಎಲ್‌ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಶವಂತ ಚವಾಣ್‌ ತಿಳಿಸಿದರು. ಇನ್ನು ಮೆಟ್ರೋ ರೈಲುಗಳನ್ನು ನಾವು ಈಗಾಗಲೇ ರಾಸಾಯನಿಕದಿಂದ ಸ್ವಚ್ಛಗೊಳಿಸುತ್ತಿದ್ದು, ಈ ಕೆಲಸ ಈಗ ಇನ್ನಷ್ಟು ಪರಿಣಾಮಕಾರಿಯಾಗಿ ನಡೆಯುತ್ತಿದೆ. ಜತೆಗೆ ನಿಲ್ದಾಣಗಳಲ್ಲಿ ಫ‌ಲಕಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದೂ ಹೇಳಿದರು.

ಟಾಪ್ ನ್ಯೂಸ್

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Shiruru; Missing Kerala Arjuna’s lorry found; Operation of Ishwar Malpe Team

Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್‌ ಮಲ್ಪೆ ತಂಡದ ಕಾರ್ಯಾಚರಣೆ

World Rivers Day: ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ: ಸಂಸದ ಕ್ಯಾ. ಬ್ರಿಜೇಶ್‌ ಚೌಟ

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.