ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಸಾವಿಗೆ ಗಣ್ಯರ ಕಂಬನಿ


Team Udayavani, Aug 1, 2019, 3:00 AM IST

Udayavani Kannada Newspaper

ಬೆಂಗಳೂರು: ಕಾಫಿ ಡೇ ಮಾಲೀಕ ವಿ.ಜಿ.ಸಿದ್ಧಾರ್ಥ ಅವರ ನಿಗೂಢ ಸಾವಿಗೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೇರಿದಂತೆ ಅನೇಕ ಗಣ್ಯರು ಟ್ವೀಟ್‌ ಮೂಲಕ ಸಂತಾಪ ಸೂಚಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಟ್ವೀಟ್‌ ಮಾಡಿ, “ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ಅಳಿಯ ಕೆಫೆ ಕಾಫಿ ಡೇ ಸಂಸ್ಥಾಪಕ ಹಾಗೂ ಉದ್ಯಮಿ ಸಿದ್ಧಾರ್ಥ ಅವರ ಸಾವು ತೀವ್ರ ಆಘಾತ ಹಾಗೂ ಅಪಾರ ನೋವು ತಂದಿದೆ. ಅವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.

ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, “ಅತ್ಯಂತ ಸಭ್ಯ, ಸುಸಂಸ್ಕೃತ ವ್ಯಕ್ತಿ, ಕಾಫಿ ಕಿಂಗ್‌ ಎಂದೇ ಪ್ರಖ್ಯಾತರಾಗಿದ್ದ ಕೆಫೆ ಕಾಫಿ ಡೇ ಸಂಸ್ಥಾಪಕ, ಯುವ ಉದ್ಯಮಿ ಚಿಕ್ಕಮಗಳೂರು ಮೂಲದ ಸಿದ್ಧಾರ್ಥರವರ ಜೀವನ ಈ ರೀತಿ ಅಂತ್ಯವಾದದ್ದು, ಆಘಾತಕರ. ನಂಬಲಾಸಾಧ್ಯ. ಏನು ಹೇಳಬೇಕು ತಿಳಿಯುತ್ತಿಲ್ಲ. ಇದನ್ನು ಎದುರಿಸುವ ಮನೋ ಶಕ್ತಿ ಅವರ ಕುಟುಂಬಕ್ಕೆ ಸಿಗಲೆಂದು ದೇವರಲ್ಲಿ ಪ್ರಾರ್ಥನೆ ಎಂದು ಟ್ವೀಟ್‌ ಮಾಡಿದ್ದಾರೆ.

“ಉದ್ಯಮಿ ಹಾಗೂ ಆತ್ಮೀಯ ಗೆಳೆಯ ಸಿದ್ಧಾರ್ಥ ನಿಧನದ ಸುದ್ದಿ ತಿಳಿದು ಆಘಾತಗೊಂಡಿದ್ದೇನೆ. ಕಳೆದ 25 ವರ್ಷಗಳ ಸ್ನೇಹಿತ ಸಿದ್ಧಾರ್ಥ ಅವರು ಕರ್ನಾಟಕದ ಕಾಫಿ ಉದ್ಯಮವನ್ನು 2 ವಿಶ್ವಕ್ಕೆ ಪರಿಚಯಿಸಿದವರು. ಸಹಸ್ರಾರು ನೌಕರರಿಗೆ ತಮ್ಮ ಸಂಸ್ಥೆಯಲ್ಲಿ ಅವಕಾಶ ಕಲ್ಪಿಸಿದ್ದರು. ಅವರ ನಿಧನದಿಂದ ಕರ್ನಾಟಕ ಶ್ರೇಷ್ಠ ಉದ್ಯಮಿಯೊಬ್ಬರನ್ನು ಕಳೆದುಕೊಂಡಿದೆ’ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಟ್ವೀಟ್‌ ಮೂಲಕ ಕಂಬನಿ ಮಿಡಿದಿದ್ದಾರೆ.

ಶಾಸಕ ಅರವಿಂದ ಲಿಂಬಾವಳಿ ಟ್ವೀಟ್‌ ಮಾಡಿ “ನೇತ್ರಾವತಿ ನದಿ ದಂಡೆಯಲ್ಲಿ ಸಿದ್ಧಾರ್ಥ ಅವರ ಪಾರ್ಥಿವ ಶರೀರ ಸಿಕ್ಕಿದೆ ಎಂಬ ಸುದ್ದಿ ಕೇಳಿದಾಗ ಆಘಾತವಾಯಿತು. ಈ ಪ್ರಕರಣ ಸಂಪೂರ್ಣ ತನಿಖೆ ನಡೆಯಬೇಕು. ಸಿದ್ಧಾರ್ಥ ಅವರು ಅನೇಕರಿಗೆ ಸ್ಫೂರ್ತಿಯಾಗಿದ್ದರು. ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ಹೇಳಿದ್ದಾರೆ.

ಶಾಸಕ ಸಿ.ಟಿ.ರವಿ ಟ್ವೀಟ್‌ ಮಾಡಿ, ಸಿದ್ಧಾರ್ಥ ಅವರು ಅಣ್ಣನ ಸ್ಥಾನದಲ್ಲಿ ನಿಂತು ಸದಾ ಪ್ರೋತ್ಸಾಹಿಯಾಗಿದ್ದು, ಜನ ಸೇವೆಗೆ ಸ್ಫೂರ್ತಿ ನೀಡುತ್ತಿದ್ದರು. ಅವರ ಅಂತಿಮ ಯಾತ್ರೆಯಲ್ಲಿ ಹೆಗಲುಕೊಟ್ಟರೂ, ಅವರ ಸಾವನ್ನು ಇನ್ನು ನನ್ನಿಂದ ನಂಬಲು ಸಾಧ್ಯವಾಗುತ್ತಿಲ್ಲ.

ಅದಮ್ಯ ಚೇತನದ ಮುಖ್ಯಸ್ಥೆ ತೇಜಸ್ವಿನಿ ಅನಂತಕುಮಾರ್‌ ಟ್ವೀಟ್‌ ಮಾಡಿ, ಸಿದ್ಧಾರ್ಥ ಅವರ ಜೀವನ ಈ ರೀತಿ ಅಂತ್ಯವಾದದ್ದು, ಆಘಾತಕರ. ಈ ಆಘಾತವನ್ನು ಎದುರಿಸುವ ಶಕ್ತಿ, ಸ್ಥೈರ್ಯ ಅವರ ಕುಟುಂಬಕ್ಕೆ, ಸ್ನೇಹಿತರಿಗೆ ಹಾಗೂ ಸಿಬ್ಬಂದಿಗೆ ಸಿಗಲೆಂದು ದೇವರಲ್ಲಿ ಪ್ರಾರ್ಥನೆ,’ ಎಂದಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.