Bengaluru: ಬೆಂಕಿ ಅವಘಡ; 6 ಕಾಲೇಜು ಬಸ್ಗಳು ಸುಟ್ಟು ಕರಕಲು
Team Udayavani, Jun 30, 2024, 11:06 AM IST
ಬೆಂಗಳೂರು: ಖಾಸಗಿ ನರ್ಸಿಂಗ್ ಕಾಲೇಜೊಂದರ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ ಆರು ಹಳೇಯ ಬಸ್ಗಳು ಬೆಂಕಿಗಾಹುತಿಯಾಗಿರುವ ಘಟನೆ ಹೆಗ್ಗನಹಳ್ಳಿ ಕ್ರಾಸ್ನಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಹೆಗ್ಗನಹಳ್ಳಿ ಕ್ರಾಸ್ನ ಕೆಟಿಜಿ ನರ್ಸಿಂಗ್ ಕಾಲೇಜು ಆವರಣದಲ್ಲಿ ಶನಿವಾರ ಮಧ್ಯಾಹ್ನ ಸುಮಾರು 2.30ಕ್ಕೆ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆಯಲ್ಲಿ ಸಂಚಾರ ಸ್ಥಗಿತಗೊಳಿಸಿದ್ದ 7 ಕಾಲೇಜು ವಾಹನಗಳಿಗೆ ಹಾನಿಯಾಗಿದ್ದು, ಆರು ವಾಹನಗಳು ಭಾಗಶಃ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿವೆ. ಕಾಲೇಜಿನ ಆಡಳಿತ ಮಂಡಳಿ 15 ವರ್ಷ ಸಂಚಾರ ಪೂರೈಸಿದ 7 ವಾಹನಗಳನ್ನು ಕಾಲೇಜಿನ ಆವರಣದ ಖಾಲಿ ಜಾಗದಲ್ಲಿ ನಿಲುಗಡೆ ಮಾಡಿತ್ತು. ಮಧ್ಯಾಹ್ನ ಒಂದು ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಕೆಲವೇ ಕ್ಷಣದಲ್ಲಿ ಪಕ್ಕದ ವಾಹನಗಳಿಗೂ ಬೆಂಕಿ ಆವರಿಸಿ ಹೊತ್ತಿ ಉರಿಯಲು ಆರಂಭಿಸಿವೆ. ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಹಾಗೂ ರಾಜಗೋಪಾಲನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಮೂರು ಅಗ್ನಿಶಾಮಕ ವಾಹನಗಳೊಂದಿಗೆ ಸುಮಾರು ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ 7 ಬಸ್ಗಳ ಪೈಕಿ 6 ವಾಹನಗಳಿಗೆ ಹಾನಿಯಾಗಿವೆ. ಹಳೇಯ ಕಾಲೇಜು ವಾಹನಗಳಿಗೆ ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಈ ವಾಹನಗಳು ಸಂಚಾರ ಸ್ಥಗಿತಗೊಳಿಸಿದ್ದರಿಂದ ಹಲವು ದಿನಗಳಿಂದ ಖಾಲಿ ಜಾಗದಲ್ಲಿ ನಿಲುಗಡೆ ಮಾಡಿದ್ದರು. ಘಟನೆಯಲ್ಲಿ ಸದ್ಯ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದರು. ಈ ಸಂಬಂಧ ರಾಜಗೋಪಾಲನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ullal: ಟಿಪ್ಪರ್ ಅಪಘಾತ; ಗಾಯಾಳು ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು
Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತ್ಯು
Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!
Arrested: ನಕಲಿ ಎ.ಕೆ.47 ಗನ್ ಬಳಸಿದ್ದ ರೀಲ್ ಶೋಕಿಲಾಲ ಬಂಧನ
ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.