Bengaluru: ಡಿವೈಡರ್ಗೆ ಡಿಕ್ಕಿ; ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಬೈಕ್ ವಾಹನ ಸವಾರ?
Team Udayavani, Jul 7, 2024, 10:53 AM IST
ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ಹೋಗುವಾಗ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಡೆಲಿವರಿ ಬಾಯ್ಯೊಬ್ಬ ರಾಜಕಾಲುವೆಗೆ ಬಿದ್ದು ಕೊಚ್ಚಿಕೊಂಡು ಹೋಗಿರುವ ಘಟನೆ ಜ್ಞಾನಭಾರತಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬ್ಯಾಟರಾಯನಪುರ ನಿವಾಸಿ ಹೇಮಂತ್ ಕುಮಾರ್ (28) ನಾಪತ್ತೆಯಾಗಿರುವ ಡೆಲಿವರಿ ಬಾಯ್. ಈತನ ಪತ್ತೆಗಾಗಿ ಅಗ್ನಿಶಾಮಕ ದಳ ಸಿಬ್ಬಂದಿ ಕಳೆದ ಎರಡು ದಿನಗಳಿಂದ ಶೋಧ ಕಾರ್ಯ ನಡೆಸುತ್ತಿದ್ದಾರೆ. ಇದುವರೆಗೂ ಆತ ಪತ್ತೆಯಾಗಿಲ್ಲ. ಭಾನುವಾರ ಕೂಡ ಶೋಧ ಕಾರ್ಯ ನಡೆಯಲಿದೆ ಎಂದು ಪೊಲೀಸರು ಹೇಳಿದರು.
ಪೋರ್ಟರ್ ಕಂಪನಿಯಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಹೇಮಂತ್ ಕುಮಾರ್, ಶುಕ್ರವಾರ ರಾತ್ರಿ 10.30ರ ಸುಮಾರಿಗೆ ಕೆಲಸ ಮುಗಿಸಿಕೊಂಡು ಮೈಸೂರು ರಸ್ತೆಯ ಜ್ಞಾನಭಾರತಿ ಕಡೆಯಿಂದ ಬ್ಯಾಟರಾಯನಪುರ ಕಡೆ ತೆರಳುತ್ತಿದ್ದ. ಮಾರ್ಗ ಮಧ್ಯೆ ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಬಳಿ ಹೇಮಂತ್ ಕುಮಾರ್, ಬೈಕ್ನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದುಕೊಂಡಿದ್ದಾನೆ. ಬಳಿಕ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿರುವ ರಾಜಕಾಲುವೆಗೆ ಬಿದ್ದಿದ್ದು, ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ನೀರಿನ ಹರಿವು ಹೆಚ್ಚಾಗಿದ್ದರಿಂದ ಆತ ಕೊಚ್ಚಿ ಹೋಗಿದ್ದಾನೆ.
ವಿಷಯ ತಿಳಿದು ಸ್ಥಳಕ್ಕೆ ಧಾವಿಸಿ ಪೊಲೀಸರು ಕೂಡಲೇ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿ ಶುಕ್ರವಾರ ರಾತ್ರಿಯೇ ಕಾರ್ಯಾಚರಣೆ ಆರಂಭಿಸಿದ್ದಾರೆ. ಆದರೆ, ತಡರಾತ್ರಿವರೆಗೂ ಹೇಮಂತ್ ಕುಮಾರ್ ಪತ್ತೆಯಾಗಿಲ್ಲ. ಹೀಗಾಗಿ ಶನಿವಾರ ಕೂಡ ಸುಮಾರು 2-3 ಕಿಲೋ ಮೀಟರ್ ಶೋಧ ಕಾರ್ಯ ನಡೆಸಿದರು. ಆದರೂ ಆತನ ಸುಳಿವು ಸಿಕ್ಕಿಲ್ಲ. ಆದರಿಂದ ಸದ್ಯ ನಾಪತ್ತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸ ಲಾಗಿದೆ ಎಂದು ಪೊಲೀಸರು ಹೇಳಿದರು. ಈ ಸಂಬಂಧ ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಸ್ತೆ ಮಧ್ಯೆ ಇದ್ದ ಕಂದಕ ಮುಚ್ಚದ್ದರಿಂದ ಅವಘಡ:
ಮೈಸೂರು ರಸ್ತೆಯ ಜ್ಞಾನಭಾರತಿ ಮೆಟ್ರೋ ನಿಲ್ದಾಣ ಸಮೀಪದಲ್ಲಿ ದ್ವಿಮುಖ ರಸ್ತೆಗಳಿದ್ದು, ಒಂದು ಮೈಸೂರು ಕಡೆ, ಮತ್ತೂಂದು ಬ್ಯಾಟರಾಯನಪುರ ಕಡೆ ಸಂಪರ್ಕಿಸುತ್ತದೆ. ಈ ಎರಡು ರಸ್ತೆಗಳ ಮಾರ್ಗದಲ್ಲಿ ರಾಜಕಾಲುವೆ ಹಾದು ಹೋಗಿದ್ದು, ತಡೆಗೋಡೆ ನಿರ್ಮಿಸ ಲಾಗಿದೆ. ಆದರೆ, ಈ ಎರಡು ರಸ್ತೆಗಳ ಮಧ್ಯೆ ಸುಮಾರು 3-4 ಅಡಿ ಅಗಲ ಅಂತರದ ಕಂದಕ ವಿದ್ದು, ಅದನ್ನು ಬಿಬಿಎಂಪಿ ಅಧಿಕಾರಿಗಳು ಮುಚ್ಚಿಲ್ಲ. ಅದರಿಂದಲೇ ಈ ಅವಘಡ ಸಂಭವಿ ಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು
Women’s T20 World Cup: ಆಸೀಸ್ಗೆ ಸುಲಭದ ತುತ್ತಾದ ಲಂಕಾ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ
Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.