![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 16, 2019, 3:03 AM IST
ಬೆಂಗಳೂರು: ನಗರ ವ್ಯಾಪ್ತಿಯಲ್ಲಿರುವ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ಹುಟ್ಟಹಬ್ಬದ ದಿನ ಕಡ್ಡಾಯ ರಜೆ ಘೋಷಿಸಿ, ಅವರಿಗೆ ಶುಭಾಶಯದ ಕಾರ್ಡ್(ಗ್ರೀಟಿಂಗ್ಸ್) ಕಳುಹಿಸುವುದಾಗಿ ಹೇಳಿದ್ದ ನಗರ ಪೊಲೀಸ್ ಆಯುಕ್ತ ಭಾಸ್ಕರ್ರಾವ್, ಭಾನುವಾರ ಹುಟ್ಟುಹಬ್ಬ ಆಚರಣೆ ಮಾಡಿಕೊಂಡ 15ಕ್ಕೂ ಹೆಚ್ಚು ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ತಮ್ಮ ಕಚೇರಿಯಲ್ಲಿ ಆಯೋಜಿಸಿದ್ದ ಸಣ್ಣ ಕಾರ್ಯಕ್ರಮದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಸಿಬ್ಬಂದಿಯಿಂದಲೇ ಕೇಕ್ ಕತ್ತರಿಸಿ, ಸಿಹಿ ಹಂಚಿಸಿದರು.
ಬಳಿಕ ಎಲ್ಲರಿಗೂ ಗ್ರೀಟಿಂಗ್ಸ್ ನೀಡಿ ಶುಭ ಕೋರಿದರು. ಈ ಕ್ಷಣಗಳ ಫೋಟೋಗಳನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಾಕಿಕೊಂಡಿರುವ ಅವರು, “ಖಾಕಿಯಲ್ಲಿನ ಅದ್ಬುತ ಕ್ಷಣಗಳು’ “ನನ್ನ ಪೊಲೀಸ್ ಕುಟುಂಬದಲ್ಲಿ ಈ ದಿನದಂದು ಹುಟ್ಟಿದ ಸಿಬ್ಬಂದಿಯ ಹುಟ್ಟುಹಬ್ಬವನ್ನು ಆಚರಿಸಿದ ಕ್ಷಣಗಳು. ಈ ಉಪಕ್ರಮದ ಪ್ರಾರಂಭವು, ಕನ್ನಡಿಗ ಭಾರತರತ್ನ ಸರ್ಎಂ.ವಿಶ್ವೇಶ್ವರಯ್ಯ ಅವರ ಜನ್ಮ ದಿನದಂದು ಘಟಿಸಿರುವುದು ಮತ್ತೊಂದು ವಿಶೇಷ’ ಎಂದು ಹೇಳಿಕೊಂಡಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.