ಮಂಗಳಮುಖಿಯರ ಅನುದಾನ ಬಳಕೆಗೆ ಸಮಿತಿ


Team Udayavani, Mar 5, 2020, 3:05 AM IST

mangalamuki

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿನ ಮಂಗಳಮುಖಿಯರಿಗೆ ಪಾಲಿಕೆ ಮೀಸಲಿಟ್ಟಿರುವ ಅನುದಾನ ಸರ್ಮಪಕವಾಗಿ ಬಳಸುವ ನಿಟ್ಟಿನಲ್ಲಿ ಸಮಿತಿ ರಚನೆ ಮಾಡಲಾಗುವುದು ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್‌.ಅನಿಲ್‌ಕುಮಾರ್‌ ತಿಳಿಸಿದ್ದಾರೆ.

ಕರ್ನಾಟಕ ಟ್ರಾನ್ಸ್‌ಜೆಂಡರ್‌ ಪಾಲಿಸಿ -2017ರ ಅನುಷ್ಠಾನ ಹಾಗೂ ಪಾಲಿಕೆ ಪ್ರತಿವರ್ಷ ಮಂಗಳ ಮುಖಿಯರಿಗೆ ಮೀಸಲಿಡುತ್ತಿರುವ ಅನುದಾನದ ಬಳಕೆಗೆ ಸಂಬಂಧಿಸಿದಂತೆ ಬಿಬಿಎಂಪಿ ಆಯುಕ್ತ ಬುಧವಾರ ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ಮಂಗಳಮುಖಿ ಸಂಘಟನೆಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿಗಮದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಆಯುಕ್ತ ಬಿ.ಎಚ್‌.ಅನಿಲ್‌ಕುಮಾರ್‌ ಅವರು, ಮುಂಗಳಮುಖಿಯರ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಲಾಗಿದ್ದು, ಅವರ ಅನುದಾನ ಅವರಿಗೆ ತಲುಪುವಂತೆ ಮಾಡುವ ಉದ್ದೇಶದಿಂದ ಪಾಲಿಕೆ ವತಿಯಿಂದ ಮಂಗಳಮುಖಿಯರ ಸಮಿತಿ ರಚನೆ ಮಾಡಲಾಗುವುದು.

ಸಮಿತಿಯಲ್ಲಿ ಆಯುಕ್ತರು, ಅಧಿಕಾರಿಗಳು ಹಾಗೂ ಮಂಗಳಮುಖಿಯರ ಪರವಾಗಿ ಸೇವೆ ಸಲ್ಲಿಸುತ್ತಿರುವ ಸಂಘಸಂಸ್ಥೆಗಳ ಸದಸ್ಯರು ಇರಲಿದ್ದಾರೆ. ಈ ಸಮಿತಿಯ ಮೂಲಕ ಯೋಜನೆ ಅನುಷ್ಠಾನ ಮಾಡಲಾಗುವುದು ಎಂದರು. ಮಂಗಳಮುಖಿಯರಿಗೆ ವಸತಿ, ಸ್ವ-ಉದ್ಯೋಗ ಹಾಗೂ ಸಬಲೀಕರಣಕ್ಕೆ ಪೂರಕವಾದ ಯೋಜನೆಗಳನ್ನು ರೂಪಿಸುವಂತೆ ಪ್ರತಿನಿಧಿಗಳು ಸಲಹೆ ನೀಡಿದ್ದಾರೆ.

ಮುಂಗಳಮುಖಿಯರಿಗೆ ಕೌಶಲ್ಯಾಭಿವೃದ್ಧಿ ಯೋಜನೆಗಳನ್ನು ರೂಪಿಸಿಕೊಳ್ಳುವ ಬಗ್ಗೆಯೂ ಚಿಂತನೆ ಇದೆ. ಅವರ ಪ್ರತಿನಿಧಿಗಳು ನೀಡಿರುವ ಸಲಹೆ ಮತ್ತು ಅವರ ಬೇಡಿಕೆಗೆ ಅನುಗುಣವಾಗಿ ಮುಂದಿನ ದಿನಗಳಲ್ಲಿ ಯೋಜನೆ ಜಾರಿ ಮಾಡಲಾಗುವುದು ಎಂದು ಮಾಹಿತಿ ನೀಡಿದರು. ಈ ವೇಳೆ ಮಂಗಳಮುಖಿಯರ ತಂಡ ಬಿಬಿಎಂಪಿ ಆಯುಕ್ತರಿಗೆ “ಹಿಯರಿಂಗ್‌ ದಿ ವಾಯ್ಸ’ ಪುಸ್ತಕ ನೀಡಿದರು.

ಉದಯವಾಣಿ ವಿಶೇಷ ವರದಿ ಪ್ರಕಟಿಸಿತ್ತು: ಪಾಲಿಕೆ ವ್ಯಾಪ್ತಿಯಲ್ಲಿನ ವಾಸವಿರುವ ಮಂಗಳಮುಖಿಯರ ಶ್ರೇಯೋಭಿವೃದ್ಧಿ ಹಾಗೂ ಅವರ ಜೀವನಮಟ್ಟ ಸುಧಾರಿಸುವ ಉದ್ದೇಶದಿಂದ ಕಳೆದ ಮೂರು ವರ್ಷಗಳಿಂದ ಪಾಲಿಕೆಯ ಬಜೆಟ್‌ನಲ್ಲಿ ತಲಾ ಒಂದು ಕೋಟಿ ರೂ.ಅನುದಾನ ಮೀಸಲಿರಿಸುತ್ತಿದೆ.

ಆದರೆ, ಇದರಲ್ಲಿ ನಯಾ ಪೈಸೆಯೂ ಫ‌ಲಾನುಭವಿಗಳನ್ನು ತಲುಪುತ್ತಿಲ್ಲ ಎನ್ನುವ ಬಗ್ಗೆ ಉದಯವಾಣಿ ಫೆ.21ರಂದು “ಮಂಗಳಮುಖಿಯರ ಕೈಗೆಟುಕದ 3ಕೋಟಿ!’ ಎಂಬ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ಉದಯವಾಣಿಯೊಂದಿಗೆ ಮಾತನಾಡಿದ್ದ ಆಯುಕ್ತರು ಮಂಗಳಮುಖಿ ಸಂಘಟನೆ ಸದಸ್ಯರೊಂದಿಗೆ ಚರ್ಚೆ ಮಾಡಿ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.