
ಜಾಗತೀಕರಣದಿಂದ ಸಂಕಷ್ಟದಲ್ಲಿ ಸಮುದಾಯ
Team Udayavani, Dec 28, 2017, 12:04 PM IST

ಕೆಂಗೇರಿ: ವ್ಯಾಪಾರವನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿದ್ದ ಆರ್ಯವೈಶ್ಯ ಸಮುದಾಯ ಇಂದು ಜಾಗತೀಕರಣ, ಉದಾರೀಕರಣದ ಪ್ರಭಾವದಿಂದ ಸಂಕಷ್ಟಕ್ಕೆ ಸಿಲುಕಿದ್ದು, ಅವರ ಜೀವನ ಉತ್ತಮವಾಗಲು ಮೀಸಲಾತಿ ಅಗತ್ಯವಿದೆ ಎಂದು ವಿಧಾನ ಪರಿಷತ್ತು ಸದಸ್ಯ ಹಾಗೂ ಕರ್ನಾಟಕ ಆರ್ಯವೈಶ್ಯ ಮಹಾಮಂಡಳಿ ರಾಜ್ಯಾಧ್ಯಕ್ಷ ಟಿ.ಎ.ಶರವಣ ಅಭಿಪ್ರಾಯಪಟ್ಟರು. ಆರ್ಯವೈಶ್ಯ ಮಂಡಳಿಯಿಂದ ಗಂಗೊಂಡನಹಳ್ಳಿಯ ವೀರಾಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತ ನಾಡಿದರು.
ಫೆ.18ರಂದು ಜಾಗೃತಿ ಸಮಾವೇಶ: ಆರ್ಯವೈಶ್ಯ ಸಮುದಾಯದವರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ನೀಡುವ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಸರ್ಕಾರದ ಮೇಲೆ ಒತ್ತಡ ತರುವ ಉದ್ದೇಶದಿಂದ ಫೆ.18 ರಂದು ಅರಮನೆ ಮೈದಾನದಲ್ಲಿ ಆರ್ಯವೈಶ್ಯ ಸಮುದಾಯದ ಹಕ್ಕುಗಳಿಗಾಗಿ ಒತ್ತಾಯಿಸಿ ಬೃಹತ್ ಜಾಗೃತಿ ಸಮಾವೇಶ ಆಯೋಜಿಸಲಾಗಿದೆ. ಈ ಸಮಾವೇಶದ ಮೂಲಕ ಸರ್ಕಾರಕ್ಕೆ ವಸ್ತುಸ್ಥಿತಿ ಹಾಗೂ ವಾಸ್ತವದ ಅರಿವು ಮೂಡಿಸಲಾಗುತ್ತದೆ ಎಂದು ಶರವಣ ತಿಳಿಸಿದರು.
ಕರ್ನಾಟಕ ಆರ್ಯವೈಶ್ಯ ಮಹಾ ಮಂಡಳಿ ಉಪಾಧ್ಯಕ್ಷ ಆದಿಶೇಷಯ್ಯ, ಸಂಘಟನಾ ಕಾರ್ಯದರ್ಶಿ ಡಿ.ಡಿ. ಪ್ರಹ್ಲಾದ್, ವಕ್ತಾರ ಕೆ.ವಿ.ಆದಿಶೇಷಯ್ಯ, ಮುಖಂಡರಾದ ವೇಣುಗೋಪಾಲ್, ಅಮರ್ನಾಥ್, ಸಿ.ರತ್ನಯ್ಯ ಇದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.