ವಾರ ಕಳೆದರೂ ಜಿಎಸ್‌ಟಿ ಬಗ್ಗೆ ಮುಗಿಯದ ಗೊಂದಲ


Team Udayavani, Jul 8, 2017, 3:55 AM IST

GST-07.jpg

ಬೆಂಗಳೂರು: ಜಿಎಸ್‌ಟಿ ಜಾರಿಯಾಗಿ ವಾರ ಕಳೆಯುತ್ತಿದ್ದರೂ ಸಾರ್ವಜನಿಕರು ಮಾತ್ರವಲ್ಲದೇ ವ್ಯಾಪಾರಿಗಳು, ಉದ್ಯಮಿಗಳ ಗೊಂದಲಗಳಿಗೆ ತೆರೆ ಬಿದ್ದಿಲ್ಲ. ಸಂಘಟಿತ ವಲಯವು ಕೆಲ ಮಾರ್ಪಾಡುಗಳೊಂದಿಗೆ ಎಂದಿನಂತೆ ವ್ಯವಹಾರ ಮುಂದುವರಿಸಿದ್ದರೆ ಅಸಂಘಟಿತ ವಲಯದವರು ಸ್ಪಷ್ಟತೆಯಿಲ್ಲದೆ ಅತಂತ್ರಕ್ಕೆ ಸಿಲುಕಿದಂತಾಗಿದೆ.

“ಒಂದು ದೇಶ- ಒಂದು ತೆರಿಗೆ’ ಪರಿಕಲ್ಪನೆಯಡಿ ಜೂನ್‌ 30ರ ಮಧ್ಯರಾತ್ರಿ ಜಾರಿಯಾದ ಜಿಎಸ್‌ಟಿ ಬಗ್ಗೆ ಆರಂಭದ ದಿನಗಳಲ್ಲಿ ಅನುಷ್ಠಾನ ಯಶಸ್ವಿಯಾದಂತೆ ಕಂಡುಬಂದರೂ ನಂತರದ ದಿನಗಳಲ್ಲಿ ಗೊಂದಲ, ಅಸ್ಪಷ್ಟತೆ ಹೆಚ್ಚಾಗುತ್ತಿರುವುದು ವ್ಯಕ್ತವಾಗುತ್ತಿದೆ. ಸರಕು- ಸೇವೆಗಳ ವರ್ಗೀಕರಣ ಹಾಗೂ ಅದಕ್ಕೆ ಜಿಎಸ್‌ಟಿಯಡಿ ವಿಧಿಸಬೇಕಾದ ತೆರಿಗೆ ಪ್ರಮಾಣದ ಬಗ್ಗೆಯೇ ಗೊಂದಲ ಮೂಡಿರುವುದರಿಂದ ವ್ಯಾಪಾರಿಗಳಲ್ಲಿ ಅಸ್ಪಷ್ಟತೆ ಮುಂದುವರಿದಿದೆ. ಅದರ ನೇರ ಪರಿಣಾಮ ಗ್ರಾಹಕರ ಮೇಲೆ ಬೀರಲಾಂಭಿಸಿದೆ.

ಅಸಂಘಟಿತ ವಲಯಕ್ಕೆ ಹೊಡೆತ
ಜಿಎಸ್‌ಟಿ ಬಗ್ಗೆ ಗ್ರಾಹಕರಿಗೆ ಮಾತ್ರವಲ್ಲದೇ ವ್ಯಾಪಾರಿಗಳು, ವಿತರಕರು, ಉದ್ಯಮಿಗಳಲ್ಲೂ ಗೊಂದಲವಿರುವುದು ನಿಜ. ಕೆಲ ಸರಕು, ಸೇವೆಗಳ ವಿಂಗಡಣೆ, ವರ್ಗೀಕರಣ, ತೆರಿಗೆ ಪ್ರಮಾಣದ ಬಗ್ಗೆ ಸ್ಪಷ್ಟತೆಯಿಲ್ಲ. ಇದರಿಂದಾಗಿ ವ್ಯಾಪಾರ- ವಹಿವಾಟಿನಲ್ಲೂ ವ್ಯತ್ಯಯವಾಗುತ್ತಿದ್ದು, ಬೆಲೆಗಳಲ್ಲೂ ಏರುಪೇರುಗಳಾಗುತ್ತಿವೆ. ಜಿಎಸ್‌ಟಿ ಬಗ್ಗೆ ಸ್ಪಷ್ಟತೆ ಮೂಡಲು ಇನ್ನೂ ಒಂದೆರಡು ತಿಂಗಳು ಅಗತ್ಯವಿದ್ದು, ನಂತರ ವ್ಯವಹಾರ ಸುಗಮವಾಗುವ ನಿರೀಕ್ಷೆಯಿದೆ ಎಂದು ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯ ಮಹಾಸಂಸ್ಥೆ ಅಧ್ಯಕ್ಷ ಕೆ.ರವಿ ತಿಳಿಸಿದರು.

“ಜಿಎಸ್‌ಟಿ ಜಾರಿ ನಂತರದ ಸ್ಥಿತಿಗತಿಯನ್ನು ಅವಲೋಕಿಸಿದರೆ ಸಂಘಟಿತ ವಲಯದ ವ್ಯವಹಾರ ಸುಗಮವಾಗಿ ನಡೆಯುತ್ತಿದ್ದು, ಅಸಂಘಟಿತ ವಲಯದ ವ್ಯವಹಾರದಲ್ಲಿ ವ್ಯತ್ಯಯ ಉಂಟಾಗುತ್ತಿರುವುದು ಕಂಡುಬಂದಿದೆ. ಜೆಎಸ್‌ಟಿ ಅನುಷ್ಠಾನದ ಬಗ್ಗೆಯೇ ಗೊಂದಲ ನಿವಾರಣೆಯಾಗದಿದ್ದರೆ ಲೆಕ್ಕಪತ್ರವನ್ನು (ರಿಟರ್ನ್ಸ್) ಸಲ್ಲಿಸುವುದು ಕೂಡ ಇನ್ನಷ್ಟು ಸವಾಲಾಗಲಿದೆ. ಅರಿವು ಹೆಚ್ಚಾದಂತೆ ಗೊಂದಲಗಳು ನಿವಾರಣೆಯಾಗಲಿದ್ದು, ಆ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಬೇಕಿದೆ’ ಎಂದು ಹೇಳಿದರು.

ಜಾಗೃತಿ- ಸ್ಪಂದನೆ ಮುಂದುವರಿಕೆ
ಜಿಎಸ್‌ಟಿ ಜಾರಿ, ತೆರಿಗೆ ಬಗ್ಗೆ ಮಾಹಿತಿ ನೀಡುವ ಹಾಗೂ ವ್ಯಾಟ್‌ನಿಂದ ಜಿಎಸ್‌ಟಿಗೆ ವ್ಯವಹಾರವನ್ನು ವರ್ಗಾಯಿಸಿಕೊಳ್ಳಲು ಅಗತ್ಯ ನೆರವನ್ನು ಎಫ್ಕೆಸಿಸಿಐ ವತಿಯಿಂದ ಮುಂದುವರಿಸಲಾಗುವುದು. ವಾಣಿಜ್ಯ ತೆರಿಗೆ ಇಲಾಖೆ, ಕೇಂದ್ರ ಅಬಕಾರಿ ಇಲಾಖೆ, ತಾಂತ್ರಿಕ ನೈಪುಣ್ಯ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಾಗಾರಗಳು ಮುಂದುವರಿಯಲಿವೆ ಎಂದು ತಿಳಿಸಿದರು.

ಕಾಸಿಯಾದಿಂದಲೂ ಕಾರ್ಯಾಗಾರ
ಸಣ್ಣ ಕೈಗಾರಿಕೆಗಳ ಮಾಲೀಕರಲ್ಲೂ ಜಿಎಸ್‌ಟಿ ಬಗ್ಗೆ ಗೊಂದಲ ನಿವಾರಣೆಯಾಗದ ಕಾರಣ ವಹಿವಾಟಿನ ಮೇಲೆ ಪರಿಣಾಮ ಬೀರಲಾರಂಭಿಸಿದೆ. ಬೆಂಗಳೂರು ಮಾತ್ರವಲ್ಲದೇ ಹಲವು ಜಿಲ್ಲೆಗಳಲ್ಲೂ ಉದ್ಯಮಿಗಳು ಗೊಂದಲಕ್ಕೆ ಸಿಲುಕಿದ್ದಾರೆ. ಆ ಹಿನ್ನೆಲೆಯಲ್ಲಿ ಕಾರ್ಯಾಗಾರಗಳನ್ನು ಜಿಲ್ಲಾ ಕೇಂದ್ರಗಳಲ್ಲಿ ಮುಂದುವರಿಸಲು ಕಾಸಿಯಾ ನಿರ್ಧರಿಸಿದೆ.

“ಜಿಎಸ್‌ಟಿ ವ್ಯವಸ್ಥೆ ಸ್ವಾಗತಾರ್ಹವಾಗಿದ್ದು, ಈ ಬಗ್ಗೆ ಸಣ್ಣ ಕೈಗಾರಿಕಾ ಉದ್ಯಮಿಗಳಲ್ಲಿ ಹೆಚ್ಚಿನ ಅರಿವು ಅಗತ್ಯವಿದೆ. ಜಿಲ್ಲಾ ಮಟ್ಟದ ಕೈಗಾರಿಕೋದ್ಯಮಿಗಳಿಗೂ ಇನ್ನಷ್ಟು ಸ್ಪಷ್ಟತೆ ಬೇಕಿದೆ. ಆ ಹಿನ್ನೆಲೆಯಲ್ಲಿ ಕಾಸಿಯಾ ವತಿಯಿಂದ ಬೆಂಗಳೂರು ಮಾತ್ರವಲ್ಲದೇ ಜಿಲ್ಲಾ ಕೇಂದ್ರಗಳಲ್ಲೂ ಕಾರ್ಯಾಗಾರಗಳನ್ನು ಆಯೋಜಿಸಿ ಸ್ಪಷ್ಟತೆ ಮೂಡಿಸಿ ಸುಗಮವಾಗಿ ವ್ಯವಹಾರ ನಡೆಸಲು ಅಗತ್ಯ ನೆರವು ನೀಡಲು ಪ್ರಯತ್ನಿಸಲಾಗುವುದು. ಸದ್ಯದಲ್ಲೇ ಜಿಎಸ್‌ಟಿ ಬಗ್ಗೆ ಸ್ಪಷ್ಟತೆ ಮೂಡುವ ನಿರೀಕ್ಷೆ ಇದೆ’ ಎಂದು ಕಾಸಿಯಾ ಅಧ್ಯಕ್ಷ ಹನುಮಂತೇಗೌಡ ತಿಳಿಸಿದರು.

ಜಿಎಸ್‌ಟಿಯ ಬಹಳಷ್ಟು ವಿಚಾರಗಳ ಬಗ್ಗೆ ಸಂಘಟಿತ ವಲಯದ ಉದ್ಯಮಿಗಳಲ್ಲೇ ಸ್ಪಷ್ಟತೆಯಿಲ್ಲದಿರುವುದನ್ನು ಗಮನಿಸಿದರೆ ಅಸಂಘಟಿತ ವಲಯದ ಉದ್ಯಮಗಳ ಸ್ಥಿತಿಯೂ ಭಿನ್ನವಾಗಿಲ್ಲದಿರುವುದು ಸ್ಪಷ್ಟವಾಗುತ್ತದೆ. ವಾಣಿಜ್ಯ ತೆರಿಗೆ ಇಲಾಖೆ ಸೇರಿದಂತೆ ನಾನಾ ಸಂಘಟನೆಗಳು ಕಾರ್ಯಾಗಾರ, ತರಬೇತಿ ಶಿಬಿರ ನಡೆಸುತ್ತಿದ್ದು, ಸ್ಪಷ್ಟತೆ ಮೂಡಿಸಲು ಸಹಕಾರಿಯಾಗುವುದೇ ಎಂಬುದನ್ನು ಕಾದು ನೋಡಬೇಕಿದೆ.

ಟಾಪ್ ನ್ಯೂಸ್

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Ayodhya: 8 ಕಾಲುಳ್ಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Vijayapura: ತಿರುಪತಿ ಲಡ್ಡು ಪಾವಿತ್ರ‍್ಯತೆ ಹಾಳು ಮಾಡಿದವರನ್ನು ಗಲ್ಲಿಗೇರಿಸಬೇಕು: ಯತ್ನಾಳ್

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Dandeli: ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ದ್ವಿಚಕ್ರ ವಾಹನ: ಇಬ್ಬರಿಗೆ ಗಾಯ

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

Belagavi; ದರ್ಬಾರ್‌ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್‌!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!

ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!

Air Force Chief: ವಾಯುಪಡೆ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

Desi Swara: ಯುಎಐಯಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿ’ ಉದ್ಘಾಟನೆ

Desi Swara: ಯುಎಐಯಲ್ಲಿ “ನಮ್ಮವರು ವಿಶ್ವಕರ್ಮ ಸಮಿತಿ’ ಉದ್ಘಾಟನೆ

1-muni

BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.