![Heavy rain in Amboli; Five feet water rise in Hidkal reservoir in one day](https://www.udayavani.com/wp-content/uploads/2024/07/hidkal-415x229.jpg)
ಸೆ.23ರಿಂದ ಮನೆ ಅಭಿಯಾನಕ್ಕೆ ಕಾಂಗ್ರೆಸ್ ಚಾಲನೆ
Team Udayavani, Sep 19, 2017, 8:40 AM IST
![Congress-Party-Logo-650.jpg](https://www.udayavani.com/wp-content/uploads/2017/09/19/Congress-Party-Logo-650-620x387.jpg)
ಬೆಂಗಳೂರು: ‘ಮನೆ ಮನೆಗೆ ಕಾಂಗ್ರೆಸ್’ ಅಭಿಯಾನದಡಿ ರಾಜ್ಯ ಸರಕಾರದ ನಾಲ್ಕೂವರೆ ವರ್ಷದ ಸಾಧನೆಗಳ ಕಿರುಹೊತ್ತಿಗೆಯನ್ನು ರಾಜ್ಯದ 224 ವಿಧಾನಸಭೆ ಕ್ಷೇತ್ರಗಳ ಪ್ರತಿ ಮನೆಗೆ ತಲುಪಿಸುವ ಹೊಣೆಗಾರಿಕೆ ಕೆಪಿಸಿಸಿ ಪದಾಧಿಕಾರಿಗಳು, ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ನೀಡಲಾಗಿದೆ. ಸೆ.23 ರಿಂದ ಅ.15 ರವರೆಗೆ ನಡೆಯಲಿರುವ ‘ಮನೆ ಮನೆಗೆ ಕಾಂಗ್ರೆಸ್’ ಅಭಿಯಾನದಡಿ, ಬೂತ್ ಮಟ್ಟದ ತಂಡದ ಜತೆ ಸಮನ್ವಯತೆ ಸಾಧಿಸಿ ಸರಕಾರದ ಸಾಧನೆ ಜನರಿಗೆ ತಿಳಿಸುವ ಕಿರುಹೊತ್ತಿಗೆ ಪ್ರತಿಯೊಬ್ಬರ ಮನೆ ಬಾಗಿಲಿಗೆ ತಲುಪುವಂತೆ ನೋಡಿ ಕೊಳ್ಳುವ ಹೊಣೆಗಾರಿಕೆ ವಹಿಸಲಾಗಿದೆ. ಜತೆಗೆ ಏನೇನು ಮಾಡಬೇಕು ಹಾಗೂ ಹೇಗೆ ಮಾಡಬೇಕು ಎಂಬುದರ ಬಗ್ಗೆ 11 ಪ್ರಶ್ನೆಗಳ ಪ್ರಶ್ನಾವಳಿ ಸಹ ನೀಡಲಾಗಿದೆ. ಅದನ್ನು ಸಾರ್ವಜನಿಕರಿಂದಲೇ ಭರ್ತಿ ಮಾಡಿಸಿ ಕೊಡಬೇಕಿದೆ.
ಕೆಪಿಸಿಸಿ ಅಧ್ಯಕ್ಷ ಡಾ|ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸಿರುವ ಮನೆ ಮನೆಗೆ ಕಾಂಗ್ರೆಸ್ ಅಭಿಯಾನ ಪ್ರತಿ ಹಂತದಲ್ಲೂ ಯಶಸ್ವಿಯಾಗುವಂತೆ ನೋಡಿಕೊಳ್ಳಬೇಕು ಎಂದು ಪದಾಧಿ ಕಾರಿಗಳು, ಜಿಲ್ಲಾಧ್ಯಕ್ಷರಿಗೆ ತಾಕೀತು ಮಾಡಲಾಯಿತು.
ರಾಜ್ಯದ 55 ಸಾವಿರ ಬೂತ್ ಸಮಿತಿಯ ಆರೂವರೆ ಲಕ್ಷ ಸದಸ್ಯರಿಗೆ ಇದಕ್ಕಾಗಿಯೇ ಗುರುತಿನ ಚೀಟಿ ಸಹ ನೀಡಲಾಗುವುದು. ಪ್ರತಿ ಬೂತ್ ಸಮಿತಿಯಲ್ಲಿರುವ 10 ಜನರ ತಂಡ ಪ್ರತಿ ಮನೆ ಮನೆಗೆ ತೆರಳಿ ಸರಕಾರದ ಸಾಧನೆಯ ಕಿರುಹೊತ್ತಿಗೆ ವಿತರಿಸಬೇಕು. ಜತೆಗೆ ಜನರಿಗೆ ಸರಕಾರದ ಸಾಧನೆ ಮನವರಿಕೆ ಮಾಡಿ ಕೊಡಬೇಕು. ಪ್ರತಿಪಕ್ಷಗಳು ರಾಜಕೀಯ ಕಾರಣಕ್ಕೆ ಪ್ರತಿಪಕ್ಷಗಳು ಟೀಕೆ ಮಾಡುತ್ತಿವೆ ಎಂಬುದನ್ನೂ ಅರ್ಥಮಾಡಿಸಬೇಕು ಎಂದು ಸಭೆಯಲ್ಲಿ ಡಾ|ಜಿ.ಪರಮೇಶ್ವರ್ ಸೂಚಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಎಸ್.ಆರ್. ಪಾಟೀಲ್, ದಿನೇಶ್ಗುಂಡೂ ರಾವ್ ಉಪಸ್ಥಿತರಿದ್ದರು.
ಪ್ರಶ್ನಾವಳಿಯಲ್ಲಿ ಏನಿದೆ?
ಕ್ಷೇತ್ರದ ಹೆಸರು, ಬೂತ್ ಸಂಖ್ಯೆ, ಮನೆಯ ಸಂಖ್ಯೆ, ಮನೆಯ ಯಜಮಾನರ ಹೆಸರು, ದೂರವಾಣಿ ಸಂಖ್ಯೆ, ಕುಟುಂಬ ಸದಸ್ಯರ ಸಂಖ್ಯೆ, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಬಗ್ಗೆ, ಉದ್ಯೋಗ, ಸಮುದಾಯ, ಸರಕಾರದ ಸವಲತ್ತು ತಲುಪಿರುವ ಬಗ್ಗೆ ಮಾಹಿತಿ, ಬೆಂಬಲಿಸುವ ಪಕ್ಷದ ಹೆಸರು ಸಮೇತ ಭರ್ತಿ ಮಾಡಬೇಕಿದೆ.
ಟಾಪ್ ನ್ಯೂಸ್
![Heavy rain in Amboli; Five feet water rise in Hidkal reservoir in one day](https://www.udayavani.com/wp-content/uploads/2024/07/hidkal-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ](https://www.udayavani.com/wp-content/uploads/2024/07/hdk-150x83.jpg)
Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ
![Transfer of 23 IAS officers including five District Collectors](https://www.udayavani.com/wp-content/uploads/2024/07/IAS-officer-150x83.jpg)
IAS transfer; ಐವರು ಜಿಲ್ಲಾಧಿಕಾರಿಗಳು ಸೇರಿ 23 ಐಎಎಸ್ ಅಧಿಕಾರಿಗಳ ವರ್ಗಾವಣೆ
![Raichur: ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ಆಯ್ಕೆ](https://www.udayavani.com/wp-content/uploads/2024/07/raichur-150x87.jpg)
Raichur: ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ನಿಯೋಜನೆ
![Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು](https://www.udayavani.com/wp-content/uploads/2024/07/bidanur-150x85.jpg)
Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು
![vidhana-Soudha](https://www.udayavani.com/wp-content/uploads/2024/07/vidhana-Soudha-1-150x90.jpg)
Karnataka Government: 7ನೇ ವೇತನ ಆಯೋಗದ ಶಿಫಾರಸಿಗೆ ಎಳ್ಳುನೀರು?
MUST WATCH
ಹೊಸ ಸೇರ್ಪಡೆ
![6-bng](https://www.udayavani.com/wp-content/uploads/2024/07/6-bng-150x90.jpg)
ನಿಯಮಗಳ ಉಲ್ಲಂಘನೆ, ಹೈಬೀಮ್ ಲೈಟ್ಗಳ ಬಳಕೆ: 5.79 ಲಕ್ಷ ದಂಡ
![Heavy rain in Amboli; Five feet water rise in Hidkal reservoir in one day](https://www.udayavani.com/wp-content/uploads/2024/07/hidkal-150x83.jpg)
Belagavi: ಅಂಬೋಲಿ ಭಾಗದಲ್ಲಿ ಭಾರಿ ಮಳೆ; ಹಿಡಕಲ್ ಜಲಾಶಯದಲ್ಲಿ ಒಂದೇ ದಿನ ಐದಡಿ ನೀರು ಏರಿಕೆ
![9 ತಿಂಗಳ ಹಿಂದೆ ನಾಪತ್ತೆಯಾದ ಮಗಳ ಬಗ್ಗೆ DCM ಪವನ್ ಕಲ್ಯಾಣ್ ಬಳಿ ದೂರು.. 9 ದಿನದಲ್ಲಿ ಪತ್ತೆ](https://www.udayavani.com/wp-content/uploads/2024/07/PAWAN-KALYAN-1-150x100.jpg)
9 ತಿಂಗಳ ಹಿಂದೆ ನಾಪತ್ತೆಯಾದ ಮಗಳ ಬಗ್ಗೆ DCM ಪವನ್ ಕಲ್ಯಾಣ್ ಬಳಿ ದೂರು.. 9 ದಿನದಲ್ಲಿ ಪತ್ತೆ
![belagBelagavi; ನೂತನ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರ ಸ್ವೀಕಾರ](https://www.udayavani.com/wp-content/uploads/2024/07/belag-150x83.jpg)
Belagavi; ನೂತನ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರ ಸ್ವೀಕಾರ
![Bellary: ಡ್ರೈವಿಂಗ್ ಸ್ಕೂಲ್ ಲಾಭಿ; ಆರ್ ಟಿಓ ಕಚೇರಿ ಸಿಬ್ಬಂದಿ ಮೇಲೆ ಹಲ್ಲೆ](https://www.udayavani.com/wp-content/uploads/2024/07/bellary-150x83.jpg)
Bellary: ಡ್ರೈವಿಂಗ್ ಸ್ಕೂಲ್ ಲಾಭಿ; ಆರ್ ಟಿಓ ಕಚೇರಿ ಸಿಬ್ಬಂದಿ ಮೇಲೆ ಹಲ್ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.