ಕಾಂಗ್ರೆಸ್ ಗುತ್ತಿಗೆದಾರ ಸ್ನೇಹಿ: ಮುರಳೀಧರರಾವ್
Team Udayavani, Apr 27, 2018, 12:35 PM IST
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಐದು ವರ್ಷದಲ್ಲಿ ಜನಪರ ಕೆಲಸ ಮಾಡದೆ ಗುತ್ತಿಗೆದಾರರಿಗೆ ಅನುಕೂಲ ಮಾಡಿಕೊಡುವ ಯೋಜನೆಗಳಿಗೆ ಒಲವು ತೋರುವ ಮೂಲಕ ಗುತ್ತಿಗೆದಾರ ಸ್ನೇಹಿ ಸರ್ಕಾರವೆನಿಸಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್ ಆರೋಪಿಸಿದರು.
ಗುರುವಾರ ಫೇಸ್ಬುಕ್ ಲೈವ್ ಕಾರ್ಯಕ್ರಮದಲ್ಲಿ ಯುವಜನತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ರಾಜ್ಯ ಕಾಂಗ್ರೆಸ್ ಸರ್ಕಾರ ಜನಹಿತಕ್ಕೆ ಕಾರ್ಯ ನಿರ್ವಹಿಸುವುದಕ್ಕಿಂತ ಗುತ್ತಿಗೆದಾರರ ಅನುಕೂಲಕ್ಕೆ ಕಾರ್ಯ ನಿರ್ವಹಿಸಿದೆ. ಗುತ್ತಿಗೆದಾರರ ಲಾಬಿ ಸೃಷ್ಟಿಯಾಗಿದ್ದು, ಎಲ್ಲ ಹಂತಗಳಲ್ಲೂ ಭ್ರಷ್ಟಾಚಾರ ವ್ಯಾಪಿಸಿದೆ ಎಂದು ಹೇಳಿದರು.
ಇಂದಿರಾ ಕ್ಯಾಂಟೀನ್ ಸೇರಿದಂತೆ ಹಲವು ಭಾಗ್ಯ ಯೋಜನೆಗಳ ಲಾಭ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಆದರೆ ಕೇಂದ್ರ ಸರ್ಕಾರದ ಯೋಜನೆಗಳ ಲಾಭ ಫಲಾನುಭವಿಗಳಿಗೆ ತಲುಪುತ್ತಿದೆ. ಕೇಂದ್ರ ಸರ್ಕಾರವು ಮೂರ್ನಾಲ್ಕು ವರ್ಷಗಳಲ್ಲಿ ಉತ್ತಮ ಆಡಳಿತ ನೀಡಿದ್ದು, ಉತ್ತಮ ಆಡಳಿತವು ಕೇಂದ್ರದ ಕಾರ್ಯಸೂಚಿಯಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿರುವ ಬಿಜೆಪಿಗೆ ರೈತರ ಸಮಸ್ಯೆಗೆ ಸ್ಪಂದಿಸಿ ಅವರ ಆದಾಯ ದ್ವಿಗುಣಗೊಳಿಸಿ, ಆತ್ಮಹತ್ಯೆ ತಡೆಯುವುದು ಮುಖ್ಯ ಕಾರ್ಯಸೂಚಿಯಾಗಲಿದೆ. ನೀರಾವರಿ ಕ್ಷೇತ್ರಕ್ಕೆ ಒಂದು ಲಕ್ಷ ಕೋಟಿ ರೂ. ಮೀಸಲಿಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಈಗಾಗಲೇ ಪ್ರಕಟಿಸಿದ್ದಾರೆ. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರವು ರೈತರ ಕಲ್ಯಾಣಕ್ಕೆ ಕಾಯ್ದಿರಿಸಿದ ನಿಧಿಯನ್ನೂ ದುರುಪಯೋಗಪಡಿಸಿಕೊಂಡಿದೆ ಎಂದು ತಿಳಿಸಿದರು.
ರಾಜ್ಯದೆಲ್ಲೆಡೆ ಭಯದ ವಾತಾವರಣ ಸೃಷ್ಟಿಯಾಗಿದ್ದು, ಜನ ಮನೆಯಿಂದ ಹೊರಬರಲು ಆತಂಕಪಡಬೇಕಾದ ಸ್ಥಿತಿ ಇದೆ. ಕಾಂಗ್ರೆಸ್ ಪಕ್ಷವು ದೇಶ ವಿರೋಧಿ ನಿಲುವಿನ ಪಿಎಫ್ಐ, ಎಸ್ಡಿಪಿಐ ಸಂಘಟನೆಗಳೊಂದಿಗೆ ಮೈತ್ರಿ ಮಾಡಿಕೊಂಡಿದೆ. ಬಿಜೆಪಿಯು ಭಯೋತ್ಪಾದಕ ಜಾಲವನ್ನು ನಿರ್ನಾಮ ಮಾಡಿ ದೇಶ ವಿರೋಧಿ ಶಕ್ತಿಗಳನ್ನು ಮಟ್ಟ ಹಾಕುವ ಏಕೈಕ ಪಕ್ಷ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ
Bengaluru: ಇಬ್ಬರು ಡ್ರಗ್ಸ್ ಪೆಡ್ಲರ್ ಸೆರೆ: 51 ಕೆ.ಜಿ. ಗಾಂಜಾ ಜಪ್ತಿ
Bengaluru: ಮೋಜಿನ ಜೀವನಕ್ಕೆ ಸರ ಕದೀತಿದ್ದ ಯುವಕನ ಸೆರೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ
Israel ಸರ್ಜಿಕಲ್ ಸ್ಟ್ರೈಕ್: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್ ಬಾಂಬ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.