ಕಾಂಗ್ರೆಸ್‌ ಹೊಸ ನಡೆ : ಇಂದಿರಾ ಹೆಸರಲ್ಲಿ ಮತಯಾಚನೆ


Team Udayavani, Jul 22, 2017, 6:20 AM IST

Indira-nade-22-7.jpg

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷವಿರುವಾಗಲೇ ಕಾಂಗ್ರೆಸ್‌ ಸಮರೋಪಾದಿಯಲ್ಲಿ ಸಿದ್ಧತೆ ನಡೆಸಿದ್ದು, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹೆಸರಲ್ಲಿ ಮತ ಕೇಳಲು ನಿರ್ಧರಿಸಿದೆ. ಜತೆಗೆ ತಳಮಟ್ಟದಿಂದಲೇ ಪಕ್ಷ ಸಂಘಟನೆಗೆ ಮುಂದಾಗಿರುವ ಅದು, ‘ಕಾಂಗ್ರೆಸ್‌ ನಡಿಗೆ ಮರಳಿ ಜನರ ಕಡೆಗೆ’ ಎಂಬ ಘೋಷ ವಾಕ್ಯದೊಂದಿಗೆ ಮನೆ ಮನೆಗೆ ಸರಕಾರದ ಸಾಧನೆಗಳನ್ನು ಮುಟ್ಟಿಸಲು ತೀರ್ಮಾನಿಸಿದೆ.

ಈಗಾಗಲೇ ಬಿಜೆಪಿ ವಿಸ್ತಾರಕ ಯೋಜನೆ ಪರಿಚಯಿಸಿ, ಬೂತ್‌ ಮಟ್ಟದಲ್ಲಿ ಪಕ್ಷ ಸಂಘಟಿಸಿ ಕೇಡರ್‌ ಬೆಳೆಸಲು ಮುಂದಾಗಿದೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್‌ ತನ್ನ ಸಮೂಹದ ಪಕ್ಷ ಎಂಬ ಹಣೆಪಟ್ಟಿಯಿಂದ ಹೊರಬಂದು ಕೇಡರ್‌ ಬೆಳೆಸುವತ್ತ ಗಮನಹರಿಸಿದೆ. ಕೆಪಿಸಿಸಿಗೆ 171 ಪದಾಧಿಕಾರಿಗಳ ನೇಮಕ ಮಾಡಿದ ಮೇಲೆ ಇದೇ ಮೊದಲ ಬಾರಿಗೆ ಎಐಸಿಸಿ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌, ಕೆಪಿಸಿಸಿ ಅಧ್ಯಕ್ಷ ಡಾ| ಜಿ. ಪರಮೇಶ್ವರ್‌, ಸಿಎಂ ಸಿದ್ದರಾಮಯ್ಯ ನೇತೃತ್ವ ದಲ್ಲಿ ಸಭೆ ನಡೆದಿದ್ದು, ಪಕ್ಷದ ಮುಂದಿನ ನಡೆ ಕುರಿತು ಚರ್ಚಿಸಲಾಯಿತು.

ನವೆಂಬರ್‌ನಲ್ಲಿ ಇಂದಿರಾಗಾಂಧಿಯವರ ಜನ್ಮಶತಮಾನೋತ್ಸವ ನಡೆಯಲಿದ್ದು, ಈ ಅವಕಾಶವನ್ನು ಪಕ್ಷ ಬಲವರ್ಧನೆಗೆ ಬಳಸಿಕೊಳ್ಳಲು ತೀರ್ಮಾನಿಸ ಲಾಗಿದೆ. ನ. 1ರಿಂದ 18ರ ವರೆಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಒಂದು ದಿನದ ಪಾದ ಯಾತ್ರೆ ನಡೆಸಲಾಗುತ್ತದೆ. ‘ಇಂದಿರಮ್ಮ- 100’, ‘ಇಂದಿರಮ್ಮನ ಹಾದಿಯಲ್ಲಿ ಜನ ಸಾಮಾನ್ಯರ ಸೇವೆಯಲ್ಲಿ ಕಾಂಗ್ರೆಸ್‌’ ಎಂಬ ಘೋಷಣೆಯಡಿ ರಾಜ್ಯದ ಕಾಂಗ್ರೆಸ್‌ ಸರಕಾರದ ಸಾಧನೆ, ಇಂದಿರಾ ಗಾಂಧಿಯವರ ಕಾರ್ಯಕ್ರಮ, ಬದ್ಧತೆಯನ್ನು ಜನ ಸಾಮಾನ್ಯರಿಗೆ ತಲುಪಿಸಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ  ಸಭೆಯ ಬಳಿಕ ಮಾಧ್ಯಮಕ್ಕೆ ಮಾಹಿತಿ ನೀಡಿದರು. ತಳಮಟ್ಟದಲ್ಲಿ ಪಕ್ಷ ಬಲಗೊಳಿಸುವ ಜತೆಗೆ, ಎನ್‌ಡಿಎ ಸರಕಾರದ ವೈಫ‌ಲ್ಯಗಳ ಬಗ್ಗೆ ಅರಿವು ಮೂಡಿಸಲು ರಾಜ್ಯಾದ್ಯಂತ ಸಮಾವೇಶ ಮತ್ತು ನ. 19ರಂದು ರಾಜ್ಯ ಮಟ್ಟದ ಸಮಾವೇಶ ನಡೆಸುವುದಾಗಿ ಹೇಳಿದರು.

ಆಗಸ್ಟ್‌ನಲ್ಲಿ ಸಂಘಟನ ಹೊಣೆ: ಪ್ರತಿ ಜಿಲ್ಲೆಗೆ ಒಬ್ಬ ಉಪಾಧ್ಯಕ್ಷ ಮತ್ತು ಇಬ್ಬರು ಪ್ರಧಾನ ಕಾರ್ಯದರ್ಶಿಗಳನ್ನು ನಿಯೋಜಿಸಲಾಗಿದೆ. ಇವರು ಚುನಾವಣೆ ಮುಗಿಯುವವರೆಗೂ ತಮ್ಮ ತಮ್ಮ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯ ಸಂಪೂರ್ಣ ಜವಾಬ್ದಾರಿ ಹೊಂದಿರುತ್ತಾರೆ. ಜತೆಗೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಬ್ಬ ಪ್ರಧಾನ ಕಾರ್ಯದರ್ಶಿಯನ್ನು ನೇಮಕ ಮಾಡಲಾಗಿದೆ. ಜತೆಗೆ 70 ಸಾವಿರ ಬೂತ್‌ಗಳನ್ನು ಗುರುತಿಸಲಾಗಿದ್ದು, ಆಯಾ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬೂತ್‌ ಏಜೆಂಟರ ನೇಮಕ ಮತ್ತು ಸಮಿತಿಗಳನ್ನು ರಚಿಸುವ ಉಸ್ತುವಾರಿಯನ್ನು ಪ್ರಧಾನ ಕಾರ್ಯದರ್ಶಿಗೆ ನೀಡಲಾಗಿದೆ. ಆಗಸ್ಟ್‌ ಅಂತ್ಯಕ್ಕೆ ಈ ಎಲ್ಲ ಕೆಲಸ ಪೂರ್ಣಗೊಳಿಸಬೇಕು ಎಂದು ಸೂಚಿಸಲಾಗಿದೆ.

ಸೆಪ್ಟಂಬರ್‌ನಲ್ಲಿ ಮನೆ ಮನೆಗೆ: ಬೂತ್‌ ಮಟ್ಟದ ಸಮಿತಿ ಸೆಪ್ಟಂಬರ್‌ನಲ್ಲಿ ಮನೆ ಮನೆಗೆ ತೆರಳಿ ರಾಜ್ಯದ ಕಾಂಗ್ರೆಸ್‌ ಸರಕಾರದ ಸಾಧನೆ ಮತ್ತು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರದ ವೈಫ‌ಲ್ಯಗಳ ಬಗ್ಗೆ ಅರಿವು ಮೂಡಿಸಲಿದೆ. ಇದಕ್ಕೆ ‘ಕಾಂಗ್ರೆಸ್‌ ನಡಿಗೆ ಮರಳಿ ಜನರ ಬಳಿಗೆ’ ಎಂಬ ಘೋಷವಾಕ್ಯ ಇಡಲಾಗಿದೆ.

ನವೆಂಬರ್‌ನಲ್ಲಿ ಇಂದಿರಮ್ಮ -100: ನವೆಂಬರ್‌ನಲ್ಲಿ ಇಂದಿರಾ ಗಾಂಧಿಯವರ ಜನ್ಮಶತಮಾನೋತ್ಸವ ನಡೆಯಲಿದ್ದು, ಈ ಅವಕಾಶವನ್ನು ಪಕ್ಷ ಬಲವರ್ಧನೆಗೆ ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ. ನ. 1ರಿಂದ 18ರ ವರೆಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಒಂದು ದಿನದ ಪಾದಯಾತ್ರೆ ನಡೆಸಲಾಗುತ್ತದೆ. ‘ಇಂದಿರಮ್ಮ-100’, ‘ಇಂದಿರಮ್ಮನ ಹಾದಿಯಲ್ಲಿ ಜನಸಾಮಾನ್ಯರ ಸೇವೆಯಲ್ಲಿ ಕಾಂಗ್ರೆಸ್‌’ ಎಂಬ ಘೋಷಣೆಯಡಿ ರಾಜ್ಯದ ಕಾಂಗ್ರೆಸ್‌ ಸರಕಾರದ ಸಾಧನೆ, ಇಂದಿರಾ ಗಾಂಧಿಯವರ ಕಾರ್ಯಕ್ರಮ, ಬದ್ಧತೆಯನ್ನು ಜನಸಾಮಾನ್ಯರಿಗೆ ತಲುಪಿಸಲಾಗುತ್ತದೆ.

ಡಿಸೆಂಬರ್‌ನಲ್ಲಿ ಎರಡನೇ ಬಾರಿ ಬೂತ್‌ ಮಟ್ಟಕ್ಕೆ ಹೋಗಿ ಸರಕಾರದ ಸಾಧನೆಯನ್ನು ಮನೆ ಮನೆಗೆ ತಲುಪಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕುರಿತು ಪೂರ್ಣ ವಿವರವನ್ನು ಪದಾಧಿಕಾರಿಗಳಿಗೆ ನೀಡಲಾಗಿದ್ದು, ಅದರ ಆಧಾರದಲ್ಲಿ ಪಕ್ಷ ಸಂಘಟನೆಗೆ ಕ್ರಮ ವಹಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಬಿಜೆಪಿ ವಿಸ್ತಾರಕ ಯೋಜನೆಗೂ ಕಾಂಗ್ರೆಸ್‌ ಹಮ್ಮಿಕೊಂಡಿರುವ ಬೂತ್‌ ಮಟ್ಟದಿಂದ ಸಂಘಟನೆ ಕಾರ್ಯಕ್ಕೂ ಯಾವುದೇ ಸಂಬಂಧ ಇಲ್ಲ. ನಮ್ಮ ಕಾರ್ಯವಿಸ್ತಾರದ ರೀತಿಯೇ ಬೇರೆ. ನಮ್ಮ ಪಕ್ಷಕ್ಕೆ  132 ವರ್ಷದ ಇತಿಹಾಸವಿದ್ದರೆ ಬಿಜೆಪಿ ಕೇವಲ 37 ವರ್ಷದ ಪಕ್ಷ.
– ಡಾ| ಜಿ. ಪರಮೇಶ್ವರ್‌, ಕೆಪಿಸಿಸಿ ಅಧ್ಯಕ್ಷ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

1-bjp

Water pollution; ಮಲಿನ ಯಮುನೆಯಲ್ಲಿ ಮಿಂದು ಬಿಜೆಪಿ ದಿಲ್ಲಿ ಘಟಕದ ಅಧ್ಯಕ್ಷ ಪ್ರತಿಭಟನೆ

1-prr

Piracy;ಕಳೆದ ವರ್ಷ 22,400 ಕೋಟಿ ರೂ. ನಷ್ಟ!

1-kashmir

Kashmir; ರಾಜ್ಯ ಸ್ಥಾನಮಾನ ವಾಪಸ್‌ ಮಾಡಿ: ಪ್ರಧಾನಿಗೆ ಒಮರ್‌ ಮನವಿ

Kaup: ಮಾರಿಯಮ್ಮ ದೇವಿಯ ಸ್ವರ್ಣ ಗದ್ದುಗೆ: ಸ್ವರ್ಣ ಸಮರ್ಪಣೆಗೆ ಅಮಿತೋತ್ಸಾಹ

Kaup: ಮಾರಿಯಮ್ಮ ದೇವಿಯ ಸ್ವರ್ಣ ಗದ್ದುಗೆ: ಸ್ವರ್ಣ ಸಮರ್ಪಣೆಗೆ ಅಮಿತೋತ್ಸಾಹ

gold

Kerala; ಆಭರಣ ಘಟಕಕ್ಕೆ ದಾಳಿ: ದಾಖಲೆ ಇಲ್ಲದ 104 ಕೆ.ಜಿ. ಚಿನ್ನ ವಶ!

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ.ವಂಚನೆ

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ.ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Results: 8, 9, 10ನೇ ತರಗತಿಯ ಮಧ್ಯ ವಾರ್ಷಿಕ ಪರೀಕ್ಷೆ ಫ‌ಲಿತಾಂಶಕ್ಕೆ ತಡೆ

Results: 8, 9, 10ನೇ ತರಗತಿಯ ಮಧ್ಯ ವಾರ್ಷಿಕ ಪರೀಕ್ಷೆ ಫ‌ಲಿತಾಂಶಕ್ಕೆ ತಡೆ

CM Siddaramaiah: ನೀತಿಸಂಹಿತೆ ಬಳಿಕ ಜಾತಿ ಗಣತಿ ತೀರ್ಮಾನ

CM Siddaramaiah: ನೀತಿಸಂಹಿತೆ ಬಳಿಕ ಜಾತಿ ಗಣತಿ ತೀರ್ಮಾನ

Siddaramaiah: ಅನಧಿಕೃತ ಕಟ್ಟಡ ಕುಸಿದರೆ ಅಧಿಕಾರಿಗಳೇ ಹೊಣೆ

Siddaramaiah: ಅನಧಿಕೃತ ಕಟ್ಟಡ ಕುಸಿದರೆ ಅಧಿಕಾರಿಗಳೇ ಹೊಣೆ

Congress: ಸಿ.ಪಿ. ಯೋಗೇಶ್ವರ್‌ಗೆ ಸಿ.ಟಿ. ರವಿ ಸಹಕಾರವಿದೆ: ಡಿ.ಕೆ.ಸು. ಬಾಂಬ್‌

Congress: ಸಿ.ಪಿ. ಯೋಗೇಶ್ವರ್‌ಗೆ ಸಿ.ಟಿ. ರವಿ ಸಹಕಾರವಿದೆ: ಡಿ.ಕೆ.ಸು. ಬಾಂಬ್‌

congress

Maharashtra Election; ಕಾಂಗ್ರೆಸ್‌ 48 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

1-bjp

Water pollution; ಮಲಿನ ಯಮುನೆಯಲ್ಲಿ ಮಿಂದು ಬಿಜೆಪಿ ದಿಲ್ಲಿ ಘಟಕದ ಅಧ್ಯಕ್ಷ ಪ್ರತಿಭಟನೆ

death

Pimpri Chinchwad; ನೀರಿನ ಟ್ಯಾಂಕ್‌ ಕುಸಿತ: 5 ಕಾರ್ಮಿಕರು ಸಾ*ವು

Terror 2

Pakistan; ಖೈಬರ್‌ ಪ್ರಾಂತದಲ್ಲಿ 9 ಭಯೋತ್ಪಾದಕರ ಹ*ತ್ಯೆ

suicide

Ayodhya: ಹೆಚ್ಚುವರಿ ಡೀಸಿ ಅನುಮಾನಾಸ್ಪದ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.