ಭ್ರಷ್ಟಾಚಾರ ನಿವಾರಣೆ ನಮ್ಮ ಹೊಣೆ
Team Udayavani, Jan 5, 2018, 11:29 AM IST
ಯಲಹಂಕ: ಭ್ರಷ್ಟಾಚಾರ, ಅನೈತಿಕತೆ, ತಾಂಡವವಾಡುತ್ತಿದೆ ಎಂದು ಎಲ್ಲರೂ ಆರೋಪಿಸುತ್ತಾರೆ. ಆದರೆ ಈ ಸ್ಥಿತಿಗೆ ನಾವೇ ಕಾರಣರಾಗಿದ್ದು, ಪರಿಸ್ಥಿತಿ ಸುಧಾರಿಸುವ ಹೊಣೆಗಾರಿಕೆಯನ್ನು ಕೂಡ ನಾವೇ ಹೊರಬೇಕು ಎಂದು ಸುವರ್ಣ ಕರ್ನಾಟಕ ಜನಶಕ್ತಿ ವೇದಿಕೆಯ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ಹೇಳಿದರು.
ಸುವರ್ಣ ಕರ್ನಾಟಕ ಜನಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆರೋಗ್ಯವಂತ ಸಮಾಜ ಕಟ್ಟುವ ಕೆಲಸ ಇಂದಿನ ತುರ್ತು ಅಗತ್ಯವಾಗಿದೆ. ಇದರೊಂದಿಗೆ ಸಾರ್ವಜನಿಕ ಬದುಕಿನಲ್ಲಿ ಶಿಸ್ತು ಬೆಳೆಸಬೇಕಿದೆ. ಈ ನಿಟ್ಟಿನಲ್ಲಿ ಸಂಘಟನೆಯ ಕಾರ್ಯಕರ್ತರು ಸಕ್ರಿಯರಾಗಿ ಕಾರ್ಯೋನ್ಮುಖರಾದಾಗ ಮಾತ್ರ ಸಂಘಟನೆ ಜನರ ವಿಶ್ವಾಸ ಗಳಿಸಲು ಸಾಧ್ಯ ಎಂದರು.
ಹಿರಿಯ ಪತ್ರಕರ್ತ ಹರಿಶ್ಚಂದ್ರ ಮಾತನಾಡಿ, ರಾಜಕೀಯ ಪಕ್ಷಗಳು ತಿದ್ದಲು ಸಾದ್ಯವಾಗದಂತಹ ಭ್ರಷ್ಟ ವ್ಯವಸ್ಥೆಯನ್ನು ಲೇಖನಿಯಿಂದ ತಿದ್ದುವ ಕೆಲಸವಾಗಬೇಕು. ಇತ್ತೀಚೆಗೆ ಮಾಧ್ಯಮಗಳು ಸಂವೇದನೆ ಬದಲಿಗೆ ಸಂಪಾದನೆಯ ಉದ್ದಿಮೆಗಳಾಗಿದ್ದು, ಮನುಷ್ಯನ ಮನೋಧರ್ಮದ ಮೇಲೂ ಗಂಭೀರ ಪರಿಣಾಮ ಬೀರಿವೆ ಎಂದು ಆತಂಕ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಸದಸ್ಯ ನಾರಾಯಣಸ್ವಾಮಿ, ದೇವನಹಳ್ಳಿ ಶಾಸಕ ಪಿಳ್ಳಮುನಿಶಾಮಪ್ಪ, ಸಂಘಟನೆ ಉಪಾಧ್ಯಕ್ಷ ಎಂ.ಡಿ.ಪುಟ್ಟೇಗೌಡ ಮತ್ತಿತರರು ಹಾಜರಿದ್ದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Flipkart Big Billion Day ಸೆ. 27 ರಿಂದ ಆರಂಭ
Bengaluru: ನಮ್ಮ ಕ್ಲಿನಿಕ್ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
Bengaluru: ʼರಾಹುಲ್ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್ ವಿರುದ್ಧ ಕೇಸ್
Bengaluru: ಉದ್ಯಮಿಗೆ ಹನಿಟ್ರ್ಯಾಪ್ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.