![1-mofdd](https://www.udayavani.com/wp-content/uploads/2024/07/1-mofdd-415x270.jpg)
ಕೌನ್ಸೆಲಿಂಗ್ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ
Team Udayavani, Feb 4, 2017, 12:22 PM IST
![pricipal.jpg](https://www.udayavani.com/wp-content/uploads/2017/02/4/pricipal-462x465.jpg)
ಬೆಂಗಳೂರು: ಕೌನ್ಸೆಲಿಂಗ್ ನೆಪದಲ್ಲಿ ಪ್ರಾಂಶುಪಾಲನೊಬ್ಬ ವಿದ್ಯಾರ್ಥಿನಿಯರನ್ನು ತನ್ನ ಕೊಠಡಿಗೆ ಕರೆಸಿಕೊಂಡು ಲೈಂಗಿಕ ಕಿರುಕುಳ ನೀಡುತ್ತಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಸದಾಶಿವ ನಗರ ಠಾಣೆ ಪೊಲೀಸರು ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲ ಚತ್ತೀಸ್ಗಢ ಮೂಲದ ಕುಮಾರ್ ಠಾಕೂರ್ ಎಂಬುವವರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಜ.31ರಂದು ಜಾಮೀನು ಪಡೆದಿರುವ ಅವರು ಬಿಡುಗಡೆಯಾಗಿದ್ದಾರೆ.
ಪ್ರಾಂಶುಪಾಲನ ಕಿರುಕುಳ ಸಂಬಂಧ ಮಕ್ಕಳ ಸಹಾಯವಾಣಿಗೆ ಬಂದ ಕರೆ ಆಧರಿಸಿ ಪ್ರಾಥಮಿಕ ತನಿಖೆ ನಡೆಸಿದ ಸಹಾಯವಾಣಿ ಅಧಿಕಾರಿಗಳು ಸದಾಶಿವನಗರ ಠಾಣೆಗೆ ದೂರು ನೀಡಿದ್ದರು. ದೂರಿನ ಅನ್ವಯ ಆರೋಪಿ ಪ್ರಾಂಶುಪಾಲರನ್ನು ಪೊಲೀಸರು ಬಂಧಿಸಿದ್ದರು. ಕುಮಾರ್ ಠಾಕೂರ್ ಕಳೆದ ಮೂರು ವರ್ಷದಿಂದ ಸದಾಶಿವ ನಗರ ಠಾಣಾ ವ್ಯಾಪ್ತಿಯ ಕೇಂದ್ರ ಸರ್ಕಾರಿ ಶಾಲೆಯಲ್ಲಿ ಪ್ರಾಂಶುಪಾಲರಾಗಿದ್ದರು. ಓದಿನಲ್ಲಿ ಹಿಂದಿರುವ ವಿದ್ಯಾರ್ಥಿಗಳಿಗೆ 2016ರ ಡಿ.23 ರಿಂದ ಜ.2ರವರೆಗೆ ವಿಶೇಷ ಸ್ಟಡಿ ಕ್ಯಾಂಪ್ ಆಯೋಜಿಸಲಾಗಿತ್ತು.
ಸಂತ್ರಸ್ತ ವಿದ್ಯಾರ್ಥಿನಿ ಕೂಡ ಓದುವುದರಲ್ಲಿ ಹಿಂದುಳಿದಿದ್ದ ಕಾರಣ ಪ್ರಾಂಶುಪಾಲ ಆಕೆಯನ್ನು ತಮ್ಮ ಕಚೇರಿಗೆ ಕರೆಸಿಕೊಂಡು 20 ನಿಮಿಷಗಳ ಕಾಲ ಕೌನ್ಸೆಲಿಂಗ್ ನಡೆಸಿದ್ದರು. ಈ ವೇಳೆ ಪ್ರಾಂಶುಪಾಲ ಕುಮಾರ್ ವಿದ್ಯಾರ್ಥಿನಿ ಬಳಿ ಅಶ್ಲೀಲವಾಗಿ ವರ್ತಿಸಿದ್ದು, ಅಶ್ಲೀಲ ಪ್ರಶ್ನೆಗಳನ್ನು ಕೇಳಿದ್ದಾನೆ. ಇದರಿಂದ ಗಾಬರಿಗೊಂಡು ಸಂತ್ರಸ್ತ ವಿದ್ಯಾರ್ಥಿನಿ ಹೊರ ಬಂದು ನಡೆದ ಘಟನೆಯನ್ನು ತನ್ನ ಸ್ನೇಹಿತೆಯರು ಮತ್ತು ಶಿಕ್ಷಕರಿಗೆ ಹೇಳಿದ್ದಳು.
ಜ.14 ರಂದು ಮಕ್ಕಳ ಸಹಾಯವಾಣಿಗೆ ಶಾಲೆಯಿಂದ ಅನಾಮಧೇಯ ಫೋನ್ ಕರೆ ಬಂದಿದ್ದು, ಪ್ರಾಂಶುಪಾಲನ ವರ್ತನೆ ಬಗ್ಗೆ ಹೇಳಿಕೊಂಡಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸಹಾಯವಾಣಿ ಅಧಿಕಾರಿಗಳು ತನಿಖೆ ನಡೆಸಿ ಪ್ರಾಂಶುಪಾಲನ ವಿರುದ್ಧ ಸದಾಶಿವ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನನ್ವಯ ಪೊಕೊÕà ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿತ್ತು.
ಅಶ್ಲೀಲ ಪದ ಬಳಸಿಲ್ಲ: ಶಾಲಾ ವಿದ್ಯಾರ್ಥಿನಿಯರು ಮತ್ತು ಶಿಕ್ಷಕಿಯರ ಹೇಳಿಕೆ ಮೇರೆಗೆ ಪ್ರಾಂಶುಪಾಲರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಾನು ಅಶ್ಲೀಲ ಪದಗಳು ಬಳಸಿ ಮಾತನಾಡಿಸಿಲ್ಲ. ಬಾಯ್ಫ್ರೆಂಡ್ ಇದ್ದಾನಾ ನಿನಗೆ’ ಎಂದು ಮಾತ್ರ ಕೇಳಿದ್ದಾಗಿ ಹೇಳಿಕೆ ನೀಡಿದ್ದಾರೆ.
ಶಾಲೆಗೆ ಉಗ್ರಪ್ಪ ಭೇಟಿ: ಮಾಹಿತಿ ಸಂಗ್ರಹ
ಬೆಂಗಳೂರು: ಪ್ರಾಂಶುಪಾಲರಿಂದಲೇ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳದ ಅರೋಪ ಕೇಳಿಬಂದಿರುವ ಸದಾಶಿವನಗರದ ಕೇಂದ್ರೀಯ ವಿದ್ಯಾಲಯಕ್ಕೆ ಲೈಂಗಿಕ
ಕಿರುಕುಳ ದೌರ್ಜನ್ಯ ತಡೆ ಸಮಿತಿ ಅಧ್ಯಕ್ಷ ವಿ.ಎಸ್.ಉಗ್ರಪ್ಪ ಶುಕ್ರವಾರ ಭೇಟಿ ನೀಡಿ ಮಾಹಿತಿ ಪಡೆದರು.
ಈ ವೇಳೆ ಶಾಲೆಯು, ಲೈಂಗಿಕ ದೌರ್ಜನ್ಯ ತಡೆ ಸಂಬಂಧ ವಿಶಾಖ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಮಾರ್ಗಸೂಚಿಗಳನ್ನು ಅನುಸರಿಸದಿರುವುದು ಕಂಡುಬಂದಿದೆ. ಇದರಿಂದ ಶಾಲಾ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡ ಉಗ್ರಪ್ಪ ಅವರು, ವಿಶೇಷ ತರಗತಿ ನೆಪದಲ್ಲಿ ವಿದ್ಯಾರ್ಥಿಗಳನ್ನು ಶಾಲೆಯಲ್ಲೇ ಉಳಿಸಿಕೊಂಡಾಗ ಅವರ ಸುರಕ್ಷತೆಗೆ ಯಾವುದೇ ಕ್ರಮ ಕೈಗೊಳ್ಳದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಯಾವ ಕಾರಣಕ್ಕಾಗಿ ಶಾಲೆ ಬಳಿಕ ವಿದ್ಯಾರ್ಥಿನಿಯರನ್ನು ಶಾಲೆಯಲ್ಲಿ ಉಳಿಸಿಕೊಳ್ಳಲಾ ಗುತ್ತಿತ್ತು ಮತ್ತು ರಾತ್ರಿ ವೇಳೆಯೇ ಏಕೆ ವಿಶೇಷ ತರಗತಿ ನಡೆಸುತ್ತಿದ್ದಿರಿ ಎಂಬ ಬಗ್ಗೆ ಉತ್ತರಿಸುವಂತೆ ಸೂಚಿಸಿದರು.
ಟಾಪ್ ನ್ಯೂಸ್
![1-mofdd](https://www.udayavani.com/wp-content/uploads/2024/07/1-mofdd-415x270.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು](https://www.udayavani.com/wp-content/uploads/2024/07/6-2-150x90.jpg)
Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು
![Assault Case: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ](https://www.udayavani.com/wp-content/uploads/2024/07/5-2-150x90.jpg)
Assault Case: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ
![Arrested: ಕಂಪನಿಗಳ ಹೆಸರಿನಲ್ಲಿ ಬಟ್ಟೆ ಮಾರಾಟ; ಆರೋಪಿ ಬಂಧನ](https://www.udayavani.com/wp-content/uploads/2024/07/4-2-150x90.jpg)
Arrested: ಕಂಪನಿಗಳ ಹೆಸರಿನಲ್ಲಿ ಬಟ್ಟೆ ಮಾರಾಟ; ಆರೋಪಿ ಬಂಧನ
![3](https://www.udayavani.com/wp-content/uploads/2024/07/3-3-150x90.jpg)
Supplier: ಬೇಗ ಊಟ ತನ್ನಿ ಎಂದಿದ್ದಕ್ಕೆ ಆಶ್ಲೀಲ ಸನ್ನೆ ತೋರಿದ ಸಪ್ಲ್ಯೈಯರ್; ವೈರಲ್
![ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಪತ್ತೆಗಾಗಿ 250 ಸಿಸಿ ಕ್ಯಾಮೆರಾ ಶೋಧಿಸಿದ್ದ ಪೊಲೀಸರು](https://www.udayavani.com/wp-content/uploads/2024/07/2-2-150x90.jpg)
ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಪತ್ತೆಗಾಗಿ 250 ಸಿಸಿ ಕ್ಯಾಮೆರಾ ಶೋಧಿಸಿದ್ದ ಪೊಲೀಸರು
MUST WATCH
ಹೊಸ ಸೇರ್ಪಡೆ
![1-mofdd](https://www.udayavani.com/wp-content/uploads/2024/07/1-mofdd-150x98.jpg)
NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ
![SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್](https://www.udayavani.com/wp-content/uploads/2024/07/11-2-150x90.jpg)
SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್
![1-mangaluru](https://www.udayavani.com/wp-content/uploads/2024/07/1-mangaluru-150x97.jpg)
Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು
![10](https://www.udayavani.com/wp-content/uploads/2024/07/10-2-150x90.jpg)
ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು
![Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ](https://www.udayavani.com/wp-content/uploads/2024/07/Modi-4-150x92.jpg)
Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.