ಖೋಟಾನೋಟು ಪ್ರಕರಣ: ಎನ್ಐಎ ಕಸ್ಟಡಿಗೆ ಶುಕ್ರುದ್ಧೀನ್
Team Udayavani, Nov 2, 2018, 11:26 AM IST
ಬೆಂಗಳೂರು: ರಾಜ್ಯದ ಖೋಟಾನೋಟು ಸರಬರಾಜು ಪ್ರಕರಣದ ತನಿಖೆ ತೀವ್ರಗೊಳಿಸಿರುವ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳು, ಪ್ರಕರಣದ ಕಿಂಗ್ ಪಿನ್ ಎಂದು ಪರಿಗಣಿಸಲಾಗಿರುವ ಪಶ್ಚಿಮ ಬಂಗಾಳದ ಶುಕ್ರುದ್ಧೀನ್ ಶೇಕ್ ಅಲಿಯಾಸ್ ಶುಕ್ರುದ್ಧೀನ್ ಅನ್ಸಾರಿಯನ್ನು 10 ದಿನಗಳ ಕಾಲ ವಶಕ್ಕೆ ಪಡೆದಿದ್ದಾರೆ.
ಕೆಲ ದಿನಗಳ ಹಿಂದೆ ಪಶ್ಚಿಮಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಬಂಧಿಸಲಾದ ಆರೋಪಿಯನ್ನು ಎನ್ಐಎ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿರುವ ಅಧಿಕಾರಿಗಳು, ಆರೋಪಿ ವಿಚಾರಣೆಗೆ 10 ದಿನಗಳ ಕಾಲ ವಶಕ್ಕೆ ನೀಡುವಂತೆ ಕೋರಿತ್ತು. ಮನವಿ ಪುರಸ್ಕರಿಸಿರುವ ನ್ಯಾಯಾಲಯ, ಆರೋಪಿಯನ್ನು ಎನ್ಐಎ ಕಸ್ಟಡಿಗೆ ನೀಡಿ ಅ.30ರಂದು ಆದೇಶಿಸಿದೆ.
ಕಳೆದ ಮಾರ್ಚ್ನಲ್ಲಿ ಚಿಕ್ಕೋಡಿ ಅಶೋಕ್ ಕಂಬಾರ್ ಸೇರಿದಂತೆ ಇನ್ನಿತರರನ್ನು ಬಂಧಿಸಿದ ಖೋಟಾನೋಟು ಚಲಾವಣೆ ಪ್ರಕರಣದ ಆರೋಪಿಯಾಗಿರುವ ಶುಕ್ರುದ್ಧೀನ್, ಖೋಟಾ ನೋಟು ಸರಬರಾಜು ಮಾಡುತ್ತಿದ್ದ. ಇತರೆ ಆರೋಪಿಗಳ ಜತೆ ನಿರಂತರ ಸಂಪರ್ಕ ಹೊಂದಿದ್ದಾನೆ.
ಜತೆಗೆ, ಭಾರತದ ಆರ್ಥಿಕ ಸ್ಥಿತಿಗೆ ತೊಂದರೆ ಉಂಟು ಮಾಡುವ ಸಲುವಾಗಿ ಬಾಂಗ್ಲಾ ಗಡಿಯ ಮೂಲಕ ಖೋಟಾನೋಟು ತರಿಸಿಕೊಂಡು ರಾಜ್ಯಕ್ಕೆ ಕಳುಹಿಸಿಕೊಡುತ್ತಿದ್ದ. ಹೀಗಾಗಿ, ಆರೋಪಿಯ ಜತೆ ಮತ್ತಷ್ಟು ಜನ ಭಾಗಿಯಾಗಿರುವ ಸಾಧ್ಯತೆಯಿದೆ. ಅಲ್ಲದೆ, ಆರೋಪಿಯನ್ನು ವಿಚಾರಣೆಗೊಳಪಡಿಸಿ ಖೋಟಾನೋಟು ದಂಧೆಯ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕಿದೆ. ಹೀಗಾಗಿ 10 ದಿನಗಳ ವಶಕ್ಕೆ ನೀಡುವಂತೆ ಎನ್ಐಎ ಮಾಡಿದ್ದ ಮನವಿಗೆ ನ್ಯಾಯಲಯ ಮಾನ್ಯ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ
Bengaluru: ಇಬ್ಬರು ಡ್ರಗ್ಸ್ ಪೆಡ್ಲರ್ ಸೆರೆ: 51 ಕೆ.ಜಿ. ಗಾಂಜಾ ಜಪ್ತಿ
Bengaluru: ಮೋಜಿನ ಜೀವನಕ್ಕೆ ಸರ ಕದೀತಿದ್ದ ಯುವಕನ ಸೆರೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.