Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ
Team Udayavani, May 8, 2024, 10:59 AM IST
ಬೆಂಗಳೂರು: ಪ್ರತಿಷ್ಠಿತ ಕಂಪನಿಗಳ ಡಿಟರ್ಜೆಂಟ್, ಲೈಜಾಲ್, ಕೋಲಿನ್, ಟೀ ಪುಡಿ ಸೇರಿ ಇತರೆ ಉತ್ಪನ್ನಗಳನ್ನು ನಕಲಿಯಾಗಿ ತಯಾರಿಸಿ ದಾಸ್ತಾನು ಮಾಡಿಕೊಂಡು ಮಾರಾಟ ಮಾಡುತ್ತಿದ್ದ ಕಾರ್ಖಾನೆ ಮೇಲೆ ಸಿಸಿಬಿ ಆರ್ಥಿಕ ಅಪರಾಧ ದಳದ ಅಧಿಕಾರಿಗಳು ದಾಳಿ ಮಾಡಿ 95 ಲಕ್ಷ ರೂ. ಮೌಲ್ಯದ ನಕಲಿ ಉತ್ಪನ್ನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಿದರಹಳ್ಳಿಯ ಶಿವಪಟೇಲ್ (40), ಟಿ.ಸಿ.ಪಾಳ್ಯದ ಐಶ್ವರ್ಯ ಬಡಾವಣೆಯ ದವಲತ್ ಸಿಂಗ್ (32) ಹಾಗೂ ಆಡುಗೋಡಿ ವಿನಾಯಕನಗರದ ಶುಭಂ ಗುಪ್ತಾ (20) ಬಂಧಿತರು.
ವಿಲ್ಸನ್ ಗಾರ್ಡನ್ ಪೊಲೀಸ್ ಠಾಣಾ ವ್ಯಾಪ್ತಿಯ ವಿನಾಯಕನಗದ ಗೋದಾವೊಂದರಲ್ಲಿ ಹಿಂದೂಸ್ತಾನ್ ಯುನಿಲಿವರ್, ರೆಕಿಟ್ ಬೆಂಕಿಸರ್, ಇಂಡಿಯಾ ಕಂಪನಿಗೆ ಸೇರಿದ ಉತ್ಪನ್ನಗಳಾದ ಸರ್ಫ್ ಎಕ್ಸೆಲ್, ವಿಮ್ ಲಿಕ್ವಿಡ್, ಲೈಫ್ ಬಾಯ್ ಹ್ಯಾಂಡ್ ವಾಶ್, ರಿನ್, ವೀಲ್ ಡಿಟರ್ಜೆಂಟ್ ಪುಡಿ, ಬ್ರೂಕ್ ಬಾಂಡ್ ರೆಡ್ ಲೇಬಲ್ ಟೀ ಪುಡಿ, ತ್ರಿ ರೋಸಸ್ ಟೀ ಪುಡಿ, ಲೈಜೋಲ್, ಹಾರ್ಪಿಕ್ ಉತ್ಪನ್ನಗಳನ್ನು ನಕಲಿಯಾಗಿ ತಯಾರಿಸಿ ದಾಸ್ತಾನು ಮಾಡಿದ್ದರು. ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಗೋದಾಮಿನ ಮೇಲೆ ದಾಳಿ ಮಾಡಿ ನಕಲಿ ಉತ್ಪನ್ನಗಳನ್ನು ಜಪ್ತಿ ಮಾಡಲಾಗಿದೆ.
ಈ ಸಂಬಂಧ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪ್ರಕರಣ ಸಿಸಿಬಿಗೆ ವರ್ಗಾವಣೆಯಾಗಿತ್ತು. ನಂತರ ಸಿಸಿಬಿ ಅಧಿಕಾರಿಗಳು ಈ ನಕಲಿ ಉತ್ನನ್ನಗಳನ್ನು ತಯಾರಿಸುವ ಸ್ಥಳದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಅವಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರಾಮಪುರ ಮತ್ತು ಬಿದರಹಳ್ಳಿಯ ಫ್ಯಾಕ್ಟರಿ ಮತ್ತು ಗೋದಾಮಿನ ಮೇಲೆ ದಾಳಿ ಮಾಡಿ ನಕಲಿ ಉತ್ಪನ್ನಗಳು ಹಾಗೂ ತಯಾರಿಕೆ ಬಳಸುತ್ತಿದ್ದ ಯಂತ್ರೋಪಕರಣಗಳನ್ನು ಜಪ್ತಿ ಮಾಡಲಾಗಿದೆ. ಈ ಸಂಬಂಧ ತನಿಖೆ ಮುಂದುವರಿರೆದಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.