ಸಾವಿರಾರು ವಜ್ರದ ಹರಳು ಕೊಡಲೊಪ್ಪದ ಕೋರ್ಟ್
Team Udayavani, Oct 4, 2018, 11:31 AM IST
ಬೆಂಗಳೂರು: ಕಟ್ಟಡ ನೆಲಸಮಗೊಳಿಸುವಾಗ ಗೋಡೆಯಲ್ಲಿ ಪತ್ತೆಯಾಗಿದ್ದ ಸಾವಿರಾರು ವಜ್ರದ ಹರಳುಗಳನ್ನು ತಮಗೆ ನೀಡುವಂತೆ ಕೋರಿ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಬುಧವಾರ ಹೈಕೋರ್ಟ್ ವಜಾಗೊಳಿಸಿತು.
ಸುಮಾರು ಮೂರು ದಶಕಗಳ ಹಿಂದಿನ ಪ್ರಕರಣ ಇದಾಗಿದ್ದು, 1988ರಲ್ಲಿ ಕೆ.ಎಚ್.ರಸ್ತೆಯ ಹಳೆ ಕಟ್ಟಡವೊಂದನ್ನು ನೆಲಸಮಗೊಳಿಸುತ್ತಿದ್ದಾಗ ಗೋಡೆಯೊಂದರಲ್ಲಿ 1,385 ವಜ್ರದ ಹರಳುಗಳು ಸಿಕ್ಕಿದ್ದವು. ಅವುಗಳನ್ನು ತಮ್ಮ ವಶಕ್ಕೆ ನೀಡುವಂತೆ ಚಕ್ರವರ್ತಿ ಎಂಬುವವರ ಪತ್ನಿ ಉಮಾ ಅರ್ಜಿ ಸಲ್ಲಿಸಿದ್ದರು. ಬುಧವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಆರ್. ದೇವದಾಸ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಾದ ಮಂಡಿಸಿದ ಸರ್ಕಾರಿ ವಕೀಲರು “ನಿಯಮಗಳ ಪ್ರಕಾರ ನಿಧಿ ದೊರೆತ ಸ್ಥಳದ ಮಾಲೀಕರು ಅಥವಾ ನಿಧಿ ಪತ್ತೆ ಹಚ್ಚಿದವರಿಗೆ ಮಾತ್ರ ಸಿಕ್ಕ ನಿಧಿಯಲ್ಲಿ ಪಾಲು ಕೊಡಬೇಕು. ಆದರೆ, ಈ ಪ್ರಕರಣದಲ್ಲಿ ಅರ್ಜಿದಾರರು ಜಾಗದ ಮಾಲೀಕರೂ ಅಲ್ಲ, ನಿಧಿ ಪತ್ತೆ ಹಚ್ಚಿದವರೂ ಅಲ್ಲ. ಹಾಗಾಗಿ, ಅರ್ಜಿದಾರರಿಗೆ ವಜ್ರದ ಹರಳುಗಳನ್ನು ನೀಡಲು ಅವಕಾಶವಿಲ್ಲ ಎಂದು ವಾದಿಸಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ಅರ್ಜಿ ವಜಾಗೊಳಿಸಿತು.
ಏನಿದು ಪ್ರಕರಣ?: ನಗರದ ಕೆ.ಎಚ್.ರಸ್ತೆಯಲ್ಲಿ 1988ರಲ್ಲಿ ಹಳೆಯ ಕಟ್ಟಡವೊಂದನ್ನು ನೆಲಸಮಗೊಳಿಸಲಾಗಿತ್ತು. ಆಗ ಕಟ್ಟಡದ ಗೋಡೆಯನ್ನು ಕಡೆವಿದಾಗ ಕೂಲಿಕಾರ ರಾಜು ಎಂಬುವರಿಗೆ 1,385 ವಜ್ರದ ಹರಳುಗಳು ಸಿಕ್ಕಿದ್ದವು. ಆತ ಅದನ್ನು ಚಕ್ರವರ್ತಿ ಎಂಬುವರಿಗೆ ಮಾರಿದ್ದ. ಈ ಸಂಬಂಧ ಕಟ್ಟಡ ನೆಲಸಮ ಗುತ್ತಿಗೆದಾರ ಮೊಹಮ್ಮದ್ ವಾಸಿಂ ಪೊಲೀಸರಿಗೆ ದೂರು ಕೊಟ್ಟಿದ್ದ. ಇದನ್ನು ಆಧರಿಸಿ ಪೊಲೀಸರು ಚಕ್ರವರ್ತಿಯಿಂದ ವಜ್ರದ ಹರಳುಗಳನ್ನು ವಶಪಡಿಸಿಕೊಂಡಿದ್ದರು. ಈ ಮಧ್ಯೆ ಕೆಲ ವರ್ಷಗಳ ಬಳಿಕ ಚಕ್ರವರ್ತಿ ಸಾವನ್ನಪ್ಪಿದ್ದರು.
ಆನಂತರ ಚಕ್ರವರ್ತಿಯ ಪತ್ನಿ ಉಮಾ “ಪೊಲೀಸರು ವಶಕ್ಕೆ ಪಡೆದಿರುವ ವಜ್ರದ ಹರಳುಗಳನ್ನು ತಮ್ಮ ವಶಕ್ಕೆ ನೀಡುವಂತೆ ಕೋರಿ ನಗರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಈ ಮನವಿಯನ್ನು 2009ರ ಡಿ.5ರಂದು ಜಿಲ್ಲಾಧಿಕಾರಿಗಳು ತಿರಸ್ಕರಿಸಿದ್ದರು. ಬಳಿಕ ಹೈಕೋರ್ಟ್ ಮೆಟ್ಟಿಲೇರಿದ್ದ ಉಮಾ “ಕರ್ನಾಟಕ ಟ್ರೆಸರ್ ಟ್ರೋ ಕಾಯ್ದೆ-1962′ ಪ್ರಕಾರ ಹರಳುಗಳನ್ನು ತಮ್ಮ ವಶಕ್ಕೆ ನೀಡಬೇಕು ಎಂದು ಕೋರಿದ್ದರು. ಆದರೆ, ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Flipkart Big Billion Day ಸೆ. 27 ರಿಂದ ಆರಂಭ
Bengaluru: ನಮ್ಮ ಕ್ಲಿನಿಕ್ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
Bengaluru: ʼರಾಹುಲ್ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್ ವಿರುದ್ಧ ಕೇಸ್
Bengaluru: ಉದ್ಯಮಿಗೆ ಹನಿಟ್ರ್ಯಾಪ್ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ ದೂರು ದಾಖಲು
Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ
BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ: ಶಾಸಕ ವಿನಯ ಕುಲಕರ್ಣಿ ಆಕ್ರೋಶ
Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ
Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.