ನ್ಯೂನತೆ ಇರುವ ಭ್ರೂಣ ತೆಗೆಸಲು ಕೋರ್ಟ್‌ ಅವಕಾಶ


Team Udayavani, Mar 13, 2019, 6:46 AM IST

highcourt2.jpg

ಬೆಂಗಳೂರು: ವೈದ್ಯಕೀಯ ಕಾರಣಗಳಿಂದ ಅತ್ಯಾಚಾರಕ್ಕೊಳಗಾದ ಅಪ್ರಾಪ್ತೆಯೊಬ್ಬಳ 24 ವಾರದ ಭ್ರೂಣ ತೆಗೆಸಲು ಹೈಕೋರ್ಟ್‌ ಅವಕಾಶ ನೀಡಿದ್ದು, ಅತ್ಯಾಚಾರ ಪ್ರಕರಣ ತನಿಖೆ ದೃಷ್ಟಿಯಿಂದ ಭ್ರೂಣದ ಡಿಎನ್‌ಎ ಪರೀಕ್ಷೆ ಮಾಡುವಂತೆ ಬೆಂಗಳೂರು ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆಗೆ ಮಂಗಳವಾರ ನಿರ್ದೇಶನ ನೀಡಿದೆ.

ಅತ್ಯಾಚಾರಕ್ಕೊಳಗಾಗಿ ಗರ್ಭಧರಿಸಿದ ಚಿತ್ರದುರ್ಗ ಮೂಲದ 17 ವರ್ಷದ ಅಪ್ರಾಪ್ತೆ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಆಲೋಕ್‌ ಆರಾಧೆ, ಸಂತ್ರಸ್ತೆಯ ಮನವಿ ಪುರಸ್ಕರಿಸಿದ್ದು, ತಜ್ಞ ವೈದ್ಯರ ವರದಿ ಆಧರಿಸಿ ಗರ್ಭಪಾತಕ್ಕೆ ಅವಕಾಶ ಕಲ್ಪಿಸಿದೆ.

ಈ ಹಿಂದೆ ಅರ್ಜಿ ವಿಚಾರಣೆಗೆ ಬಂದಿದ್ದಾಗ, ಅಪ್ರಾಪ್ತೆಯ ತಪಾಸಣೆ ನಡೆಸಿದ ವರದಿ ಸಲ್ಲಿಸುವಂತೆ ವಾಣಿ ವಿಲಾಸ ಆಸ್ಪತ್ರೆ ಹಾಗೂ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ತಜ್ಞ ವೈದ್ಯರ ತಂಡಕ್ಕೆ ನ್ಯಾಯಪೀಠ ನಿರ್ದೇಶನ ನೀಡಿತ್ತು. ಅದರಂತೆ, ಮಂಗಳವಾರ ಬೆಂಗಳೂರು ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆಯ ಪರ ವಕೀಲೆ ಎಂ. ಸಿ. ನಾಗಶ್ರೀ ಮುಚ್ಚಿದ ಲಕೋಟೆಯಲ್ಲಿ ವರದಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.

ಅರ್ಜಿದಾರಳ ಭ್ರೂಣಕ್ಕೆ ಸದ್ಯ 24 ವಾರವಾಗಿದೆ. ಭ್ರೂಣದ ತಲೆಭಾಗದಲ್ಲಿ ಸೀಳು ಕಾಣಿಸಿಕೊಂಡಿದೆ. ಮಗು ಜನಿಸಿದರೂ ಭವಿಷ್ಯದಲ್ಲಿ ಮತ್ತೆ ಆರೋಗ್ಯ ಸಮಸ್ಯೆ ಎದುರಾಗಬಹುದು. ಆದ್ದರಿಂದ ಗರ್ಭಪಾತ ಮಾಡಿಸುವುದೇ ಸೂಕ್ತ ಎಂದು ವರದಿಯಲ್ಲಿ ಉಲ್ಲೇಖೀಸಲಾಗಿತ್ತು. ಅದರಂತೆ,  ಹಾಗಾಗಿ, ವೈದ್ಯಕೀಯ ಕಾರಣಗಳನ್ನು ಪರಿಗಣಿಸಿ ಆಕೆಯ ದೈಹಿಕ ಮತ್ತು ಮಾನಸಿಕ ಆರೋಗ್ಯದ ದೃಷ್ಟಿಯಿಂದ ಗರ್ಭಪಾತಕ್ಕೆ ಅವಕಾಶ ನೀಡಲು ಅರ್ಜಿದಾರ ಸಂತ್ರಸ್ತೆಯ ಮನವಿಯನ್ನು ಪುರಸ್ಕರಿಸಲಾಗುತ್ತಿದೆ.

ಅತ್ಯಾಚಾರ ಪ್ರಕರಣದ ತನಿಖೆ ದೃಷ್ಟಿಯಿಂದ ಗರ್ಭದಿಂದ ಹೊರ ತೆಗೆದ ಭ್ರೂಣವನ್ನು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯು ಸಂರಕ್ಷಿಸಬೇಕು ಹಾಗೂ ಅದರ ಡಿಎನ್‌ಎ ಪರೀಕ್ಷೆ ಮಾಡಬೇಕು. ಸಂಬಂಧಪಟ್ಟ ಠಾಣೆಯ ಪೊಲೀಸ್‌ ಇನ್ಸ್‌ಪೆಕ್ಟರ್‌ ಡಿಎನ್‌ಎ ಪರೀಕ್ಷೆಯ ವರದಿ ಪಡೆದುಕೊಳ್ಳಬೇಕು ಎಂದು ಆದೇಶಿಸಿತು.

ಅಲ್ಲದೇ, ಸಂತ್ರಸ್ತ ಅರ್ಜಿದಾರಳಿಗೆ ಪರಿಹಾರ ನೀಡುವ ಮತ್ತು ಗರ್ಭಪಾತಕ್ಕೆ ತಗಲುವ ವೆಚ್ಚ ಭರಿಸಲು ತುರ್ತಾಗಿ 70 ಸಾವಿರ ರೂ. ಹಣ ಬಿಡುಗಡೆ ಮಾಡುವ ಬಗ್ಗೆ ಅಭಿಪ್ರಾಯ ತಿಳಿಸುವಂತೆ ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನೋಟಿಸ್‌ ಜಾರಿ ಮಾಡಿ, ನ್ಯಾಯಪೀಠ ವಿಚಾರಣೆ ಮುಂದೂಡಿತು.

ಸಂತ್ರಸ್ತೆಯ ಅಳಲು ಏನು?: ಅತ್ಯಾಚಾರ ಪ್ರಕರಣದಿಂದ ತಾನು ಗರ್ಭ ಧರಿಸಿದ್ದೇನೆ. ಸದ್ಯ ಭ್ರೂಣಕ್ಕೆ 24 ವಾರವಾಗಿದೆ. ಆದರೆ, ವೈದ್ಯಕೀಯ ತಪಾಸಣೆ ವೇಳೆ ಭ್ರೂಣದಲ್ಲಿ “ಬೈಲಾಟೆರಲ್‌ ಓಪನ್‌ ಲಿಪ್‌ ಸ್ಕೆಜೆನ್ಸಾಲಿ (ಭ್ರೂಣದ ತಲೆಭಾಗದಲ್ಲಿ ಸೀಳು) ಎಂಬ ಸಮಸ್ಯೆ ಕಾಣಿಸಿಕೊಂಡಿದೆ. ಈ ಕಾರಣಕ್ಕೆ ಮಗು ಜನಿಸಿದ ಮೇಲೆ ತೊಂದರೆ ಆಗಲಿದೆ. ಜತೆಗೆ, ಹೆರಿಗೆ ಸಮಯದಲ್ಲಿ ತನಗೆ ಅಪಾಯವಾಗುವ ಸಾಧ್ಯತೆಯೂ ಇದೆ. ಹಾಗಾಗಿ, ವಿಶೇಷ ಪ್ರಕರಣ ಎಂದು ಪರಿಗಣಿಸಿ, ವೈದ್ಯಕೀಯ ಕಾರಣಗಳ ಆಧಾರದಲ್ಲಿ ಗರ್ಭಪಾತಕ್ಕೆ ಅನುಮತಿ ನೀಡಬೇಕು ಎಂದು ಅತ್ಯಾಚಾರ ಸಂತ್ರಸ್ತೆ ಹೈಕೋರ್ಟ್‌ಗೆ ಕೋರಿದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.