![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 10, 2022, 5:56 PM IST
ಬೆಂಗಳೂರು:ಕೆಮ್ಮುತ್ತೀರಿ, ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಡಿ.ಕೆ.ಶಿವಕುಮಾರ್ ಗೆ ತಿಳಿ ಹೇಳಲು ಹೋಗಿ ಬೈಸಿಕೊಂಡಿದ್ದ ರಾಮನಗರ ಜಿಲ್ಲೆ ಹೆಚ್ಚುವರಿ ಜಿಲ್ಲಾಧಿಕಾರಿ ಜವರೇಗೌಡ ಎಂಬುವರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಪ್ರಾಥಮಿಕ ಸಂಪರ್ಕಕ್ಕೆ ಬಂದ ಶಿವಕುಮಾರ್ ಕ್ವಾರಂಟೈನ್ ಆಗಬೇಕೆಂದು ಸರಕಾರ ಪರೋಕ್ಷ ಒತ್ತಡ ಹೇರಿದೆ.
ಪತ್ರಿಕಾಗೋಷ್ಠಿಯಲ್ಲಿ ಕೆಮ್ಮುತ್ತಿದ್ದ ಡಿಕೆಶಿ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವುದು ಸೂಕ್ತ ಎಂದು ಎಡಿಸಿ ಜವರೇಗೌಡ ಮನವಿ ಮಾಡಿದ್ದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಶಿವಕುಮಾರ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದರು.
ಸೋಮವಾರ ಬೆಳಗ್ಗೆ 11.3 ರ ಸುಮಾರಿಗೆ ಜವರೇಗೌಡ ಅವರಲ್ಲಿ ಜ್ವರದ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಪರೀಕ್ಷೆಗೆ ಒಳಪಡಿಸಿದಾಗ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ರಾಮನಗರ ಜಿಲ್ಲಾ ಆರೋಗ್ಯಾಧಿಕಾರಿ ನಿರಂಜನಕುಮಾರ್ ದೃಢಪಡಿಸಿದ್ದಾರೆ. ಹೀಗಾಗಿ ಕೋವಿಡ್ ನಿಯಮ ಪ್ರಕಾರ ಡಿ.ಕೆ.ಶಿವಕುಮಾರ್ ಕ್ವಾರಂಟೈನ್ ಆಗಬೇಕೆಂದು ಸರಕಾರ ಪರೋಕ್ಷ ಒತ್ತಡ ಹೇರಲಾರಂಭಿಸಿದೆ.
ಕೋವಿಡ್ ಅಂಟಿಸಲು ಬಂದಿದ್ದರು:
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಸದ ಡಿ.ಕೆ.ಸುರೇಶ್, ಶಿವಕುಮಾರ್ ಅವರಿಗೆ ಸೋಂಕು ಅಂಟಿಸುವುದಕ್ಕಾಗಿಯೇ ಜವರೇಗೌಡರನ್ನು ಕಳುಹಿಸಿದ್ದರು. ರಾಮನಗರ ಜಿಲ್ಲಾಧಿಕಾರಿ ಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಅವರ ಜತೆ ಸಂಪರ್ಕ ದಲ್ಲಿದ್ದ ಜವರೇಗೌಡರಿಗೆ ಮೊದಲೇ ಸೋಂಕು ಇತ್ತು.
ಉದ್ದೇಶಪೂರ್ವಕವಾಗಿ ಸರಕಾರ ಕೊರೋನಾ ಅಂಟಿಸುವ ಒ್ರಯತ್ನ ನಡೆಸಿದೆ ಎಂದು ಆರೋಪಿಸಿದ್ದಾರೆ. ಈ ಸಂಬಂಧ ತುರ್ತು ಪತ್ರಿಕಾಗೋಷ್ಠಿ ನಡೆಸಿದ ಡಿ.ಕೆ.ಶಿವಕುಮಾರ್, ನನ್ನನ್ನು ಕ್ವಾರಂಟೈನ್ ಗೆ ಕಳುಹಿಸಲು ಸರಕಾರ ಈ ರೀತಿ ಮಾಡುತ್ತಿದೆ. ಪಾದಯಾತ್ರೆಯಿಂದ ಸರಕಾರಕ್ಕೆ ಭಯ ಬಂದಿದೆ. ಮುಂದಿನ ಮೂರು ದಿನ ಮೌನ ಮೆರವಣಿಗೆ ಮಾಡುತ್ತೇವೆ ಎಂದು ಹೇಳಿದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.