ಎಲ್ಲರ ಚಿತ್ತ ಸೀಕ್ವೆನ್ಸಿಂಗ್‌ ವರದಿಯತ್ತ..!


Team Udayavani, Dec 15, 2021, 12:27 PM IST

covid test

Representative Image used

ಬೆಂಗಳೂರು: ಒಂದು ವಾರದಲ್ಲಿ ವಿದೇಶಗಳಿಂದ ಆಗಮಿಸಿದ ಸಾವಿರಾರು ಮಂದಿ ಪೈಕಿ ಒಟ್ಟಾರೆ 20 ಮಂದಿಗೆ ಕೊರೊನಾ ದೃಢಪಟ್ಟಿದೆ. ಇವರೆಲ್ಲರ ಗಂಟಲುದ್ರವ ಮಾದರಿಗಳನ್ನು ಜಿನೋಮಿಕ್‌ ಸಿಕ್ವೆನ್ಸಿಂಗ್‌ಗೆ ಕಳುಹಿಸಿದ್ದು, ಬುಧವಾರ ವರದಿ ಕೈಸೇರುವ ಸಾಧ್ಯತೆಯಿದೆ.

ನಗರಕ್ಕೆ ಬಂದಿಳಿದ ವಿದೇಶಿ ಪ್ರಯಾಣಿಕರ ಪೈಕಿ ಸೋಂಕು ಕಾಣಿಸಿಕೊಂಡ 20 ಜನರಲ್ಲಿ 12 ಮಂದಿ ಬೌರಿಂಗ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಉಳಿದವರು ಅಪೋಲೋ, ಮಣಿಪಾಲ್‌ ಸೇರಿ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಎಲ್ಲರ ಗಂಟಲು ದ್ರವದ ಮಾದರಿಗಳನ್ನು ಜಿನೋಮಿಕ್‌ ಸೀಕ್ವೆನ್ಸಿಂಗ್‌ ಪರೀಕ್ಷೆಗೆ ಕಳುಹಿಸಲಾಗಿದೆ. ಅದರ ವರದಿ ಬುಧವಾರ ಬರುವ ಸಾಧ್ಯತೆಯಿದೆ.

ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಸೇರಿದಂತೆ ಎಲ್ಲರ ಚಿತ್ತ ಈಗ ವರದಿಯತ್ತ ನೆಟ್ಟಿದೆ. ವಿದೇಶಗಳಿಂದ ನಗರಕ್ಕೆ ಬರುವವರ ಮೇಲೆ ತೀವ್ರ ನಿಗಾ ವಹಿಸುವ ಮೂಲಕ ಒಮಿಕ್ರಾನ್‌ ಸೇರಿ ಎಲ್ಲ ಮಾದರಿ ಸೋಂಕು ಪತ್ತೆ ಕಾರ್ಯ ನಡೆಯುತ್ತಿದೆ. ವಾರದಲ್ಲಿ 20 ಪ್ರಯಾಣಿಕರಿಗೆ ಸೋಂಕು ದೃಢಪಟ್ಟಿದ್ದು, ಡಿ.15 ರಂದು ವರದಿ ಬರಲಿದೆ ಎಂದು ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ಡಾ.ಬಾಲಸುಂದರ್‌ ಮಾಹಿತಿ ನೀಡಿದರು.

ಪ್ರಕರಣ ಏರಿಕೆ ಕ್ರಮ; ಹೆಚ್ಚಿದ ಆತಂಕ: ಭೀತಿ ಹುಟ್ಟಿಸಿರುವ ರೂಪಾಂತರಿ ಒಮಿಕ್ರಾನ್‌ ಅತಿ ವೇಗವಾಗಿ ಹರಡುತ್ತದೆ ಎಂಬುದನ್ನು ಇಂಗ್ಲೆಂಡ್‌ ಅಧ್ಯಯನ ಸಮಿತಿ ತಿಳಿಸಿದೆ. ದೇಶಾದ್ಯಂತ ಒಮಿಕ್ರಾನ್‌ ಸೋಂಕು ಪ್ರಕರಣಗಳ ಸಂಖ್ಯೆ ಏರಿಕೆ ಕ್ರಮದಲ್ಲಿ ಸಾಗಿದೆ. ಈ ನಡುವೆ ದೇಶದಲ್ಲಿ ಜನವರಿಯಲ್ಲಿ ಕೋವಿಡ್‌ 3ನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆ ಬಗ್ಗೆ ಕೇಂದ್ರಸರ್ಕಾರ ಎಲ್ಲ ರಾಜ್ಯಗಳಿಗೆ ಎಚ್ಚರಿಕೆ ನೀಡಿದೆ.

ಈ ಹಿನ್ನೆಲೆಯಲ್ಲಿ ವಿದೇಶಿಗರಲ್ಲಿ ಕೊರೊನಾ ದೃಢವಾಗಿರುವುದು ಆತಂಕ ಹುಟ್ಟಿಸಿದೆ. ವಿದೇಶಿ ಪ್ರಯಾಣಿಕರ ಪೈಕಿ ಸೋಂಕಿತರ ಸಂಪರ್ಕಕ್ಕೆ 5 ಮಂದಿ ಪ್ರಾಥಮಿಕ ಮತ್ತು 20 ಜನ ದ್ವಿತೀಯ ಸಂಪರ್ಕಿತರಾಗಿದ್ದಾರೆ. ಇವರ ಕೋವಿಡ್‌ ವರದಿಗಳು ನೆಗೆಟಿವ್‌ ಬಂದಿದ್ದರೂ, ಸೋಂಕಿತರ ಜೀನೋಮಿಕ್‌ ಸೀಕ್ವೆನ್ಸಿಂಗ್‌ ಪರೀಕ್ಷಾ ವರದಿ ಬರುವವರೆಗೂ ಕ್ವಾರಂಟೈನ್‌ಗೆ ಒಳಪಡಿಸಿ ನಿಗಾ ವಹಿಸಲಾಗಿದೆ.

ಮತ್ತೂಂದೆಡೆ ದಕ್ಷಿಣ ಆಫ್ರಿಕದಿಂದ ಡಿ. 1ರಂದು ಬಂದಿದ್ದ 34 ವರ್ಷದ ವ್ಯಕ್ತಿಗೆ ವಿಮಾನ ನಿಲ್ದಾಣದಲ್ಲಿ ಕೋವಿಡ್‌ ಪರೀಕ್ಷೆ ಮಾಡಿದಾಗ ನೆಗೆಟಿವ್‌ ಬಂದಿತ್ತು. ಆದರೆ, ಖಾಸಗಿ ಲ್ಯಾಬ್‌ನಲ್ಲಿ ಮತ್ತೂಮ್ಮೆ ಪರೀಕ್ಷೆ ಮಾಡಿಸಿಕೊಂಡಾಗ ಸೋಂಕು ದೃಢಪಟ್ಟಿತ್ತು. ಮಾದರಿಯನ್ನು ಜೀನೋಮಿಕ್‌ ಸಿಕ್ವೆನ್ಸಿಂಗ್‌ಗೆ ಕಳುಹಿಸಿದಾಗ ಡಿ. 11ರಂದು ಒಮಿಕ್ರಾನ್‌ ಪತ್ತೆಯಾಗಿತ್ತು. ಅವರ ಮೇಲೂ ನಿಗಾ ವಹಿಸಲಾಗಿದೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.