ಸುಶಿಕ್ಷಿತರಿಂದ ಬ್ಲಾಕ್‌ಸ್ಪಾಟ್‌ ಸೃಷ್ಟಿ


Team Udayavani, Mar 10, 2019, 6:22 AM IST

sushikshita.jpg

ಬೆಂಗಳೂರು: ಸಾಕಷ್ಟು ಅಭಿವೃದ್ಧಿಯಾಗಿರುವ ಬೆಂಗಳೂರಿನ ಹೃದಯ ಭಾಗದಲ್ಲಿ ವಾಸವಿರುವ ಸುಶಿಕ್ಷಿತ ಜನರೇ ಬ್ಲಾಕ್‌ಸ್ಪಾಟ್‌ ಸೃಷ್ಟಿಯಾಗಲು ಕಾರಣ ಎಂಬುದು ಅಂಕಿ-ಅಂಶಗಳಿಗೆ ಬಯಲಾಗಿದೆ. ರಾತ್ರಿ ವೇಳೆ ನಗರದ ರಸ್ತೆಬದಿ, ಖಾಲಿ ನಿವೇಶನ ಹೀಗೆ ಎಲ್ಲೆಂದರಲ್ಲಿ ಕಸ ಎಸೆದು ಹೋಗುವವರ ಪತ್ತೆಗೆ ಬಿಬಿಎಂಪಿಯಿಂದ ಮಾರ್ಷಲ್‌ಗ‌ಳನ್ನು ನೇಮಿಸಲಾಗಿತ್ತು.

ಈ ವೇಳೆ ಕೇಂದ್ರ ಭಾಗದ ಪೂರ್ವ, ಪಶ್ಚಿಮ ಹಾಗೂ ದಕ್ಷಿಣ ವಲಯಗಳಲ್ಲೇ ಅತಿ ಹೆಚ್ಚು ಜನ ಎಲ್ಲೆಂದರಲ್ಲಿ ಕಸ ಎಸೆಯುವುದು ಕಂಡುಬಂದಿದೆ. ಹೀಗೆ ಕಸ ಎಸೆಯುವವರಿಗೆ ಮಾರ್ಷಲ್‌ಗ‌ಳು ದಂಡ ವಿಧಿಸಿದ್ದಾರೆ. ಈ ಸಂಬಮಧ ನಗರಾದ್ಯಂತ ಒಟ್ಟು 8401 ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ ಶೇ.50ರಷ್ಟು ಪ್ರಕರಣಗಳು ಕೇಂದ್ರ ಭಾಗದ ಮೂರು ವಲಯಗಳಲ್ಲಿ ದಾಖಲಾಗಿವೆ.

ಸ್ವಚ್ಛ ಸರ್ವೇಕ್ಷಣ್‌ ಅಭಿಯಾನದ ಹಿನ್ನೆಲೆಯಲ್ಲಿ, ಎಲ್ಲೆಂದರಲ್ಲಿ ತ್ಯಾಜ್ಯ ವಿಲೇವಾರಿ ಮಾಡುವುದನ್ನು ತಪ್ಪಿಸುವ ಉದ್ದೇಶದಿಂದ ಕಳೆದ ಅಕ್ಟೋಬರ್‌ನಿಂದ ಫೆಬ್ರವರಿ 1ರವರೆಗೆ ಪ್ರಾಯೋಗಿಕವಾಗಿ ಗಸ್ತು ತಿರುಗಲು ಮಾರ್ಷಲ್‌ಗ‌ಳನ್ನು ನೇಮಿಸಿಕೊಳ್ಳಲಾಗಿತ್ತು. ಈ ವೇಳೆ ಸುಶಿಕ್ಷಿತರೇ ತ್ಯಾಜ್ಯವನ್ನು ಬೈಕ್‌, ಕಾರುಗಳಲ್ಲಿ ತಂದು ಎಸೆಯುವುದು ಕಂಡುಬಂದಿದೆ. ಜತೆಗೆ ಕೆಲವರು ಟ್ರ್ಯಾಕ್ಟರ್‌ ಹಾಗೂ ಟ್ರಕ್‌ಗಳಲ್ಲಿ ತ್ಯಾಜ್ಯ ತುಂಬಿಕೊಂಡು ಬಂದು ರಸ್ತೆ ಬದಿಯಲ್ಲಿ ಸುರಿಯುವುದು ಕಂಡಬಂದಿದೆ.

ಎಲ್ಲೆಂದರಲ್ಲಿ ತ್ಯಾಜ್ಯ ಎಸೆದವರ ವಿರುದ್ಧ ಮಾರ್ಷಲ್‌ಗ‌ಳು ಒಟ್ಟು 8401 ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಿದ್ದು, ಆ ಪೈಕಿ ಶೇ.50ರಷ್ಟು ಅಂದರೆ, 4766 ಪ್ರಕರಣಗಳು ಕೇಂದ್ರ ಭಾಗದ ಮೂರು ವಲಯಗಳಲ್ಲಿ ದಾಖಲಾಗಿವೆ. ಅದರಂತೆ ದಕ್ಷಿಣ ವಲಯದಲ್ಲಿ 1,936 ಪ್ರಕರಣಗಳು, ಪೂರ್ವ ವಲಯ 1,442 ಹಾಗೂ ಪಶ್ಚಿಮ ವಲಯದಲ್ಲಿ 1,388 ಪ್ರಕರಣ ದಾಖಲಾಗಿವೆ. ಉಳಿದಂತೆ ದಾಸರಹಳ್ಳಿಯಲ್ಲಿ 1,455, ಮಹದೇವಪುರ 609, ರಾಜರಾಜೇಶ್ವರಿ ನಗರ 853, ಯಲಹಂಕ 147 ಹಾಗೂ ಬೊಮ್ಮನಹಳ್ಳಿ ವಲಯದಲ್ಲಿ 571 ಪ್ರಕರಣಗಳು ದಾಖಲಾಗಿದ್ದು, ದಂಡದ ರೂಪದಲ್ಲಿ ಪಾಲಿಕೆಗೆ ಒಟ್ಟು 8,35,210 ರೂ. ಸಂಗ್ರಹವಾಗಿದೆ. 

ಗಸ್ತು ಕಾರ್ಯಾಚರಣೆ ಸ್ಥಗಿತ: ಸ್ವಚ್ಛ ಸರ್ವೇಕ್ಷಣ್‌ ಅಭಿಯಾನದಲ್ಲಿ ಉತ್ತಮ ರ್‍ಯಾಂಕ್‌ ಪಡೆಯುವ ಉದ್ದೇಶದಿಂದ ಪಾಲಿಕೆಯಿಂದ ರಾತ್ರಿ ಗಸ್ತು ನಡೆಸಲು ಮಾರ್ಷಲ್‌ಗ‌ಳನ್ನು ನೇಮಿಸಲಾಗಿತ್ತು. ಈಗ ಅಭಿಯಾನ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮಾರ್ಷಲ್‌ಗ‌ಳನ್ನು ಕ್ವಾರಿ ಹಾಗೂ ತ್ಯಾಜ್ಯ ಸಂಸ್ಕರಣಾ ಘಟಕಗಳ ಬಳಿಗೆ ಕಳುಹಿಸಲಾಗಿದೆ. ಪ್ರತಿ ವಾರ್ಡ್‌ಗೆ ಮಾರ್ಷಲ್‌ಗ‌ಳನ್ನು ನೇಮಿಸುವ ಪ್ರಸ್ತಾವನೆಗೆ ಸರ್ಕಾರ ಅನುಮತಿ ನೀಡಿದರೆ ಮತ್ತೆ ಕಾರ್ಯಾಚರಣೆ ಆರಂಭಿಸುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.