Crime: ತುಂಡರಿಸಿದ ಮೃತ ದೇಹ ಪತ್ತೆಗೆ ಶೋಧ


Team Udayavani, Jun 10, 2024, 11:59 AM IST

3

ಬೆಂಗಳೂರು: ಅಕ್ರಮ ಸಂಬಂಧ ಹಾಗೂ ಹಣಕಾಸಿನ ವಿಚಾರಕ್ಕೆ ಹತ್ಯೆಗೀಡಾದ ಚಿಟ್‌ ಫಂಡ್‌ ಕಂಪನಿ ಉದ್ಯೋಗಿ ಶ್ರೀನಾಥ್‌ ದೇಹದ ತುಂಡು ಗಳ ಪತ್ತೆ ಕಾರ್ಯ ಮುಂದುವರಿದಿದ್ದು, ಭಾನುವಾರ ಬೆಳತ್ತೂರು ರಾಜಕಾಲುವೆ ಯಲ್ಲಿ ರಾಮಮೂರ್ತಿನಗರ ಠಾಣೆ ಪೊಲೀಸರು ಹಾಗೂ ಮುಳುಗು ತಜ್ಞರು ಶೋಧ ನಡೆಸಿದರು.

ಹಣಕಾಸು ವಿಚಾರ ಮತ್ತು ಪತ್ನಿಯೊಂದಿಗಿನ ಅಕ್ರಮ ಸಂಬಂಧ ಕಾರಣಕ್ಕೆ ಶ್ರೀನಾಥ್‌ನನ್ನು ಮೇ 28ರಂದು ಕೊಲೆ ಮಾಡಿದ್ದ ಆರೋಪಿ ಮಾಧವರಾವ್‌, ಮೃತದೇಹವನ್ನು ಹಲವು ತುಂಡುಗಳಾಗಿ ಕತ್ತರಿಸಿದ್ದ. ಬಳಿಕ ಚೀಲಕ್ಕೆ ತುಂಬಿಸಿ ದ್ವಿಚಕ್ರದಲ್ಲಿ ಸಾಗಿಸಿಕೊಂಡು ಹೋಗಿ ಬೆಳತ್ತೂರು ರಾಜಕಾಲುವೆಗೆ ಎಸೆದಿದ್ದ. ಆರೋಪಿ ಮಾಧವರಾವ್‌ ನೀಡಿದ ಮಾಹಿತಿ ಆಧರಿಸಿ ಶ್ರೀನಾಥ್‌ರ ಮೃತ ದೇಹದ ಭಾಗಗಳಿಗಾಗಿ ರಾಜಕಾಲುವೆಯಲ್ಲಿ ಶನಿವಾರ 5 ಕಿ.ಮೀ.ವರೆಗೆ ಶೋಧ ಕಾರ್ಯ ನಡೆಸಲಾಗಿತ್ತು. ಭಾನುವಾರ ಸುಮಾರು 5 ಕಿ.ಮೀ. ಶೋಧ ನಡೆಸಲಾ ಯಿತು. ರಾಜಕಾಲುವೆಯೊಳಗೆ ಬೆಳೆದಿರುವ ಗಿಡಗಳ ಪೊದೆಗಳಲ್ಲೂ ಪರಿಶೀಲನೆ ಮಾಡಲಾಯಿತು. ಆದರೆ, ಎಲ್ಲಿಯೂ ಮೃತ ದೇಹದ ತುಂಡುಗಳು ಪತ್ತೆಯಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದರು.

ಆರೋಪಿ ಮಾಧವರಾವ್‌, ಶ್ರೀನಾಥ್‌ರ ಮೃತ ದೇಹದ ತುಂಡುಗಳನ್ನು ತುಂಬಿಸಿದ್ದ ಚೀಲವನ್ನು ಕಟ್ಟಿರಲಿಲ್ಲ. ಜತೆಗೆ, ಆ ಸಂದರ್ಭದಲ್ಲಿ ರಾಜಕಾಲುವೆಯಲ್ಲಿ ಹೆಚ್ಚಿನ ಪ್ರಮಾಣದ ನೀರು ಇರಲಿಲ್ಲ. ಮಾಧವರಾವ್‌, ಮೃತ ದೇಹದ ತುಂಡುಗಳನ್ನು ಎಸೆದ ನಂತರದ ದಿನಗಳಲ್ಲಿ ವ್ಯಾಪಕ ಮಳೆಯಾಗಿ ರಾಜಕಾಲುವೆಯಲ್ಲಿ ನೀರಿನ ಹರಿವು ಹೆಚ್ಚಿದೆ. ಹೀಗಾಗಿ, ಮೃತ ದೇಹದ ತುಂಡುಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಬೆಳತ್ತೂರು ರಾಜಕಾಲುವೆಯ ನೀರು ಪಿನಾಕಿನಿ ನದಿಗೆ ಸೇರುತ್ತದೆ. ಸೋಮವಾರವೂ ಶೋಧ ಕಾರ್ಯ ಮುಂದುವರಿಸುತ್ತೇವೆ. ಮಾಧವರಾವ್‌ನನ್ನು ಕೊಲೆ ಪ್ರಕರಣ ಸಂಬಂಧ ವಿಜಿನಾಪುರದ ಆತನ ಮನೆಗೆ ಕರೆದೊಯ್ದು ಸ್ಥಳ ಮಹಜರು ನಡೆಸಲಾಯಿತು ಎಂದು ಪೊಲೀಸರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

IPL retention: IPL new rule gave good news to Chennai-Mumbai Franchise

IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-bng

Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್‌ ಬಸ್‌’

11-bng

Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ

10-bng

Bengaluru: ಇಬ್ಬರು ಡ್ರಗ್ಸ್‌ ಪೆಡ್ಲರ್ ಸೆರೆ: 51 ಕೆ.ಜಿ. ಗಾಂಜಾ ಜಪ್ತಿ

9–bng

Bengaluru: ಮೋಜಿನ ಜೀವನಕ್ಕೆ ಸರ ಕದೀತಿದ್ದ ಯುವಕನ ಸೆರೆ

8-bng

Bengaluru: ವಾಹನ ಕಳ್ಳನ ಬಂಧನ: 30 ದ್ವಿಚಕ್ರ ವಾಹನ ಜಪ್ತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

IPL retention: IPL new rule gave good news to Chennai-Mumbai Franchise

IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.