ಕರುನಾಡ ಮಣ್ಣಿನ ಭಾಷೆಯಲ್ಲಿ ಸಂಸ್ಕೃತಿ ಅಡಗಿದೆ


Team Udayavani, Apr 21, 2019, 3:00 AM IST

karunada

ಬೆಂಗಳೂರು: ಈ ಕರುನಾಡಿನ ಮಣ್ಣಿನ ಭಾಷೆಯಲ್ಲಿ ಸಂಸ್ಕೃತಿ ಅಡಗಿದ್ದು, ಇದನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಕೆಲಸವಾಗಬೇಕಾಗಿದೆ ಎಂದು ಇನ್ಫೋಸಿಸ್‌ ಫೌಂಡೇಷನ್‌ ಅಧ್ಯಕ್ಷೆ ಸುಧಾ ಮೂರ್ತಿ ಅಭಿಪ್ರಾಯ ವ್ಯಕ್ತಪಡಿಸಿದರು.

ಸಂಸ್ಕೃತ ಭಾರತಿ ಸಂಸ್ಥೆ, ಶನಿವಾರ ಗಿರಿನಗರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಚಿಂತಕ ಮತ್ತು ಲೇಖಕ ಶತಾವಧಾನಿ ಆರ್‌.ಗಣೇಶ್‌ ಅವರ “ಮಹಾಬ್ರಾಹ್ಮಣ’, ಜನಾರ್ಧನ ಹೆಗಡೆ ಅವರ “ಇಂದ್ರಲೇಖ’ ಹಾಗೂ “ಗ್ರಂಥಿಲಂ’ ಕೃತಿಗಳನ್ನು ಲೋಕಾರ್ಪಣೆ ಗೊಳಿಸಿ ಮಾತನಾಡಿದ ಅವರು, ಸಂಸ್ಕೃತ ಭಾಷೆಯಲ್ಲಿ ಸೌಂದರ್ಯ ಅಡಗಿದೆ ಎಂದು ಹೇಳಿದರು.

ಆಂಗ್ಲ ಭಾಷೆ ಕವಿ ವಿಲಿಯಂ ಷೇಕ್‌ಸ್ಪಿಯರ್‌ಗಿಂತಲೂ ಉತ್ತಮ ಕಾವ್ಯಗಳನ್ನು ಕಾಳಿದಾಸ ಸೇರಿದಂತೆ ಹಲವು ಕವಿಗಳು ಸಂಸ್ಕೃತದಲ್ಲಿ ರಚನೆ ಮಾಡಿದ್ದಾರೆ. ಆದರೆ, ಅವುಗಳು ಪಾಠ್ಯರೂಪದಲ್ಲಿ ಅಷ್ಟೊಂದು ಇಲ್ಲ.

ಹೀಗಾಗಿ, ಇಂತಹ ಮಹಾನ್‌ ವಿದ್ವಾಂಸರ ಸಾಹಿತ್ಯ ಮಕ್ಕಳಿಗೂ ಪರಿಚಯವಾಗಬೇಕಾಗಿದ್ದು, ಪೋಷಕರು ಈ ಕವಿಗಳ ಸಾಹಿತ್ಯವನ್ನು ಅರ್ಥೈಹಿಸಿಕೊಂಡು ಮಕ್ಕಳಿಗೆ ತಿಳಿ ಹೇಳಬೇಕು. ಯಾವುದೇ ಕಾರಣಕ್ಕೂ ಕಾಳಿದಾಸರಂತ ಶ್ರೇಷ್ಠ ಕವಿಗಳ ಸಾಹಿತ್ಯ ಕೇವಲ ಪುಸ್ತಕಗಳಿಗೆ ಸೀಮಿತವಾಗಬಾರದು ಎಂದು ತಿಳಿಸಿದರು.

ಲ್ಯಾಟಿನ್‌ ಮತ್ತು ಗ್ರೀಕ್‌ ಸಾಹಿತ್ಯದಲ್ಲಿನ ಎರಡರಷ್ಟು ಉತ್ತಮ ಸಾಹಿತ್ಯ ಸಂಸ್ಕೃತ ಭಾಷೆಯಲ್ಲಿದೆ.ನಮ್ಮ ಹಿರಿಯರು ಶೇಷ್ಠ ನಾಟಕಗಳ ಜತೆಗೆ ಸಾಹಿತ್ಯವನ್ನು ರಚಿಸಿದ್ದು, ಇದನ್ನು ನಮ್ಮ ಮುಂದಿನ ಜನಾಂಗಕ್ಕೆ ಬಳುವಳಿಯಾಗಿ ನೀಡುವ ನಿಟ್ಟಿನಲ್ಲಿ ಕೆಲಸವಾಗಬೇಕಾಗಿದೆ ಎಂದು ಹೇಳಿದರು.

ನನಗೆ ಸಂಸ್ಕೃತ ಭಾಷೆ ಮಾತನಾಡಲು ಬರುವುದಿಲ್ಲ.ಆದರೆ, ಏನು ಮಾತನಾಡಿದರು ಎಂಬುವುದು ಅರ್ಥವಾಗುತ್ತದೆ. ನಮ್ಮ ತಾತ ನನಗೆ ಕಾಳಿದಾಸ ಕಾವ್ಯಗಳನ್ನು ಸಂಸ್ಕೃತದಲ್ಲಿ ಹೇಳಿಕೊಡುತ್ತಿದ್ದರು. ಹೀಗಾಗಿ ಕಾಳಿದಾಸನ ಕಾವ್ಯಗಳ ಬಗ್ಗೆ ನನಗೆ ಅರಿವಿದೆ. ಜ್ಞಾನ-ವಿಜ್ಞಾನ ಈ ಭಾಷೆಯಲ್ಲಿ ಅಡಗಿದೆ ಎಂದರು.

ಲೇಖಕ ಮತ್ತು ಚಿಂತಕ ಶತಾವಧಾನಿ ಡಾ.ಆರ್‌.ಗಣೇಶ್‌ ಮಾತನಾಡಿ, ದೇವುಡು ನರಸಿಂಹ ಶಾಸ್ತ್ರೀ ಅವರ ಗದ್ಯ ಕಾವ್ಯದಲ್ಲಿದ್ದ “ಮಹಾಬ್ರಾಹ್ಮಣ’ ಕೃತಿಯನ್ನು ಸಂಸ್ಕೃತ ಭಾಷೆಯಲ್ಲಿ ತಂದಿರುವುದು ಖುಷಿ ಕೊಟ್ಟಿದೆ. ಗದ್ಯ ಕಾವ್ಯದಲ್ಲಿದ್ದ ಕೃತಿಯನ್ನು ಸಂಸ್ಕೃತದಲ್ಲಿ ಪದ್ಯರೂಪಕ್ಕೆ ತರುವುದು ಎಷ್ಟು ಕಷ್ಟ ಎಂಬ ಅರಿವು ನನಗಾಯಿತು ಎಂದು ಹೇಳಿದರು.

ನಾಗಪುರದ ಕಾಳಿದಾಸ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಡಾ.ಶ್ರೀನಿವಾಸ ವರಖೇಡಿ, ದೇವುಡು ಪ್ರತಿಷ್ಠಾನದ ಗಂಗಾಧರ ದೇವುಡು, ಪ್ರೇಕ್ಷಾ ಸಂಪಾದಕ ಗಣ್ಯ ಸದಸ್ಯ ಬಿ.ಎನ್‌.ಶಶಿಕಿರಣ ಉಪಸ್ಥಿತರಿದ್ದರು.

10 ಲಕ್ಷ ರೂ. ದೇಣಿಗೆ: ಸಂಸ್ಕೃತ ಕಲಿಸುವ ನಿಟ್ಟಿನಲ್ಲಿ ಸಂಸ್ಕೃತ ಭಾರತಿ ಸಂಸ್ಥೆ ಉತ್ತಮವಾದ ಕೆಲಸವನ್ನು ಮಾಡುತ್ತಿದ್ದು, ಸಂಸ್ಕೃತವನ್ನು ಮತ್ತಷ್ಟು ಜನರಿಗೆ ಕಲಿಸಲಿ ಎಂಬ ಉದ್ದೇಶದಿಂದ ಇನ್‌ಫೋಸಿಸ್‌ ಫೌಂಡೇಷನ್‌ ವತಿಯಿಂದ ಸಂಸ್ಕೃತ ಭಾರತಿ ಸಂಸ್ಥೆಗೆ 10 ಲಕ್ಷ ರೂ.ದೇಣಿಗೆ ನೀಡುವುದಾಗಿ ಸುಧಾಮೂರ್ತಿ ಹೇಳಿದರು.

ಟಾಪ್ ನ್ಯೂಸ್

Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?

Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?

Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು

Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು

Bhairadevi Review; ಅಘೋರಿ ಹಿಂದೆ ಘೋರ ಕಥನ

Bhairadevi Review; ಅಘೋರಿ ಹಿಂದೆ ಘೋರ ಕಥನ

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ಮೃತ್ಯು

Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ

3-gangavathi-3

Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ

Pit Bull: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನ ಕಿತ್ತ ಕಿವಿ ಜೋಡಣೆ

Surgery: 11 ಗಂಟೆ ಶಸ್ತ್ರಚಿಕಿತ್ಸೆ ನಡೆಸಿ ಪಿಟ್‌ ಬುಲ್‌ ಶ್ವಾನದ ಕಿತ್ತ ಕಿವಿ ಜೋಡಣೆ

Gadaga: ಜಿಲ್ಲೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಪಡಿತರ ಅಕ್ಕಿ ಅಕ್ರಮ ಸಾಗಾಟ…

Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-bng

Bengaluru: ಬಿಡಿಎಗೆ ವಂಚನೆ: 19 ಮಂದಿ ವಿರುದ್ಧ ಕೇಸ್‌

Bengalru-Bomb

Bomb Threat: ಬೆಂಗಳೂರು ನಗರದ ಪ್ರತಿಷ್ಠಿತ ಮೂರು ಕಾಲೇಜುಗಳಿಗೆ ಬಾಂಬ್‌ ಬೆದರಿಕೆ!

Manipal Hospital has set a new Guinness World Record by performing 3,319 CPRs in just 24 hours!

24 ಗಂಟೆಗಳಲ್ಲಿ 3,319 ಸಿಪಿಆರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ಮಣಿಪಾಲ್‌ ಆಸ್ಪತ್ರೆ

7-bng

Bengaluru ನಗರದಲ್ಲಿ ಸಂಭ್ರಮದ ನವರಾತ್ರಿ, ವಿಶೇಷ ಪೂಜೆ

6-darshan

Darshan Bail: ಇಂದು ದರ್ಶನ್‌ ಜಾಮೀನು ಅರ್ಜಿ ವಿಚಾರಣೆ: ಕುತೂಹಲ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?

Navaratri Special: ಬೆಳಕಿನ ರೂವಾರಿ ಹೆಣ್ಣು ಯಾಕೆ ಕತ್ತಲೆಗೆ ಹೆದರುತ್ತಿದ್ದಾಳೆ?

5-bng

Bengaluru: ಬಿಡಿಎಗೆ ವಂಚನೆ: 19 ಮಂದಿ ವಿರುದ್ಧ ಕೇಸ್‌

Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು

Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು

4-Kanahosahalli

Kanahosahalli: ಹೋಬಳಿಯಾದ್ಯಂತ ಭಾರಿ ಮಳೆ; ಹಳ್ಳದಲ್ಲಿ ಕೊಚ್ಚಿಹೋದ ಮಿನಿ ಲಾರಿ

Bhairadevi Review; ಅಘೋರಿ ಹಿಂದೆ ಘೋರ ಕಥನ

Bhairadevi Review; ಅಘೋರಿ ಹಿಂದೆ ಘೋರ ಕಥನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.