ಕರುನಾಡ ಮಣ್ಣಿನ ಭಾಷೆಯಲ್ಲಿ ಸಂಸ್ಕೃತಿ ಅಡಗಿದೆ


Team Udayavani, Apr 21, 2019, 3:00 AM IST

karunada

ಬೆಂಗಳೂರು: ಈ ಕರುನಾಡಿನ ಮಣ್ಣಿನ ಭಾಷೆಯಲ್ಲಿ ಸಂಸ್ಕೃತಿ ಅಡಗಿದ್ದು, ಇದನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಕೆಲಸವಾಗಬೇಕಾಗಿದೆ ಎಂದು ಇನ್ಫೋಸಿಸ್‌ ಫೌಂಡೇಷನ್‌ ಅಧ್ಯಕ್ಷೆ ಸುಧಾ ಮೂರ್ತಿ ಅಭಿಪ್ರಾಯ ವ್ಯಕ್ತಪಡಿಸಿದರು.

ಸಂಸ್ಕೃತ ಭಾರತಿ ಸಂಸ್ಥೆ, ಶನಿವಾರ ಗಿರಿನಗರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಚಿಂತಕ ಮತ್ತು ಲೇಖಕ ಶತಾವಧಾನಿ ಆರ್‌.ಗಣೇಶ್‌ ಅವರ “ಮಹಾಬ್ರಾಹ್ಮಣ’, ಜನಾರ್ಧನ ಹೆಗಡೆ ಅವರ “ಇಂದ್ರಲೇಖ’ ಹಾಗೂ “ಗ್ರಂಥಿಲಂ’ ಕೃತಿಗಳನ್ನು ಲೋಕಾರ್ಪಣೆ ಗೊಳಿಸಿ ಮಾತನಾಡಿದ ಅವರು, ಸಂಸ್ಕೃತ ಭಾಷೆಯಲ್ಲಿ ಸೌಂದರ್ಯ ಅಡಗಿದೆ ಎಂದು ಹೇಳಿದರು.

ಆಂಗ್ಲ ಭಾಷೆ ಕವಿ ವಿಲಿಯಂ ಷೇಕ್‌ಸ್ಪಿಯರ್‌ಗಿಂತಲೂ ಉತ್ತಮ ಕಾವ್ಯಗಳನ್ನು ಕಾಳಿದಾಸ ಸೇರಿದಂತೆ ಹಲವು ಕವಿಗಳು ಸಂಸ್ಕೃತದಲ್ಲಿ ರಚನೆ ಮಾಡಿದ್ದಾರೆ. ಆದರೆ, ಅವುಗಳು ಪಾಠ್ಯರೂಪದಲ್ಲಿ ಅಷ್ಟೊಂದು ಇಲ್ಲ.

ಹೀಗಾಗಿ, ಇಂತಹ ಮಹಾನ್‌ ವಿದ್ವಾಂಸರ ಸಾಹಿತ್ಯ ಮಕ್ಕಳಿಗೂ ಪರಿಚಯವಾಗಬೇಕಾಗಿದ್ದು, ಪೋಷಕರು ಈ ಕವಿಗಳ ಸಾಹಿತ್ಯವನ್ನು ಅರ್ಥೈಹಿಸಿಕೊಂಡು ಮಕ್ಕಳಿಗೆ ತಿಳಿ ಹೇಳಬೇಕು. ಯಾವುದೇ ಕಾರಣಕ್ಕೂ ಕಾಳಿದಾಸರಂತ ಶ್ರೇಷ್ಠ ಕವಿಗಳ ಸಾಹಿತ್ಯ ಕೇವಲ ಪುಸ್ತಕಗಳಿಗೆ ಸೀಮಿತವಾಗಬಾರದು ಎಂದು ತಿಳಿಸಿದರು.

ಲ್ಯಾಟಿನ್‌ ಮತ್ತು ಗ್ರೀಕ್‌ ಸಾಹಿತ್ಯದಲ್ಲಿನ ಎರಡರಷ್ಟು ಉತ್ತಮ ಸಾಹಿತ್ಯ ಸಂಸ್ಕೃತ ಭಾಷೆಯಲ್ಲಿದೆ.ನಮ್ಮ ಹಿರಿಯರು ಶೇಷ್ಠ ನಾಟಕಗಳ ಜತೆಗೆ ಸಾಹಿತ್ಯವನ್ನು ರಚಿಸಿದ್ದು, ಇದನ್ನು ನಮ್ಮ ಮುಂದಿನ ಜನಾಂಗಕ್ಕೆ ಬಳುವಳಿಯಾಗಿ ನೀಡುವ ನಿಟ್ಟಿನಲ್ಲಿ ಕೆಲಸವಾಗಬೇಕಾಗಿದೆ ಎಂದು ಹೇಳಿದರು.

ನನಗೆ ಸಂಸ್ಕೃತ ಭಾಷೆ ಮಾತನಾಡಲು ಬರುವುದಿಲ್ಲ.ಆದರೆ, ಏನು ಮಾತನಾಡಿದರು ಎಂಬುವುದು ಅರ್ಥವಾಗುತ್ತದೆ. ನಮ್ಮ ತಾತ ನನಗೆ ಕಾಳಿದಾಸ ಕಾವ್ಯಗಳನ್ನು ಸಂಸ್ಕೃತದಲ್ಲಿ ಹೇಳಿಕೊಡುತ್ತಿದ್ದರು. ಹೀಗಾಗಿ ಕಾಳಿದಾಸನ ಕಾವ್ಯಗಳ ಬಗ್ಗೆ ನನಗೆ ಅರಿವಿದೆ. ಜ್ಞಾನ-ವಿಜ್ಞಾನ ಈ ಭಾಷೆಯಲ್ಲಿ ಅಡಗಿದೆ ಎಂದರು.

ಲೇಖಕ ಮತ್ತು ಚಿಂತಕ ಶತಾವಧಾನಿ ಡಾ.ಆರ್‌.ಗಣೇಶ್‌ ಮಾತನಾಡಿ, ದೇವುಡು ನರಸಿಂಹ ಶಾಸ್ತ್ರೀ ಅವರ ಗದ್ಯ ಕಾವ್ಯದಲ್ಲಿದ್ದ “ಮಹಾಬ್ರಾಹ್ಮಣ’ ಕೃತಿಯನ್ನು ಸಂಸ್ಕೃತ ಭಾಷೆಯಲ್ಲಿ ತಂದಿರುವುದು ಖುಷಿ ಕೊಟ್ಟಿದೆ. ಗದ್ಯ ಕಾವ್ಯದಲ್ಲಿದ್ದ ಕೃತಿಯನ್ನು ಸಂಸ್ಕೃತದಲ್ಲಿ ಪದ್ಯರೂಪಕ್ಕೆ ತರುವುದು ಎಷ್ಟು ಕಷ್ಟ ಎಂಬ ಅರಿವು ನನಗಾಯಿತು ಎಂದು ಹೇಳಿದರು.

ನಾಗಪುರದ ಕಾಳಿದಾಸ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಡಾ.ಶ್ರೀನಿವಾಸ ವರಖೇಡಿ, ದೇವುಡು ಪ್ರತಿಷ್ಠಾನದ ಗಂಗಾಧರ ದೇವುಡು, ಪ್ರೇಕ್ಷಾ ಸಂಪಾದಕ ಗಣ್ಯ ಸದಸ್ಯ ಬಿ.ಎನ್‌.ಶಶಿಕಿರಣ ಉಪಸ್ಥಿತರಿದ್ದರು.

10 ಲಕ್ಷ ರೂ. ದೇಣಿಗೆ: ಸಂಸ್ಕೃತ ಕಲಿಸುವ ನಿಟ್ಟಿನಲ್ಲಿ ಸಂಸ್ಕೃತ ಭಾರತಿ ಸಂಸ್ಥೆ ಉತ್ತಮವಾದ ಕೆಲಸವನ್ನು ಮಾಡುತ್ತಿದ್ದು, ಸಂಸ್ಕೃತವನ್ನು ಮತ್ತಷ್ಟು ಜನರಿಗೆ ಕಲಿಸಲಿ ಎಂಬ ಉದ್ದೇಶದಿಂದ ಇನ್‌ಫೋಸಿಸ್‌ ಫೌಂಡೇಷನ್‌ ವತಿಯಿಂದ ಸಂಸ್ಕೃತ ಭಾರತಿ ಸಂಸ್ಥೆಗೆ 10 ಲಕ್ಷ ರೂ.ದೇಣಿಗೆ ನೀಡುವುದಾಗಿ ಸುಧಾಮೂರ್ತಿ ಹೇಳಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.