ಪೋತೀಸ್‌ನಲ್ಲಿ ದಸರಾ-ದೀಪಾವಳಿ ಸಂಭ್ರಮ


Team Udayavani, Oct 8, 2018, 12:20 PM IST

potjis.jpg

ಬೆಂಗಳೂರು: ನಗರದ ಕೆಂಪೇಗೌಡ ರಸ್ತೆಯ ಜನಪ್ರಿಯ ಪೋತೀಸ್‌ ವಸ್ತ್ರಭಂಡಾರ, ಗ್ರಾಹಕರಿಗೆ “ಸಿಹಿ ಕೊಡುಗೆ’ ನೀಡುವ ಮೂಲಕ ದಸರಾ ಮತ್ತು ದೀಪಾವಳಿ ಹಬ್ಬಗಳನ್ನು ಸಂಭ್ರಮದಿಂದ ಆಚರಿಸುತ್ತಿದೆ.

ಭಾನುವಾರ ಮಳಿಗೆಯಲ್ಲಿ ಹಮ್ಮಿಕೊಂಡಿದ್ದ ಸಿಹಿ ಕೊಡುಗೆ ನೀಡುವ ಕಾರ್ಯಕ್ರಮವನ್ನು ಬಿಬಿಎಂಪಿ ಸದಸ್ಯೆ ಲತಾ ನವೀನ್‌ ಕುಮಾರ್‌ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಹಲವು ಗ್ರಾಹಕರಿಗೆ ಸಿಹಿ ತಿನಿಸುಗಳ ಬಾಕ್ಸ್‌ ನೀಡುವ ಮೂಲಕ ಸಿಹಿ ದಸರಾ ಮತ್ತು ಸಿಹಿ ದೀಪಾವಳಿ ಮಾರಾಟಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಲತಾ ಅವರು, ನಮ್ಮ ಗಾಂಧಿನಗರ ವಾರ್ಡ್‌ನಲ್ಲಿ ಬೃಹತ್‌ ಪೋತೀಸ್‌ ಮಳಿಗೆ ಆರಂಭವಾಗಿರುವುದು ನಮಗೆ ಬಹಳ ಸಂತೋಷ ತಂದಿದೆ. ಇದು ಈ ಭಾಗದ ಜನತೆಗೆ ಮಾತ್ರವಲ್ಲದೆ, ಇಡೀ ಬೆಂಗಳೂರಿನ ನಾಗರಿಕರಿಗೆ ಬಹಳ ಅನುಕೂಲವಾಗಿದೆ. ಸಂಪೂರ್ಣ ಕುಟುಂಬಕ್ಕೆ ಅಗತ್ಯವಿರುವ ಎಲ್ಲ ರೀತಿ ಆಧುನಿಕ ಹಾಗೂ ಸಾಂಪ್ರದಾಯಿಕ ಉಡುಗೆ, ತೊಡುಗೆಗಳು ಒಂದೇ ಸೂರಿನಡಿ ದೊರೆಯುತ್ತವೆ.

ಮಕ್ಕಳಿಂದ ಹಿಡಿದು ಎಲ್ಲ ವಯಸ್ಸಿನವರಿಗೂ ನಾನಾ ವಿಧದ ವಸ್ತ್ರಗಳ ಬೃಹತ್‌ ಸಂಗ್ರಹ ಇಲ್ಲಿದೆ ಎಂದರು. ಪೋತೀಸ್‌ ಮಳಿಗೆಯ ಹಿರಿಯ ಜನರಲ್‌ ಮ್ಯಾನೇಜರ್‌ ಕೃಷ್ಣಕುಮಾರ್‌ ಮಾತನಾಡಿ, ಶತಮಾನದ ಹೊಸ್ತಿಲಿನಲ್ಲಿರುವ ಪೋತೀಸ್‌ ದಕ್ಷಿಣ ಭಾರತದಲ್ಲಿ 15 ಶಾಖೆಗಳನ್ನು ತೆರೆದಿದೆ.

ಬೆಂಗಳೂರಿನ ಈ ಶಾಖೆ 14ನೇಯದಾಗಿದ್ದು, ಇಲ್ಲಿನ ಗ್ರಾಹಕರು ನಮ್ಮನ್ನು ಬಹಳ ಆದರದಿಂದ ಕಾಣುತ್ತಿದ್ದಾರೆ. ನಮ್ಮಲ್ಲಿ ರೇಷ್ಮೆ ಸೀರೆ, ಡಿಸೈನರ್‌ ಮತ್ತು ಫ್ಯಾನ್ಸಿ ಸೀರೆಗಳ ದೊಡ್ಡ ಸಂಗ್ರಹವಿದೆ. ಡ್ರೆಸ್‌ ಮೆಟೀರಿಯಲ್‌ ಮತ್ತು ಎಲ್ಲ ಬ್ರಾಂಡ್‌ನ‌ ರೆಡಿಮೇಡ್‌ ಬಟ್ಟೆಗಳ ಬೃಹತ್‌ ಸಂಗ್ರಹವಿದೆ ಎಂದರು.

ಪ್ರಥಮ ಬಾರಿಗೆ ನಮ್ಮ ಗ್ರಾಹಕರೊಡನೆ ಆಚರಿಸುತ್ತಿರುವ ದಸರಾ-ದೀಪಾವಳಿ ಹಬ್ಬವಿದು. ಈ ಹಬ್ಬಗಳು ಜನತೆ ಜೀವನದಲ್ಲಿ ಸಿಹಿ ದಸರಾ ಹಾಗೂ ಸಿಹಿ ದೀಪಾವಳಿ ಆಗಲೆಂಬ ಇಚ್ಛೆಯಿಂದ ಸಿಹಿ ಹಂಚಿಕೊಳ್ಳುವ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದರು.

ಬೆಂಗಳೂರು ಜಿಲ್ಲಾ ಕಾಂಗ್ರೆಸ್‌ ಸಮಿತಿ ಪ್ರಧಾನ ಕಾರ್ಯದರ್ಶಿ ನವೀನ್‌ ಕುಮಾರ್‌, ಪೋತೀಸ್‌ಗೆ ದಸರಾ ಹಬ್ಬದ ಶುಭಾಶಯ ಕೋರಿದರು. ಪೋತೀಸ್‌ನ ಎಚ್‌ಆರ್‌ ಮ್ಯಾನೇಜರ್‌ ಸರಣವನ್‌, ಲಕ್ಷ್ಮಿ, ರಶೀದ್‌, ದೀಪಕ್‌ ಇತತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-shah

Rahul Gandhi ಗ್ಯಾರಂಟಿಗಳು ಕರ್ನಾಟಕ, ಹಿಮಾಚಲದಲ್ಲಿ ಫಸಲು ನೀಡಿವೆ: ಅಮಿತ್ ಶಾ

6

World Heart Day: ನಿಮ್ಮ ಹೃದಯ ಜೀವಕ್ಕೆ ಕುತ್ತಾಗುವ ಮುನ್ನ ಎಚ್ಚೆತ್ತುಕೊಳ್ಳೋಣ

1-jjk

Nasrallah ಹ*ತ್ಯೆ ಖಂಡಿಸಿ ಕಾಶ್ಮೀರದಲ್ಲಿ ಬೃಹತ್ ಪ್ರತಿಭಟನೆ; ಮಾಜಿ ಸಿಎಂ ಮುಫ್ತಿ ಬೆಂಬಲ !

Mysore

Mysuru ಸಾಂಸ್ಕೃತಿಕ ನಗರಿಯಲ್ಲಿ ರೇವ್‌ ಪಾರ್ಟಿ: ಪೊಲೀಸ್‌ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ

Udupi: ಜಾತಿ ವ್ಯವಸ್ಥೆ ಒಳ್ಳೆಯದು, ನಾನು ಯಾವ ಜಾತಿ ಎಂಬುದೇ ಗೊತ್ತಿರಲಿಲ್ಲ: ಯದುವೀರ್

Udupi: ಜಾತಿ ವ್ಯವಸ್ಥೆ ಒಳ್ಳೆಯದು, ನಾನು ಯಾವ ಜಾತಿ ಎಂಬುದೇ ಗೊತ್ತಿರಲಿಲ್ಲ: ಯದುವೀರ್

15-bng

Bengaluru: ತನ್ನ ಖಾಸಗಿ ಕ್ಷಣಗಳಿದ್ದ ಮೊಬೈಲ್‌ ಕದಿಯಲು ಸುಪಾರಿ!

pejavar

Pejawar Swamiji; ಸರಕಾರದ ನಿಯಂತ್ರಣದಿಂದ ದೇವಸ್ಥಾನಗಳು ಮುಕ್ತವಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-bng

Bengaluru: 460 ಕೋಟಿ ರೂ. ಮೌಲ್ಯದ ಆಸ್ತಿ ವಶ ಪಡೆದ ಬಿಡಿಎ!

15-bng

Bengaluru: ತನ್ನ ಖಾಸಗಿ ಕ್ಷಣಗಳಿದ್ದ ಮೊಬೈಲ್‌ ಕದಿಯಲು ಸುಪಾರಿ!

Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ

Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ

12-bng

Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್‌ ಬಸ್‌’

11-bng

Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

suicide (2)

Belgavi; ಇಬ್ಬರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

6

Karkala: ಎಲ್ಲಿ ಹೋಯಿತು ಬಂಗ್ಲೆಗುಡ್ಡೆ ವೃತ್ತದ ಸಿಸಿ ಕೆಮರಾ?

1-shah

Rahul Gandhi ಗ್ಯಾರಂಟಿಗಳು ಕರ್ನಾಟಕ, ಹಿಮಾಚಲದಲ್ಲಿ ಫಸಲು ನೀಡಿವೆ: ಅಮಿತ್ ಶಾ

6

World Heart Day: ನಿಮ್ಮ ಹೃದಯ ಜೀವಕ್ಕೆ ಕುತ್ತಾಗುವ ಮುನ್ನ ಎಚ್ಚೆತ್ತುಕೊಳ್ಳೋಣ

5

Karkala: ಬಸ್‌ ನಿಲ್ದಾಣದಲ್ಲಿ ಲಘು ವಾಹನ!ಬಸ್‌ ನಿಲ್ದಾಣದ ಬಗ್ಗೆ ಪುರಸಭೆ ದಿವ್ಯ ನಿರ್ಲಕ್ಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.