ಡೆಡ್‌ಸ್ಟೋರೇಜ್‌ ಬಳಕೆ ಸದ್ಯಕ್ಕಿಲ್ಲ


Team Udayavani, Feb 24, 2017, 11:11 AM IST

dead-storage.jpg

ಬೆಂಗಳೂರು: ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ಸದ್ಯ 12.69 ಟಿಎಂಸಿ ನೀರು ಸಂಗ್ರಹವಿದ್ದು, ಸಮರ್ಪಕವಾಗಿ ಬಳಸಿದರೆ ಮೇ ತಿಂಗಳ ಮಧ್ಯದವರೆಗೆ ಬೆಂಗಳೂರಿಗೆ ಅಗತ್ಯ ಪ್ರಮಾಣದ ನೀರು ಪೂರೈಸಲು ಅವಕಾಶವಿದೆ. ಆದಾದ ನಂತರವೂ ಪರಿಸ್ಥಿತಿ ಬಿಗಡಾಯಿಸಿದರೆ ಡೆಡ್‌ ಸ್ಟೋರೇಜ್‌ ಬಳಕೆ ಬಗ್ಗೆ ಚಿಂತನೆ ನಡೆಸಲು ಕಾವೇರಿ ನೀರಾವರಿ ನಿಗಮ ನಿರ್ಧರಿಸಿದೆ.

ಕಾವೇರಿ ನೀರಾವರಿ ನಿಗಮದ ಕಚೇರಿಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಬೆಂಗಳೂರು ಜಲಮಂಡಳಿ ಅಧಿಕಾರಿಗಳು ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳು ಡೆಡ್‌ಸ್ಟೋರೇಜ್‌ ಬಳಕೆ ಕುರಿತು ಮಾತುಕತೆ ನಡೆಸಿದರು. ಸದ್ಯ ಲಭ್ಯವಿರುವ ನೀರಿನಲ್ಲೇ ಪರಿಸ್ಥಿತಿ ನಿಭಾಯಿಸಲು ಅವಕಾಶವಿರುವ ಬಗ್ಗೆ ಸಭೆಯಲ್ಲಿ ಗಹನ ಚರ್ಚೆ ನಡೆಯಿತು.

ಒಂದೊಮ್ಮೆ ಡೆಡ್‌ಸ್ಟೋರೇಜ್‌ ಬಳಕೆ ಮಾಡುವುದಾದರೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚಿಸಲಾಗಿದೆ. ಇದರ ಜತೆಗೆ, ನೀರಿನ ಮಿತಬಳಕೆ ಬಗ್ಗೆ ಜಾಗೃತಿ ಮೂಡಿಸಿ ಬಳಕೆ ಪ್ರಮಾಣದ ತಗ್ಗಿಸಿದರೆ ಪರಿಸ್ಥಿತಿ ನಿಭಾಯಿಸಬಹುದು ಎಂಬ ಅಭಿಪ್ರಾಯ ಅಧಿಕಾರಿಗಳು ಬಂದಿದ್ದು  ಈ ಬಗ್ಗೆ ಜಲಮಂಡಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.  

ಸಭೆ ಬಳಿಕ ಮಾತನಾಡಿದ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ (ಹೆಚ್ಚುವರಿ ಪ್ರಭಾರ) ಬಿ.ಶಿವಶಂಕರ್‌, “ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ಸದ್ಯ 12.69 ಟಿಎಂಸಿ ನೀರಿದೆ. ಇದನ್ನೇ ಸಮರ್ಪಕವಾಗಿ ಬಳಸಿದರೆ ಮೇ ತಿಂಗಳ ಮಧ್ಯದವರೆಗೆ ಬೆಂಗಳೂರಿಗೆ ಅಗತ್ಯ ಪ್ರಮಾಣದ ನೀರು ಸಿಗಲಿದೆ. ಜತೆಗೆ ನೀರಿನ ಮಿತಬಳಕೆ ಬಗ್ಗೆ ಜಾಗೃತಿ ಮೂಡಿಸಲು ಜಲಮಂಡಳಿಗೂ ಸೂಚಿಸಲಾಗುವುದು,” ಎಂದು ಹೇಳಿದರು.

“ಸದ್ಯಕ್ಕೆ ಕೆಆರ್‌ಎಸ್‌ ಜಲಾಶಯದಲ್ಲಿನ ಡೆಡ್‌ ಸ್ಟೋರೇಜ್‌ ಬಳಕೆ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಇದಕ್ಕೆ ಸಂಬಂಧಪಟ್ಟಂತೆ ಅಗತ್ಯವಿರುವ ಕೆಲ ಮಾಹಿತಿ, ದಾಖಲೆ ಸಲ್ಲಿಸುವಂತೆ ಜಲಮಂಡಳಿ ಅಧಿಕಾರಿಗಳಿಗೆ ತಿಳಿಸಲಾಗಿದೆ. ತುರ್ತು ಪರಿಸ್ಥಿತಿ ನಿರ್ಮಾಣವಾದರೆ ಡೆಡ್‌ಸ್ಟೋರೇಜ್‌ ಬಳಕೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚೆ ನಡೆಸಲಾಗಿದೆ” ಎಂದು ಹೇಳಿದರು.

ನೀರಿಗೆ ಕೊರತೆಯಾಗದಂತೆ ಮಾಡಲು ಜಲಮಂಡಳಿ ಕಾರ್ಯಪ್ರವೃತ್ತ 
ರಾಜಧಾನಿ ಜನತೆಗೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ತಲೆದೋರದಂತೆ ಮಾಡಲು ಜಲಮಂಡಳಿ ಅಧ್ಯಕ್ಷ ತುಷಾರ್‌ ಗಿರಿನಾಥ್‌ ಅವರು ಇತ್ತೀಚೆಗೆ ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದಾರೆ. “ಏಪ್ರಿಲ್‌ ನಂತರ ಪರಿಸ್ಥಿತಿ ನಿರ್ವಹಣೆಗೆ ಕೈಗೊಳ್ಳ­ ಪರ್ಯಾಯ ವ್ಯವಸ್ಥೆಗೆ ಕ್ರಿಯಾ ಯೋಜನೆ ಸಿದ್ಧಪಡಿಸಿ,” ಎಂದು ಅಧಿಕಾರಿಗಳಿಗೆ ಸೂಷಸಿದ್ದಾರೆ.

“ನೀರಿನ ಮಿತ ಬಳಕೆ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಅಗತ್ಯವಿರುವಷ್ಟೇ ನೀರು ಬಳಸಬೇಕು, ಕೊಳವೆ ಬಾವಿ ಸಂಪರ್ಕವಿದ್ದರೆ ಅದನ್ನೇ ಬಳಸಿ ಕಾವೇರಿ ನೀರನ್ನು ಇತರರು ಬಳಸಲು ಸಹಕರಿಸಬೇಕು ಎಂದು ಜನರಲ್ಲಿ ಮನವಿ ಮಾಡಬೇಕು,” ಎಂದು ಅಧ್ಯಕ್ಷರು ಸೂಚನೆ ನೀಡಿದ್ದರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  

“ಗಣಿ ಮತ್ತು ಭೂವಿಜ್ಞಾನ ಇಲಾಖೆ ವಿಜ್ಞಾನಿಗಳ ಸಹಯೋಗದಲ್ಲಿ ಅಂತರ್ಜಲ ಮಟ್ಟ ಉತ್ತಮವಾಗಿರುವ ಸ್ಥಳಗಳನ್ನು ಗುರುತಿಸಿ ಆ ಪ್ರದೇಶಗಳಲ್ಲಿ ತ್ವರಿತವಾಗಿ ಕೊಳವೆಬಾವಿ ಕೊರೆದು ಟ್ಯಾಂಕರ್‌ ಮೂಲಕ ನೀರು ವಿತರಣೆಗೆ ಕ್ರಮ ಕೈಗೊಳ್ಳಬೇಕು. 2007ರಲ್ಲಿ ಪಾಲಿಕೆಗೆ ಸೇರ್ಪಡೆ­ಯಾದ ಪ್ರದೇಶಗಳಲ್ಲಿದ್ದ  ಕಿರು ನೀರು ಯೋಜನೆಗಳನ್ನು ಪತ್ತೆ ಹಚ್ಚಿ ಸಾರ್ವಜನಿಕರ ಬಳಕೆಗೆ ಮೀಸಲಿಡಬೇಕು,” ಎಂದು ಅಧ್ಯಕ್ಷರು ಕಟ್ಟಪ್ಪಣೆ ಮಾಡಿದ್ದಾರೆ.  ಅದರಂತೆ ಕ್ರಿಯಾಯೋಜನೆ ಸಿದ್ಧಪಡಿಸಿ ಸಲ್ಲಿಸಿ ಅಂತಿಮಗೊಂಡ ನಂತರ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಕಾರ್ಯ ಶುರುವಾಗಲಿದೆ.

ಟಾಪ್ ನ್ಯೂಸ್

Tejasvi1

Goa: ದಿ ಐರನ್​ ಮ್ಯಾನ್​ ಸ್ಪರ್ಧೆಯಲ್ಲಿ ವಿಜೇತರಾದ ಮೊದಲ ಜನಪ್ರತಿನಿಧಿ ತೇಜಸ್ವಿ

Campco

Mangaluru: “ಕ್ಯಾಂಪ್ಕೊ’ದಿಂದ ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿಯ ಭೇಟಿ

Kemmannu

Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌

KMC-MNG

Mangaluru: ವಿಪತ್ತು ನಿರ್ವಹಣೆಗೆ ಸಮನ್ವಯ ಅಗತ್ಯ: ಡಿಐಜಿಪಿ ಅಮಿತ್‌ ಸಿಂಗ್‌

Exam

Coastal Karnataka: ಉಭಯ ಜಿಲ್ಲೆಯ 31 ಕೇಂದ್ರಗಳಲ್ಲಿ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ

Dharma-sabhe

Brahmin Mahasabha: ಗಾಯತ್ರಿ ಮಂತ್ರದ ಅನುಷ್ಠಾನದಲ್ಲಿ ಸಮಾಜ ಒಂದಾಗಲಿ: ಪೇಜಾವರ ಶ್ರೀ

1-seee

Challenge; ಪೆಟ್ರೋಲ್‌ ಪಂಪ್‌ಗೆ ಬೆಂಕಿ ಹಚ್ಚಿದ ವ್ಯಕ್ತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Bengaluru: ಹಲ್ಲೆ ನಡೆದರೆ ಪೌರ ಕಾರ್ಮಿಕರು ತಕ್ಷಣವೇ ದೂರು ನೀಡಿ: ಕಮಿಷನರ್‌

Arrested: ಪತಿಯ ಕೊಂದಿದ್ದ ಪತ್ನಿ, ಆಕೆಯ ಪ್ರಿಯಕರ ಸೇರಿ ಐವರ ಬಂಧನ

Arrested: ಪತಿಯ ಕೊಂದಿದ್ದ ಪತ್ನಿ, ಆಕೆಯ ಪ್ರಿಯಕರ ಸೇರಿ ಐವರ ಬಂಧನ

Arrested: ನಾಯಿಗಳು ಆಟೋ ಸೀಟ್‌ ಕಚ್ಚಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ: ಚಾಲಕ ಸೆರೆ

Arrested: ನಾಯಿಗಳು ಆಟೋ ಸೀಟ್‌ ಕಚ್ಚಿದ್ದಕ್ಕೆ ಮಹಿಳೆ ಮೇಲೆ ಹಲ್ಲೆ: ಚಾಲಕ ಸೆರೆ

‌Arrested: ವಿಧಾನಸೌಧ ಮೇಲೆ ಡ್ರೋನ್‌ ಹಾರಿಸಿದ ಯುವಕ ಸೆರೆ

‌Arrested: ವಿಧಾನಸೌಧ ಮೇಲೆ ಡ್ರೋನ್‌ ಹಾರಿಸಿದ ಯುವಕ ಸೆರೆ

16-bng

Bengaluru: ಕಟ್ಟಡ ಕುಸಿತಕ್ಕೆ ಗುತ್ತಿಗೆದಾರನೂ ಬಲಿ!

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Tejasvi1

Goa: ದಿ ಐರನ್​ ಮ್ಯಾನ್​ ಸ್ಪರ್ಧೆಯಲ್ಲಿ ವಿಜೇತರಾದ ಮೊದಲ ಜನಪ್ರತಿನಿಧಿ ತೇಜಸ್ವಿ

Campco

Mangaluru: “ಕ್ಯಾಂಪ್ಕೊ’ದಿಂದ ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿಯ ಭೇಟಿ

Kemmannu

Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್‌.ರಾಜೇಂದ್ರ ಕುಮಾರ್‌

KMC-MNG

Mangaluru: ವಿಪತ್ತು ನಿರ್ವಹಣೆಗೆ ಸಮನ್ವಯ ಅಗತ್ಯ: ಡಿಐಜಿಪಿ ಅಮಿತ್‌ ಸಿಂಗ್‌

Exam

Coastal Karnataka: ಉಭಯ ಜಿಲ್ಲೆಯ 31 ಕೇಂದ್ರಗಳಲ್ಲಿ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.