![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 19, 2017, 4:40 AM IST
ಬೆಂಗಳೂರು: ರಾಜ್ಯ ಸರಕಾರ ವೈದ್ಯಕೀಯ ಸೀಟ್ ಮ್ಯಾಟ್ರಿಕ್ಸ್ ಪ್ರಕಟಿಸದೇ ಇರುವುದರಿಂದ ವೈದ್ಯಕೀಯ ಹಾಗೂ ದಂತವೈದ್ಯಕೀಯ ಕೋರ್ಸ್ಗಳ ಮೊದಲ ಸುತ್ತಿನ ಸೀಟು ಹಂಚಿಕೆ ವಿಳಂಬವಾಗಲಿದೆ. ನೀಟ್ನಲ್ಲಿ ತೇರ್ಗಡೆಯಾಗಿ, ಕೆಇಎ ಮೂಲಕ ನೋಂದಣಿ ಮಾಡಿಕೊಂಡಿರುವ ವಿದ್ಯಾರ್ಥಿಗಳ ದಾಖಲೆ ಪರಿಶೀಲನೆ ಆರಂಭವಾಗಿದೆ. ಆದರೆ, ಈ ವರ್ಷ ಎಷ್ಟು ವೈದ್ಯಕೀಯ ಮತ್ತು ದಂತವೈದ್ಯಕೀಯ ಸೀಟುಗಳು ರಾಜ್ಯದಲ್ಲಿ ಲಭ್ಯವಿವೆ ಹಾಗೂ ಎಷ್ಟು ವಿದ್ಯಾರ್ಥಿಗಳಿಗೆ ಸೀಟು ಸಿಗಬಹುದು ಎಂಬಿತ್ಯಾದಿ ಅಂಶಗಳನ್ನು ಒಳಗೊಂಡಿರುವ ಸೀಟ್ ಮ್ಯಾಟ್ರಿಕ್ಸ್ ಅನ್ನು ರಾಜ್ಯ ಸರಕಾರ ಇನ್ನೂ ಕೆಇಎಗೆ ನೀಡಿಲ್ಲ. ಇದರಿಂದ ಬಹುತೇಕ ವಿದ್ಯಾರ್ಥಿಗಳಲ್ಲಿ ಹಾಗೂ ಹೆತ್ತವರಲ್ಲಿ ಗೊಂದಲ ಸೃಷ್ಟಿಯಾಗಿದೆ. ಎಷ್ಟು ಸೀಟುಗಳು ಲಭ್ಯವಿವೆ ಹಾಗೂ ಯಾವ ರ್ಯಾಂಕ್ಗೆ ಯಾವ ಕಾಲೇಜು ಲಭ್ಯವಾಗಬಹುದು ಎಂಬ ಯಾವ ಮಾಹಿತಿಯೂ ವಿದ್ಯಾರ್ಥಿಗಳಿಗೆ ಸಿಗುತ್ತಿಲ್ಲ. ಆಪ್ಶನ್ ಎಂಟ್ರಿ ಆರಂಭವಾದ ಅನಂತರವೇ ಕಾಲೇಜುಗಳ ಮಾಹಿತಿ ಲಭ್ಯವಾಗಲಿದೆ.
ನೀಟ್ ರ್ಯಾಂಕ್ ಆಧಾರದಲ್ಲಿ ಸೀಟು ಲಭ್ಯವಾಗದೇ ಇದ್ದರೆ, ಸಿಇಟಿ ರ್ಯಾಂಕ್ ಆಧಾರದಲ್ಲೇ ಎಂಜಿನಿಯರಿಂಗ್ ಅಥವಾ ಭಾರತೀಯ ವೈದ್ಯ ಪದ್ಧತಿಯ ಕೋರ್ಸ್ ಸೇರಬಹುದೆಂದು ಆಶಾಭಾವನೆ ಹೊಂದಿದ್ದ ವಿದ್ಯಾರ್ಥಿಗಳಿಗೂ ನಿರಾಸೆಯಾಗಿದೆ. ವೈದ್ಯಕೀಯ ಕೋರ್ಸ್ನ ಮೊದಲ ಹಂತದ ಸೀಟು ಹಂಚಿಕೆ ಅನಂತರ ಎಂಜಿನಿಯರಿಂಗ್ ಎರಡನೇ ಸುತ್ತಿನ ಸೀಟು ಹಂಚಿಕೆ ಮಾಡಬೇಕು ಎಂದು ಹಲವು ವಿದ್ಯಾರ್ಥಿಗಳು ಒತ್ತಾಯ ಮಾಡಿದ್ದರು. ಆದರೆ, ಕೆಇಎ ಇದಕ್ಕೆ ಅವಕಾಶ ನೀಡಿಲ್ಲ. ಎಂಜಿನಿಯರಿಂಗ್ 2ನೇ ಸುತ್ತಿನ ಸೀಟು ಹಂಚಿಕೆ ಮುಗಿದೆ. ಎಂಜಿನಿಯರಿಂಗ್ ಮೊದಲ ಸುತ್ತಿನ ಸೀಟು ಹಂಚಿಕೆಯಲ್ಲಿ ಸೀಟು ಪಡೆದ ವಿದ್ಯಾರ್ಥಿಗಳಲ್ಲಿ ಕೆಲವರು ವೈದ್ಯಕೀಯ ಕೋರ್ಸ್ಗೆ ನೀಟ್ ಅಡಿಯಲ್ಲಿ ಸೀಟು ಪಡೆದು, ಎಂಜಿನಿಯರಿಂಗ್ ಸೀಟನ್ನು ಕೆಇಎಗೆ ಒಪ್ಪಿಸುವ ಸಾಧ್ಯತೆ ಇದೆ. ಉಳಿಕೆಯಾಗಿರುವ ಎಲ್ಲ ಸೀಟುಗಳನ್ನು ಎಂಜಿನಿಯರಿಂಗ್ 2ನೇ ಮುಂದುವರಿದ ಸುತ್ತಿನಲ್ಲಿ ಹಂಚಿಕೆ ಮಾಡುವುದಕ್ಕೆ ಪ್ರಾಧಿಕಾರ ನಿರ್ಧರಿಸಿದೆ.
ಈ ಮಧ್ಯೆ, ವಿದ್ಯಾರ್ಥಿಗಳಿಗೆ ಸಂಕಟ ಎದುರಾಗಿದೆ. ಎರಡನೇ ಸುತ್ತಿನಲ್ಲಿ ಎಂಜಿನಿಯರಿಂಗ್ ಸೀಟು ಹಂಚಿಕೆಯಾಗಿರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕಾಲೇಜಿಗೆ ಹಾಜರಾಗಬೇಕು. ಇಲ್ಲವಾದರೆ ಸೀಟು ರದ್ದಾಗಲಿದೆ ಎಂಬ ಸಂದೇಶ ಪ್ರಾಧಿಕಾರ ನೀಡಿದೆ. ಹಾಗೆಯೇ ನೀಟ್ ಅಡಿಯಲ್ಲಿ ಸೀಟು ಲಭ್ಯವಾಗುವುದಿಲ್ಲ ಎಂಬ ಸಂದೇಶವನ್ನು ಕೆಲವು ವಿದ್ಯಾರ್ಥಿಗಳಿಗೆ ಕಳುಹಿಸಲಾಗಿದೆ ಎಂದು ಪಾಲಕರು ಆರೋಪಿಸಿದ್ದಾರೆ.
ಶುಲ್ಕ ವಿವರ ಪ್ರಾಧಿಕಾರಕ್ಕೆ ಇನ್ನೂ ಬಂದಿಲ್ಲ
ಪ್ರಸಕ್ತ ಸಾಲಿನಿಂದಲೇ ವೈದ್ಯಕೀಯ ಶಿಕ್ಷಣದ ಪ್ರವೇಶ ಶುಲ್ಕ ಶೇ. 10ರಷ್ಟು ಏರಿಸಲು ಸರಕಾರ ನಿರ್ಧರಿಸಿದ್ದು, ಶುಲ್ಕದ ವಿವರವನ್ನು ಇನ್ನೂ ಪ್ರಾಧಿಕಾರಕ್ಕೆ ನೀಡಿಲ್ಲ. ಶೇ. 10ರಷ್ಟು ಹೆಚ್ಚಳದಿಂದ ಈ ವರ್ಷ ಸರಕಾರಿ ಕಾಲೇಜು ಪ್ರವೇಶ ಶುಲ್ಕ 77 ಸಾವಿರ ರೂ. ಹಾಗೂ ಖಾಸಗಿ ಸೀಟಿಗೆ 6.35 ಲಕ್ಷ ರೂ. ಶುಲ್ಕವಾಗಲಿದೆ. ಸರಕಾರಿ ವೈದ್ಯಕೀಯ ಕಾಲೇಜಿನ ಶುಲ್ಕದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. 16,000 ರೂ. ಶುಲ್ಕ ಇರಲಿದೆ. ಆದರೆ, ಈ ಬಗ್ಗೆ ಅಧಿಕೃತ ಆದೇಶ ಇನ್ನೂ ಪ್ರಾಧಿಕಾರಕ್ಕೆ ಸಿಕ್ಕಿಲ್ಲ. ಹಾಗೆಯೇ ಈ ಬಾರಿ ರಾಜ್ಯದಲ್ಲಿ ಆರು ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಸೀಟುಗಳನ್ನು 100ರಿಂದ 150ಕ್ಕೆ ಹಾಗೂ ಕಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ 150ರಿಂದ 200ಕ್ಕೆ ಏರಿಸಲಾಗಿದೆ. ಇದರಿಂದ ಹೆಚ್ಚುವರಿ 350 ಸರಕಾರಿ ಸೀಟುಗಳು ಲಭ್ಯವಾಗಿವೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.