ಸೇವೆ, ಸೌಕರ್ಯ ತಲುಪಿಸಲು ಡಿಜಿಟಲೀಕರಣದ ಮೊರೆ
Team Udayavani, Jan 12, 2018, 11:41 AM IST
ಬೆಂಗಳೂರು: ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳಡಿ ಪ್ರಸಕ್ತ ವರ್ಷದಲ್ಲಿ 1.60 ಲಕ್ಷ ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸುವ ಗುರಿ ಹೊಂದಲಾಗಿದ್ದು, ಸೇವೆಗಳನ್ನು ಪರಿಣಾಮಕಾರಿಯಾಗಿ ಒದಗಿಸಲು ಡಿಜಿಟಲೀಕರಣಕ್ಕೆ ಒತ್ತು ನೀಡಲಾಗಿದೆ ಎಂದು ನಿಗಮದ ಅಧ್ಯಕ್ಷ ಎಂ.ಎಸ್.ಬಸವರಾಜು ಹೇಳಿದರು.
ನಿಗಮ ಹೊರತಂದಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಅಪರೂಪದ ಛಾಯಾಚಿತ್ರಗಳಿರುವ ಕ್ಯಾಲೆಂಡರ್ಅನ್ನು ನಗರದಲ್ಲಿ ಗುರುವಾರ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ಜಾತಿ, ಪಂಗಡದವರ ಆರ್ಥಿಕ ಬಲವರ್ಧನೆಗೆ ನಾನಾ ಕಾರ್ಯಕ್ರಮಗಳನ್ನು ನಿಗಮದಿಂದ ಕೈಗೊಳ್ಳಲಾಗಿದೆ. ಜತೆಗೆ ಫಲಾನುಭವಿಗಳಿಗೆ ತ್ವರಿತವಾಗಿ ತಲುಪಿಸಲು ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.
ಪ್ರಸಕ್ತ ಆರ್ಥಿಕ ವರ್ಷದಲ್ಲಿ ಈವರೆಗೆ ಶೇ.50ರಷ್ಟು ಅನುದಾನ ಬಳಸಿ ಸೌಲಭ್ಯ ಕಲ್ಪಿಸಲಾಗಿದೆ. 3,500 ಫಲಾನುಭವಿಗಳಿಗೆ ಪ್ರವಾಸಿ ಕ್ಯಾಬ್ ವಿತರಿಸಲಾಗುತ್ತಿದ್ದು, ಈಗಾಗಲೇ ಎಂಟು ಜಿಲ್ಲೆÉಗಳಲ್ಲಿ 700 ಮಂದಿಗೆ ಸೌಲಭ್ಯ ಕಲ್ಪಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ.
70,000 ಕುಟುಂಬಗಳಿಗೆ 280 ಕೋಟಿ ರೂ. ನೇರ ಸಾಲ ಸೌಲಭ್ಯ ಕಲ್ಪಿಸಲಾಗುತ್ತಿದೆ. ಭೂಮಿರಹಿತರಿಗೆ ಸ್ಥಳೀಯವಾಗಿ ಲಭ್ಯವಿರುವ ಭೂಮಿ ಹಂಚಿಕೆ ಕಾರ್ಯಕ್ಕೆ ಜಿಲ್ಲಾಧಿಕಾರಿಗಳು ಒತ್ತು ನೀಡಿದ್ದಾರೆ. ಖುಷ್ಕಿ ಭೂಮಿ ಜತೆಗೆ ಲಭ್ಯವಿರುವ ಕಡೆ ತರಿ ಭೂಮಿಯನ್ನು ಹಂಚಿಕೆ ಮಾಡಲಾಗುತ್ತದೆ ಎಂದು ಹೇಳಿದರು.
ಕಳೆದ ನಾಲ್ಕೂವರೆ ವರ್ಷದಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ 30,000ಕ್ಕೂ ಹೆಚ್ಚು ಕೊಳವೆ ಬಾವಿ ಕೊರೆಸಲಾಗಿದೆ. 2013-14ನೇ ಸಾಲಿನಿಂದ ಬ್ಯಾಕ್ಲಾಗ್ ಉಳಿದಿದ್ದ ಕೊಳವೆ ಬಾವಿಗಳನ್ನು ಕೊರೆಸಲಾಗಿದೆ. ಫಲಾನುಭವಿಗಳು ಸೌಲಭ್ಯಕ್ಕಾಗಿ ಕಚೇರಿ ಅಲೆಯುವುದನ್ನು ತಪ್ಪಿಸಲು ಡಿಜಿಟಲ್ ತಂತ್ರಜ್ಞಾನ ಬಳಕೆಗೆ ಒತ್ತು ನೀಡಲಾಗಿದೆ ಎಂದು ಹೇಳಿದರು.
ಅನುದಾನ ಹೆಚ್ಚಳ: 2012-13ನೇ ಸಾಲಿನಲ್ಲಿ ನಿಗಮಕ್ಕೆ ವಾರ್ಷಿಕ 100ರಿಂದ 150 ಕೋಟಿ ರೂ. ಅನುದಾನವಿತ್ತು. ಎಸ್ಸಿಪಿಟಿಎಸ್ಪಿ ಕಾಯ್ದೆ ಜಾರಿಯಾದ ಬಳಿಕ ಅನುದಾನ ಹೆಚ್ಚಾಗಿದ್ದು, 1,200 ಕೋಟಿ ರೂ.ವರೆಗೆ ಏರಿಕೆಯಾಗಿದೆ. ಇದರಿಂದ ಫಲಾನುಭವಿಗಳ ಸಂಖ್ಯೆಯೂ ಏರಿಕೆಯಾಗುತ್ತಿದ್ದು, ಆರ್ಥಿಕ ಬಲವರ್ಧನೆಗೆ ಸಹಕಾರಿಯಾಗಿದೆ ಎಂದು ತಿಳಿಸಿದರು.
ನಿಗಮದ ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸುಲು, ಪರಿಶಿಷ್ಟ ಜಾತಿ, ಪಂಗಡದ ಆರ್ಥಿಕವಾಗಿ ಹಿಂದುಳಿದವರ ಬಲವರ್ಧನೆಗೆ ಒತ್ತು ನೀಡಲಾಗಿದೆ. ಭೂಒಡೆತನ ಯೋಜನೆಯಲ್ಲಿ ಶೇ.54ರಷ್ಟು ಪ್ರಗತಿ ಸಾಧಿಸಲಾಗಿದೆ. ಭೂಒಡೆತನ ಯೋಜನೆಯಡಿ 2016-17ರಲ್ಲಿ 1040 ಫಲಾನುಭವಿಗಳು ಸೌಲಭ್ಯ ಪಡೆದಿದ್ದರೆ ಪ್ರಸಕ್ತ ವರ್ಷದಲ್ಲಿ ಈವರೆಗೆ 1,200 ಮಂದಿ ಸೌಲಭ್ಯ ಪಡೆದಿದ್ದಾರೆ.
ಹಾಗೆಯೇ 2016-17ರಲ್ಲಿ ಸ್ವಯಂ ಉದ್ಯೋಗ ಯೋಜನೆಯಡಿ 10,595 ಮಂದಿ ಹಾಗೂ ಪ್ರಸಕ್ತ ಹಣಕಾಸು ವರ್ಷದಲ್ಲಿ ಈವರೆಗೆ 5944 ಮಂದಿ ಪ್ರಯೋಜನ ಪಡೆದಿದ್ದಾರೆ. ಪ್ರಸಕ್ತ ವರ್ಷದಲ್ಲಿ 16,189 ಮಂದಿಗೆ ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.
ದೇಶದಲ್ಲೇ ಪ್ರಥಮ ಬಾರಿಗೆ ಕಲ್ಯಾಣ ಆ್ಯಪ್ ಅಭಿವೃದ್ಧಿಪಡಿಸಲಾಗಿದ್ದು, ಇದರಲ್ಲಿ ಸಮಾಜ ಕಲ್ಯಾಣ ಇಲಾಖೆ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕೆಆರ್ಐಇಎಸ್, ಲಿಡ್ಕರ್, ಪಿಇಟಿಸಿ, ಕೆಎಂವಿಎಸ್ಟಿಡಿಸಿ ಸೇರಿದಂತೆ ಇನ್ನಿತರ ಯೋಜನೆಗಳ ಸಮಗ್ರ ಮಾಹಿತಿ ಒಂದೇ ಆ್ಯಪ್ನಲ್ಲಿ ಸಿಗಲಿದೆ.
ಜತೆಗೆ ಕೆಲವೊಂದು ಮೂಲ ಮಾಹಿತಿ ದಾಖಲಿಸಿದರೆ ಅವರಿಗೆ ನಿರ್ದಿಷ್ಟವಾಗಿ ಅನ್ವಯಿಸುವ ಸೌಲಭ್ಯಗಳ ವಿವರವೂ ಸಿಗಲಿದೆ. ಒಟ್ಟಾರೆ ಡಿಜಿಟಲ್ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿ ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸಲು ಒತ್ತು ನೀಡಲಾಗುತ್ತಿದೆ ಎಂದು ಹೆಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bengaluru: ಬಿಡಿಎಗೆ ವಂಚನೆ: 19 ಮಂದಿ ವಿರುದ್ಧ ಕೇಸ್
Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು
Kanahosahalli: ಹೋಬಳಿಯಾದ್ಯಂತ ಭಾರಿ ಮಳೆ; ಹಳ್ಳದಲ್ಲಿ ಕೊಚ್ಚಿಹೋದ ಮಿನಿ ಲಾರಿ
Bhairadevi Review; ಅಘೋರಿ ಹಿಂದೆ ಘೋರ ಕಥನ
Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.