Mangoes: ಹೊರ ರಾಜ್ಯಗಳ ಮಾವಿನ ಹಣ್ಣಿನ ದರ್ಬಾರ್‌!


Team Udayavani, May 14, 2024, 10:21 AM IST

Mangoes: ಹೊರ ರಾಜ್ಯಗಳ ಮಾವಿನ ಹಣ್ಣಿನ ದರ್ಬಾರ್‌!

ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಹಣ್ಣಿನ ರಾಜ ಮಾವು ಲಗ್ಗೆಯಿಟ್ಟಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ವ್ಯಾಪಾರ ಜೋರಾಗಿದೆ. ಹೊರ ರಾಜ್ಯದ ಶೇ.70 ಮಾವು ಸಿಲಿಕಾನ್‌ ಸಿಟಿಯ ಮಾರುಕಟ್ಟೆಯನ್ನು ತಲುಪಿದೆ. ನಗರದ ವಿವಿಧ ಮಾರುಕಟ್ಟೆಗಳಿಗೆ ಲಗ್ಗೆಯಿಟ್ಟಿರುವ ವಿವಿಧ ತಳಿಯ ಮಾವಿನ ಹಣ್ಣುಗಳು ಗ್ರಾಹಕರನ್ನು ಸೆಳೆಯುತ್ತಿವೆ.

ಏಪ್ರಿಲ್‌ 2ನೇ ವಾರದಲ್ಲಿ ಆಗಮಿಸ ಬೇಕಾದ ಮಾವು 15 ದಿನ ತಡವಾಗಿ ಮರುಕಟ್ಟೆಯನ್ನು ಪ್ರವೇಶಿಸಿದೆ. ದುಬಾರಿಯಾದರೂ ಪರವಾಗಿಲ್ಲ ಮಾವಿನ ಹಣ್ಣನ್ನು ಸವಿಬೇಕು ಎನ್ನುವ ಕಾತುರದಲ್ಲಿ ಜನರಿದ್ದಾರೆ.

ಹೊರರಾಜ್ಯ ದರ್ಬಾರ್‌: ಪ್ರಸಕ್ತವಾಗಿ ರಾಜ್ಯದಲ್ಲಿ ಮಾವಿನ ಆಫ್ ಸೀಜನ್‌ ಇದೆ. ಜತೆಗೆ ಉಷ್ಣಾಂಶದಲ್ಲಿನ ವ್ಯತ್ಯಾಸದಿಂದ ಮಾವು ಇಳುವರಿಯಲ್ಲಿ ಶೇ.50 ಕುಂಠಿತ ವಾಗಿದೆ. ಇನ್ನೂ ಕೆಲವಡೆ ಮಾವು ತಡವಾಗಿ ಕಾಯಿ ಕಚ್ಚಿರುವುದರಿಂದ ಮಾರುಕಟ್ಟೆಗೆ ಬರಲು ಇನ್ನೆರಡು ವಾರಗಳು ಬೇಕು. ಇದೀಗ ತಮಿಳುನಾಡು, ಕೇರಳ, ಆಂಧ್ರಪ್ರದೇಶ ಸೇರಿದಂತೆ ಇತರೆಡೆಗಳಿಂದ ಬಂದಿರುವ ಮಾವು ಮಾರುಕಟ್ಟೆಯಲ್ಲಿ ಲಭ್ಯವಿದೆ. ಮುಂದಿನ ಎರಡು ವಾರದಲ್ಲಿ ಕರ್ನಾಟಕದ ಮಾವು ಪೂರ್ಣ ಪ್ರಮಾಣದಲ್ಲಿ ಮಾರುಕಟ್ಟೆ ಪ್ರವೇಶಿಸಲಿದೆ.

ಕಡಿಮೆ ಸಿಹಿ-ಕಡು ಬಣ್ಣ: ಮಾರುಕಟ್ಟೆಯಲ್ಲಿ ಪ್ರಸ್ತುತ ಲಭ್ಯವಿರುವ ಶೇ.70 ಮಾವಿನ ಹಣ್ಣಿನಲ್ಲಿ ಸಿಹಿ ಪ್ರಮಾಣ ಕಡಿಮೆಯಿದೆ. ಆದರೆ, ಬಣ್ಣ ಹಾಗೂ ಪರಿಮಳ ಮಾತ್ರ ಗಾಢವಾಗಿದೆ. ಮಳೆಯ ಮುನ್ಸೂಚನೆ ಹಾಗೂ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಸಿಗುತ್ತದೆ ಎನ್ನುವ ನಿಟ್ಟಿನಲ್ಲಿ ಎಳೆಯ ಕಾಯಿ ಕಟಾವು ಮಾಡಿ, ರಾಸಾಯನಿಕ ಬಳಸಿ ಹಣ್ಣು ಮಾಡಲಾಗುತ್ತದೆ. ಇದರಿಂದಾಗಿ ಮಾವಿನ ಹಣ್ಣಿನಲ್ಲಿ ಸಿಹಿ ಅಂಶ ಕಡಿಮೆಯಾಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಯಾವೆಲ್ಲಾ ಹಣ್ಣುಗಳು ಬಂದಿವೆ?: ಪ್ರಸ್ತುತ ಸಿಂಧೂರಿ, ರಸಪೂರಿ, ಬಾದಾಮಿ, ಮಲ್ಗೊàವಾ, ತೋತಾಪುರಿ, ರಸಪುರಿ, ಮಲ್ಲಿಕಾ, ಆಪೂಸ್‌, ನೀಲಂ, ಆಮ್ರಪಾಲಿ, ಕೇಸರ್‌, ರಸ್‌ಪೂರಿ ಸೇರಿದಂತೆ ವಿವಿಧ ತಳಿಯ ಮಾವು ಪ್ರಸ್ತುತ ಮಾರುಕಟ್ಟೆಯಲ್ಲಿ ಲಭ್ಯವಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಹೊರ ರಾಜ್ಯದಿಂದ ಬಂದಿರುವ ಮಾವಿನ ಪ್ರಮಾಣ ಶೇ.30ರಷ್ಟು ಕಡಿಮೆ ಇದೆ.

ಬೇಡಿಕೆ- ಬೆಲೆ ಏರಿಕೆ!: ಪ್ರಸ್ತುತ ಮಾರುಕಟ್ಟೆಯಲ್ಲಿ ಮಾವಿನ ಬೇಡಿಕೆ ಹೆಚ್ಚಿದೆ. ಬೇಡಿಕೆಗೆ ತಕ್ಕಂತೆ ಮಾವು ಪೂರೈಕೆಯಾಗದ ಹಿನ್ನೆಲೆಯಲ್ಲಿ ಬೆಲೆಯಲ್ಲಿ ಏರಿಕೆಯಾಗಿದೆ. ಕಳೆದ ವರ್ಷ ಒಂದು ಟನ್‌ ಬಾದಾಮಿಗೆ 20 ಸಾವಿರ ರೂ. ಇತ್ತು. ಆದರೆ ಈ ಬಾರಿ 40 ರಿಂದ 45 ಸಾವಿರ ರೂ.ಗೆ ಏರಿಕೆಯಾಗಿದೆ. ಇದೀಗ ಮಾರುಕಟ್ಟೆಯಲ್ಲಿ ರಸಪುರಿ 150 ರೂ., ಬಾದಾಮಿ 200 ರೂ., ಮಲ್ಲಿಕಾ 250 ರೂ., ಅಲ್ಫಾ 180 ರೂ., ಬಾಗೈನ್ಪಲ್ಲಿ 150 ರೂ., ಅಲ್ಫಾನ್ಸೋ 300 ರೂ., ಮಾಲ್ಗೊàಬಾ 350 ರೂ., ತೋಪಾಪುರಿ 100 ರೂ. ಹಾಗೂ ಇತರೆ ಮಾವಿನ ಹಣ್ಣು ಒಂದು ಕೆ.ಜಿ.ಗೆ ಕನಿಷ್ಠ 100ರಿಂದ 500 ರೂ. ವರೆಗೆ ದರ ನಿಗದಿಯಾಗಿದೆ.

ಮಾವಿನ ಹಣ್ಣಿನಿಂದ ಮಾಡುವ ಐಸ್ಕ್ರೀಂ, ಜ್ಯೂಸ್‌, ತಿಂಡಿ- ತಿನಿಸು, ಮಾವಿನ ಹಣ್ಣಿನ ಗೊಜ್ಜು, ಹುಳಿ ಸಾರು ಸೇರಿದಂತೆ ವಿವಿಧ ಖಾದ್ಯಗಳು ನಗರದ ಹೋಟೆಲ್‌ ಹಾಗೂ ಅಂಗಡಿಗಳಲ್ಲಿ ಸಿದ್ಧವಾಗುತ್ತಿದೆ. ಇದರ ರುಚಿ ಸವಿಯಲು ಗ್ರಾಹಕರು ಮುಂದಾಗುತ್ತಿದ್ದಾರೆ.

ಮಾರುಕಟ್ಟೆಗೆ ಹೊರ ರಾಜ್ಯದಿಂದ ಹಣ್ಣುಗಳು ಬಂದಿವೆ. ಕರ್ನಾಟಕದಿಂದ ಪೂರ್ಣ ಪ್ರಮಾಣ ಮಾವು ಬೆಂಗಳೂರು ಮಾರುಕಟ್ಟೆಯನ್ನು ಪ್ರವೇಶ ಮಾಡಿಲ್ಲ. ಮಾವಿನ ಬೇಡಿಕೆ ಹೆಚ್ಚಿದ್ದು, ಪೂರೈಕೆ ಕೊರತೆಯಿದೆ. -ಷಣ್ಮಖ, ತಮಿಳುನಾಡು ಮಾವಿನ ವ್ಯಾಪಾರಿ.

ಮಾವು ಬೆಲೆ ದುಬಾರಿಯಾಗಿದೆ. ಮಲ್ಲಿಕಾ ಒಂದು ಕೆ.ಜಿ. 200ರಿಂದ 250 ರೂ. ದರದಲ್ಲಿ ಮಾರಾಟವಾಗುತ್ತಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಮಲ್ಲಿಕಾ ಬೆಲೆ 150 ರೂ. ಆಸುಪಾಸಿನಲ್ಲಿತ್ತು. -ಪೂಜಾ ಶೇಖರ್‌, ಬೆಂಗಳೂರ

ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ

Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್‌; ಯುವಕನ ವಿರುದ್ಧ ಎಫ್ಐಆರ್‌

Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್‌; ಯುವಕನ ವಿರುದ್ಧ ಎಫ್ಐಆರ್‌

BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ

BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ

Missing Case: ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ

Missing Case: ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

12

Chowkidar Movie: ಚೌಕಿದಾರ್‌ಗೆ ಮುಹೂರ್ತ ಇಟ್ರಾ!

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.