ತೃತೀಯ ಹಂತದ ಸಂಸ್ಕರಿಸಿದ ನೀರಿಗೆ ಬೇಡಿಕೆ


Team Udayavani, Sep 19, 2019, 3:07 AM IST

sanska

ಬೆಂಗಳೂರು: ಜಲಮಂಡಳಿ ಪೂರೈಸುತ್ತಿರುವ ತೃತೀಯ ಹಂತದ ಸಂಸ್ಕರಿಸಿದ ನೀರಿಗೆ ಸಾರ್ವಜನಿಕರಿಂದ ಬೇಡಿಕೆ ಆರಂಭವಾಗಿದೆ. ಹೀಗಾಗಿ ಜಲಮಂಡಳಿ ಅಧಿಕಾರಿಗಳು, ನಗರದ ಪ್ರಮುಖ ರಿಯಲ್‌ ಎಸ್ಟೇಟ್‌ ಕಂಪನಿಗಳ ಜತೆ ಮಾತುಕತೆಗೆ ಮುಂದಾಗಿದ್ದಾರೆ.

ಸದ್ಯ ಜಲಮಂಡಳಿಗೆ ಸಂಸ್ಕರಿಸಿದ ನೀರು ಪೂರೈಸುವಂತೆ ಸಾರ್ವಜನಿಕರಿಂದ ಹತ್ತಾರು ಕರೆಗಳು ಬರುತ್ತಿವೆ. ಈಗಾಗಲೇ ವೃಷಭಾವತಿ ಕಾಲುವೆಯ ತ್ಯಾಜ್ಯ ನೀರು ಸಂಸ್ಕರಣ ಘಟಕದಿಂದ ನಿತ್ಯ 4 ಸಾರು ನೀರು ಪೂರೈಸಲಾಗುತ್ತಿದೆ. ಜತೆಗೆ ಪೀಣ್ಯ, ಹೊಸಕೋಟೆ, ನೆಲಮಂಗಲ, ಬ್ಯಾಟರಾಯನಪುರ, ನಾಯಂಡಹಳ್ಳಿ, ವಿದ್ಯಾರಣ್ಯಪುರ ಭಾಗದಿಂದ ಸಂಸ್ಕರಿಸಿದ ನೀರಿಗೆ ಬೇಡಿಕೆ ಬರುತ್ತಿದೆ.

ನಗರದ ಕೆಲ ಕಂಪನಿಗಳು ಸ್ವಯಂ ನಿರ್ಧಾರದಿಂದ ಸಂಸ್ಕರಿಸಿದ ತ್ಯಾಜ್ಯ ನೀರು ಬಳಕೆಗೆ ಮುಂದೆ ಬಂದಿದ್ದು, ಪ್ರಮುಖವಾಗಿ ನಾಯಂಡಹಳ್ಳಿ ಬಳಿಯ ಕೆಬಿಆರ್‌ ಕನ್‌ಸ್ಟ್ರಕ್ಟರ್‌ ಕಂಪನಿ, ನಾಗಸಂದ್ರದ ಐಕ್ಯ ಇಂಟರ್‌ನ್ಯಾಷನಲ್‌ ಫ‌ರ್ನಿಚರ್‌ ಕಂಪನಿಯು (ನಿತ್ಯ 20 ಸಾವಿರ ಲೀ), ಹೊಸಕೋಟೆಯ ರಸ್ತೆ ಕಾಮಗಾರಿ ಕಂಪನಿ, ವಿಮಾನ ನಿಲ್ದಾಣ ರಸ್ತೆಯ ಟಾಟಾ ಕನ್‌ಸ್ಟ್ರಕ್ಟರ್‌ ಕಂಪನಿಗಳು ಮುಂದೆ ಬಂದಿವೆ. ಕೆಲವು ಕಂಪನಿಗಳಿಗೆ ಪೂರೈಸಲಾಗುತ್ತಿದೆ ಎಂದು ಜಲಮಂಡಳಿ ಸಂಸ್ಕರಿಸಿದ ತ್ಯಾಜ್ಯ ನೀರು ಮಾರಾಟ ಅಧಿಕಾರಿ ರುದ್ರೇಗೌಡ ತಿಳಿಸಿದರು.

ಕಂಪನಿಗಳ ಸಭೆ: ಜಲಮಂಡಳಿಯು ನಗರದ ದೊಡ್ಡ ರಿಯಲ್‌ ಎಸ್ಟೇಟ್‌ ಕಂಪನಿಗಳನ್ನು ಸಂಸ್ಕರಿಸಿದ ತ್ಯಾಜ್ಯನೀರು ಕಟ್ಟಡ ಕಾಮಗಾರಿಗೆ ಬಳಸುವ ಸಂಬಂಧ ಮಾತುಕತೆ ನಡೆಸುತ್ತಿದೆ. ಜತೆಗೆ ತಿಂಗಳಾಂತ್ಯಕ್ಕೆ ಕಂಪನಿಗಳ ಮುಖ್ಯಸ್ಥರೊಡನೆ ಸಭೆ ನಡೆಸಲು ಸಜ್ಜಾಗಿದೆ. ಸಂಸ್ಕರಿಸಿದ ತ್ಯಾಜ್ಯ ನೀರಿನ ಬಳಕೆ ಬಗ್ಗೆ ಮನವರಿಕೆ ಮಾಡಿ, ರಿಯಲ್‌ ಎಸ್ಟೇಟ್‌ ಸಂಸ್ಥೆಗಳಿಂದ ನಿರ್ಮಿಸುವ ಕಟ್ಟಡ, ಅಪಾರ್ಟ್‌ಮೆಂಟ್‌, ವಿಲ್ಲಾ ಸೇರಿದಂತೆ ಎಲ್ಲಾ ಕಾಮಗಾರಿಗಳಿಗೆ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಬಳಸಲು ಸಭೆಯಲ್ಲಿ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗುತ್ತದೆ.

ನಂತರ ಕಾಂಕ್ರೀಟ್‌ ರೆಡಿಮಿಕ್ಸರ್‌ ಗುತ್ತಿಗೆದಾರರ ಸಭೆ ಕರೆಯಲು ನಿರ್ಧರಿಸಲಾಗಿದೆ. ಈ 2 ಸಭೆಗಳಲ್ಲಿ ಸಂಸ್ಕರಿಸಿದ ನೀರು ಕೊಂಡುಕೊಳ್ಳುವ ಕುರಿತು ಒಪ್ಪಂದಗಳಾದರೆ ಸಂಸ್ಕರಿಸುತ್ತಿರುವ ತ್ಯಾಜ್ಯ ನೀರಲ್ಲಿ ಬಹುಪಾಲು ಮಾರಾಟವಾಗಲಿದೆ ಎನ್ನುತ್ತಾರೆ ಜಲಮಂಡಳಿ ಅಧಿಕಾರಿಗಳು.

ನಿರ್ವಹಣೆ ವಿಭಾಗದ ಎಂಜಿನಿಯರ್‌ಗಳ ಸಭೆ: ಜಲಮಂಡಳಿಯು ಸಂಸ್ಕರಿಸಿದ ತ್ಯಾಜ್ಯನೀರಿನ ಬಳಕೆ ಹಾಗೂ ಮಾರಾಟ ಪ್ರೋತ್ಸಾಹಿಸಲು ಅಗತ್ಯ ಕ್ರಮಕೈಗೊಳ್ಳುವ ಕುರಿತು ಉಪವಿಭಾಗಗಳ ನಿರ್ವಹಣೆ ವಿಭಾಗದ ಎಂಜಿನಿಯರ್‌ಗಳ ಸಭೆ ನಡೆಸುತ್ತಿದೆ. ಸದ್ಯ 4 ವಿಭಾಗಗಳ ಕಡೆಗಳಲ್ಲಿ ಸಭೆ ನಡೆಸಿ, ಅಲ್ಲಿನ ಎಂಜಿನಿಯರ್‌ಗಳಿಗೆ ತಮ್ಮ ವ್ಯಾಪ್ತಿಯಲ್ಲಿ ಅಗತ್ಯ ಕ್ರಮಕ್ಕೆ ಮುಂದಾಗುವಂತೆ ತಿಳಿಸಿದೆ.

ಈಗಾಗಲೇ ಜಲಮಂಡಳಿ, ನಗರದಲ್ಲಿ ಕಟ್ಟಡ ನಿರ್ಮಾಣಕ್ಕೆ ಕೊಳವೆಬಾವಿ ನೀರು ಬಳಸಲು ಕಡಿವಾಣ ಹಾಕಿದೆ. ಕೊಳವೆಬಾವಿ ಕೊರೆಯಲು ಅನುಮತಿ ನೀಡುವಾಗಲೇ ಕಟ್ಟಡ ನಿರ್ಮಾಣ ಉದ್ದೇಶಕ್ಕೊ ಅಥವಾ ಕುಡಿಯುವ ನೀರಿಗಾಗಿಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಎಂಜಿನಿಯರ್‌ಗಳಿಗೆ ಸೂಚಿಸಿದೆ.

ಬಿಬಿಎಂಪಿ ಜತೆ ಮಾತುಕತೆ: ಈ ಮಧ್ಯೆ, ಸಂಸ್ಕರಿಸಿದ ನೀರು ಬಳಕೆ ಕುರಿತು ಬಿಬಿಎಂಪಿ ಅಧಿಕಾರಿಗಳ ಜತೆ ಮಾತುಕತೆ ನಡೆಸಲಾಗುತ್ತಿದೆ. ಬಿಬಿಎಂಪಿ ಜತೆಗೂ ಒಪ್ಪಂದ ಮಾಡಿಕೊಳ್ಳುವ ಮೂಲಕ ಮುಂದಿನ ದಿನಗಳಲ್ಲಿ ಎಲ್ಲಾ ಕಾಮಗಾರಿ, ಶೌಚಾಲಯ ಹಾಗೂ ಉದ್ಯಾನ ನಿರ್ವಹಣೆಗಳಿಗೆ ಸಂಸ್ಕರಿಸಿದ ನೀರು ಪೂರೈಕೆ ಮಾಡಲಾಗುವುದು ಎಂದು ಜಲಮಂಡಳಿ ಅಧಿಕಾರಿಗಳು ತಿಳಿಸಿದರು.

ಜಲಮಂಡಳಿಯು ತೃತೀಯ ಹಂತದ ಸಂಸ್ಕರಿಸಿದ ನೀರಿನ ಮಾರಟಕ್ಕೆ ಸಂಪೂರ್ಣ ಸಿದ್ಧವಿದೆ. ನಿರ್ಮಾಣ ವಲಯದಲ್ಲೂ ಸಂಸ್ಕರಿಸಿದ ನೀರು ಬಳಕೆಗೆ ಆಸಕ್ತಿ ಇದ್ದು, ಸಾಕಷ್ಟು ಕರೆಗಳು ಬರುತ್ತಿವೆ. ರಿಯಲ್‌ ಎಸ್ಟೇಟ್‌ ಕಂಪನಿಗಳ ಸಭೆ ನಡೆಸಲು ಜಲಮಂಡಳಿ ಅಧ್ಯಕ್ಷರು ನಿರ್ಧರಿಸಿದ್ದು, 40ಕ್ಕೂ ಹೆಚ್ಚು ಉದ್ಯಮಿಗಳು ಭಾಗವಹಿಸುವ ನಿರೀಕ್ಷೆ ಇದೆ.
-ರುದ್ರೇಗೌಡ, ಸಂಸ್ಕರಿಸಿದ ನೀರು ಮಾರಾಟ ಅಧಿಕಾರಿ, ಜಲಮಂಡಳಿ

* ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.