ಬಿಬಿಎಂಪಿ ವ್ಯಾಪ್ತಿ ಶೇ.10 ಡೆಂಘೀ ಹೆಚ್ಚಳ


Team Udayavani, Jul 31, 2023, 2:43 PM IST

ಬಿಬಿಎಂಪಿ ವ್ಯಾಪ್ತಿ ಶೇ.10 ಡೆಂಘೀ ಹೆಚ್ಚಳ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಡೆಂಘೀಪ್ರಕರಣಗಳ ಸಂಖ್ಯೆ ದಿನೇ ದಿನೆ ಹೆಚ್ಚಳ ವಾಗುತ್ತಿದ್ದು ಜನರಲ್ಲಿ ಆತಂಕ ಹೆಚ್ಚಿಸಿದೆ. ಅದರಲ್ಲೂ ಬಿಬಿಎಂಪಿ ವ್ಯಾಪ್ತಿಯ ಪೂರ್ವ ಮತ್ತು ದಕ್ಷಿಣ ವಲಯದಲ್ಲಿ ಡೆಂಗ್ಯು ಪ್ರಕರಣ ಅಧಿಕವಾಗಿದ್ದು ಈ ಬಗ್ಗೆ ಪಾಲಿಕೆ ಮುಂಜಾಗೃತೆ ವಹಿಸಿದೆ.

ಮುಂಗಾರು ಮಳೆ ಆರಂಭವಾದ ನಂತರ ರಾಜಧಾನಿಯಲ್ಲಿ ಡೆಂಘೀ ಪ್ರಕರಣಗಳ ಹೆಚ್ಚಿವೆ. ಪೂರ್ವ ವಲಯ ವ್ಯಾಪ್ತಿಯಲ್ಲಿ ಪ್ರತಿ ದಿನ 15-20 ಪ್ರಕರಣಗಳು ಕಂಡಬರುತ್ತಿವೆ. ದಕ್ಷಿಣ ವಲಯದಲ್ಲೂ ಪ್ರಕರಣಗಳ ಸಂಖ್ಯೆ ಹೆಚ್ಚಿದೆ ಎಂದು ಬಿಬಿಎಂಪಿ ಆರೋಗ್ಯ ವಿಭಾಗದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಪಾಲಿಕೆ ವ್ಯಾಪ್ತಿಯಲ್ಲಿ 200 ಪ್ರಕರಣಗಳ ದಾಖಲಾಗಿದೆ. ಆ ಹಿನ್ನೆಲೆಯಲ್ಲಿ ಪಾಲಿಕೆ ಆರೋಗ್ಯ ವಿಭಾಗದ ಅಧಿಕಾರಿಗಳು ನಗರದ ಎಲ್ಲ ಆಸ್ಪತ್ರೆಗಳಲ್ಲಿ ಪ್ರಕರಣ ಅಂಕಿ-ಅಂಶಗಳನ್ನು ಕಲೆಹಾಕುತ್ತಿದ್ದಾರೆ. ಜನರಿಗೂ ಡೆಂಘೀ ಜಾಗೃತಿಗೆ ಮುಂದಾಗಿದ್ದಾರೆ. ಡೆಂ à ಪ್ರಕರಣ ಶೇ.10 ಏರಿಕೆ: ಬಿಬಿಎಂಪಿ ವ್ಯಾಪ್ತಿಯಲ್ಲಿ ಜೂನ್‌ ತಿಂಗಳಲ್ಲಿ ಸುಮಾರು 600 ಪ್ರಕರಣಗಳು ಕಂಡು ಬಂದಿತ್ತು. ಕಳೆದ ಜೂನ್‌ ತಿಂಗಳಿಗೆ ಮತ್ತು ಜುಲೈ ತಿಂಗಳಿಗೆ ಪ್ರಕರಣಗಳ ಸಂಖ್ಯೆ ಹೋಲಿಕೆ ಮಾಡಿದಾಗ ಶೇ.10 -15 ಏರಿಕೆಯಾಗಿದೆ. ಆದರೆ ನಗರವಾಸಿಗಳು ಆತಂಕಪಡುವ ಅಗತ್ಯವಿಲ್ಲ ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ) ಕೆ.ವಿ.ತ್ರಿಲೋಕ ಚಂದ್ರ ಹೇಳಿದ್ದಾರೆ.

ರಾಜ್ಯದಲ್ಲಿ ಕೆಲವು ದಿನಗಳಿಂದ ಮೋಡ ಕವಿದ ವಾತಾವರಣ, ಜಿಟಿಜಿಟಿ ಮಳೆ ಇರುವುದರಿಂದ ಸೊಳ್ಳೆಯ ಉತ್ಪತ್ತಿಗೆ ಅತ್ಯಂತ ಅನುಕೂಲವಾಗಿ ವಾತಾವರಣ ಸೃಷ್ಟಿಯಾಗಿದೆ. ನಗರದಲ್ಲಿ 50-60 ಪ್ರಕರಣ ದಾಖಲಾಗುತ್ತಿದೆ. ಕ್ಲಿನಿಕಲ್‌ ಮ್ಯಾನಿಟರ್‌ ರಿಂಗ್‌ ಮಾಡಲಾಗುತ್ತಿದೆ. ಡೆಂ à ಬಗ್ಗೆ ವಲಯವಾರು ಜಾಗೃತಿ ಮೂಡಿಸುವ ಕೆಲಸ ಕೂಡ ಪಾಲಿಕೆಯಿಂದ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಡೆಂಘೀಜ್ವರದ ಲಕ್ಷಣಗಳು:

 ಡೆಂಘೀ ಜ್ವರದ ಪ್ರಮುಖ ಲಕ್ಷಣ ಬಿಳಿ ರಕ್ತ ಕಣಗಳು ಕಡಿಮೆಯಾಗುವಿಕೆ

 ಎಲ್ಲಾ ಕೀಲುಗಳು, ಸ್ನಾಯುಗಳಲ್ಲಿ ಹೆಚ್ಚಾಗಿ ನೋವು ಕಾಣಿಸಿಕೊಳ್ಳುತ್ತದೆ

 ದೇಹದ ತಾಪಮಾನ ಹೆಚ್ಚಾಗುತ್ತದೆ. ಜತೆಗೆ ಮೈ-ಕೈ ನೋವು ಭಾದಿಸುತ್ತದೆ

 ತಲೆನೋವು, ಸುಸ್ತು, ಊಟ ಸೇರದಿರುವುದು, ತಲೆಭಾದೆ, ನಿಶ್ಯಕ್ತಿ ಉಂಟಾಗುತ್ತದೆ.

 ವಾಂತಿ, ಭೇದಿ ಕೂಡ ಆಗುತ್ತದೆ. ಹೊಟ್ಟೆ ನೋವು ಕಾಣಿಸಿಕೊಳ್ಳುತ್ತದೆ.

ಡೆಂಘೀ ತಡೆಗಟ್ಟಲು ಏನು ಮಾಡಬೇಕು:

 ಶುದ್ಧ ಹಾಗೂ ಕುದಿಸಿ ಆರಿಸಿದ ನೀರನ್ನು ಕುಡಿಯುವುದು ಉತ್ತಮ

 ನೀರು ಶೇಖರಣಾ ತೊಟ್ಟಿ, ಟ್ಯಾಂಕ್‌ಗಳ ಮುಚ್ಚಳವನ್ನು ಭದ್ರವಾಗಿ ಮುಚ್ಚಿಡಿ

 ಪಾತ್ರೆ ಹಾಗೂ ಬಿಂದಿಗೆಗಳಲ್ಲಿ ಹೆಚ್ಚು ದಿನ ನೀರು ಸಂಗ್ರಹಿಸಿಡಬೇಡಿ

 ಮನೆಯ ಸುತ್ತಲು ಹಾಗೂ ತಾರಸಿಯ ಮೇಲೆ ನೀರು ನಿಲ್ಲದಂತೆ ನಿಗಾ ಇಡಿ

 ತೆಂಗಿನ ಚಿಪ್ಪು, ಟಯರ್‌ ನಂಥ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಿ

 ತೊಟ್ಟಿ, ಬಿಂದಿಗೆ, ಡ್ರಮ್‌ಗಳಲ್ಲಿ 2-3 ದಿನಕ್ಕೊಮ್ಮೆ ನೀರು ಬದಲಿಸಿ  ಸೀನುವಾಗ, ಕೆಮ್ಮುವಾಗ ಕರವಸ್ತ್ರಗಳನ್ನು ಅಡ್ಡಲಾಗಿ ಬಳಸಿ

 ಸೊಳ್ಳೆಗಳನ್ನು ತಡೆಯಲು ಕಿಟಕಿ ಬಾಗಿಲುಗಳಿಗೆ ಮೆಶ್‌ ಹಾಕಿ ಅಥವಾ ಸೊಳ್ಳೆ ನಾಶಕ ಬಳಸಿ

ಹೋಟೆಲ್‌, ರಿಯಲ್‌ ಎಸ್ಟೇಟ್‌ದಾರರ ಜತೆ ಚರ್ಚೆ: ಹೆಚ್ಚೆಚ್ಚು ಡೆಂಘೀ ಪ್ರಕರಣಗಳು ವರದಿಯಾಗುತ್ತಿರುವ ಪ್ರದೇಶಗಳ ಬಗ್ಗೆ ಜಾಗೃತೆ ವಹಿಸಿ, ಹರಡದಂತೆ ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರು ವ್ಯಾಪ್ತಿ ಹೋಟೆಲ್‌ ಮಾಲೀಕರ ಮತ್ತು ರಿಯಲ್‌ ಎಸ್ಟೇಟ್‌ ಉದ್ಯಮಿದಾರರ ಜತೆಗೆ ಮಾತುಕತೆ ನಡೆಸಲಾಗಿದೆ ಎಂದು ಪಾಲಿಕೆ ಆರೋಗ್ಯ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ. ಹೊಸಕಟ್ಟಡಗಳು ಮತ್ತು ನಿರ್ಮಾಣ ಹಂತದ ಕಟ್ಟಡಗಳಲ್ಲಿ ಕೊಳಚೆ ಇರದಂತೆ ನೋಡಿಕೊಳ್ಳುವುದು. ಎಲ್ಲೆಂದರಲ್ಲಿ ಕಸ ಸುರಿಯದ ರೀತಿಯಲ್ಲಿ ನಿರ್ಮಾಣ ಕಟ್ಟಡಗಳನ್ನು ಸ್ವತ್ಛವಾಗಿಟ್ಟುಕೊಳ್ಳುವುದು. ಕಟ್ಟಡಗಳ ಸುತ್ತಮುತ್ತ ಎಲ್ಲಿ ಮಳೆ ನೀರು ನಿಲ್ಲದಂತೆ ನೋಡಿಕೊಳ್ಳುವುದು. ಜತೆಗೆ ತಗ್ಗು ಪ್ರದೇಶ ನಿರ್ಮಾಣವಾಗದ ರೀತಿಯಲ್ಲಿ ನೋಡಿಕೊಳ್ಳುವಂತೆ ಕಟ್ಟಡದಾರರಿಗೆ ಸೂಚನೆ ನೀಡಲಾಗಿದೆ. ಜತೆಗೆ ಹೋಟೆಲ್‌ಗ‌ಳ ಗಲೀಜು ಎಲ್ಲೆಂದರಲ್ಲಿ ನಿಲ್ಲದಂತೆ ಎಚ್ಚರ ವಹಿಸುವಂತೆ ಹೋಟೆಲ್‌ ಮಾಲೀಕರಿಗೂ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಬಿಬಿಎಂಪಿ ವ್ಯಾಪ್ತಿ ಪ್ರದೇಶಗಳಲ್ಲಿ ಡೆಂಗ್ಯು ನಿಯಂತ್ರಣದಲ್ಲಿದೆ. ಆದರೆ ಕಳೆದ ತಿಂಗಳಿಗೆ ಹೋಲಿಕೆ ಮಾಡಿದಾಗ ಪ್ರಕರಣಗಳ ಸಂಖ್ಯೆಯಲ್ಲಿ ಶೇ. 10- 15 ಏರಿಕೆ ಕಂಡು ಬಂದಿದೆ. ಈ ಬಗ್ಗೆ ಎಚ್ಚರಿಕೆ ವಹಿಸಲಾಗಿದ್ದು ಡೆಂಘೀ  ಕುರಿತಂತೆ ಜನರಲ್ಲಿ ಹೆಚ್ಚಿನ ರೀತಿಯ ಜಾಗೃತಿ ಮೂಡಿಸಲಾಗುತ್ತಿದೆ. ●ಡಾ.ಕೆ.ವಿ.ತ್ರಿಲೋಕ್‌ ಚಂದ್ರ, ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ) 

●ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

Daily Horoscope:

Daily Horoscope: ಹೇಗಿದೆ ನೋಡಿ ಶನಿವಾರದ ನಿಮ್ಮ ಗ್ರಹಬಲ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

12

Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.