Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ


Team Udayavani, Sep 7, 2024, 8:00 PM IST

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

ಬೆಂಗಳೂರು: ಎಲೆಕ್ಟ್ರಾನಿಕ್‌ ಸಿಟಿಯನ್ನು ಸಂಪರ್ಕಿಸುವ ಹಳದಿ ಮಾರ್ಗದ ಮೆಟ್ರೋ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದರೂ ಮೆಟ್ರೋ ಬೋಗಿಗಳ ಅಲಭ್ಯತೆಯಿಂದ ಈ ಮಾರ್ಗದಲ್ಲಿ ಮೆಟ್ರೋ ಸಂಚಾರ ಮತ್ತಷ್ಟು ವಿಳಂಬವಾಗಲಿದೆ.

ಈ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಲಭ್ಯವಿರುವ ಮೆಟ್ರೋಗಳನ್ನು ಬಳಸಿಕೊಂಡು ಕೆಲ ನಿಲ್ದಾಣಗಲ್ಲಿ ಮಾತ್ರ ನಿಲುಗಡೆ ನೀಡುವ ಮೂಲಕ ಮೆಟ್ರೋ ಸೇವೆ ಆರಂಭಿಸುವ ಬಗ್ಗೆ ಬೆಂಗಳೂರು ಮೆಟ್ರೋ ನಿಗಮದ ಅಧಿಕಾರಿಗಳ ಮಟ್ಟದಲ್ಲಿ ಚರ್ಚೆ ಆರಂಭವಾಗಿದೆ.

ಆರ್‌.ವಿ. ರಸ್ತೆಯಿಂದ ಬೊಮ್ಮಸಂದ್ರವನ್ನು ಸಂಪರ್ಕಿಸುವ 19 ಕಿ.ಮೀ. ಉದ್ದದ ಮೆಟ್ರೋ ಮಾರ್ಗವು ಮಾಹಿತಿ ತಂತ್ರಜ್ಞಾನದ ಹಲವು ದಿಗ್ಗಜ ಕಂಪನಿಗಳಲ್ಲಿ ಕೆಲಸ ಮಾಡುವ ನೌಕರರಿಗೆ ಹೆಚ್ಚು ಅನುಕೂಲಕರವಾಗಿದೆ. ಆದರೆ, ಈ ಮಾರ್ಗದಲ್ಲಿ ಮೆಟ್ರೋ ಸೇವೆ ಆರಂಭಗೊಳ್ಳಲಿದೆ ಎಂದು ಪ್ರಯಾಣಿಕರು ಹಲವು ತಿಂಗಳಿನಿಂದ ಕಾಯುತ್ತಿದ್ದಾರೆ.

ಇದೀಗ ಕಾಮಗಾರಿ ಪೂರ್ಣಗೊಳ್ಳುತ್ತ ಬಂದಿದ್ದರೂ ಪೂರ್ಣ ಪ್ರಮಾಣದಲ್ಲಿ ಸೇವೆ ನೀಡಲು ತಕ್ಕಷ್ಟು ಮೆಟ್ರೋ ಸೆಟ್‌ಗಳಿಲ್ಲದಿರುವುದು ಮತ್ತು ಸದ್ಯಕ್ಕೆ ಅಗತ್ಯ ಮೆಟ್ರೋ ಸೆಟ್‌ಗಳು ಸಿಗುವ ಸಾಧ್ಯತೆಗಳಿ ಲ್ಲದಿರುವುದರಿಂದ ‘ಅಲ್ಪ ಸೇವೆ’ಯನ್ನಾದರೂ ಆರಂಭಿಸಿ ಬಿಡೋಣ ಎಂಬ ಅಭಿಪ್ರಾಯ ಮೆಟ್ರೋ ನಿಗಮದಲ್ಲಿದೆ.

ಆರ್‌.ವಿ. ರೋಡ್‌, ರಾಗಿಗುಡ್ಡ, ಜಯದೇವ ಆಸ್ಪತ್ರೆ, ಬಿಟಿಎಂ ಬಡಾವಣೆ, ಸೆಂಟ್ರಲ್‌ ಸಿಲ್ಕ್ ಬೋರ್ಡ್‌, ಬೊಮ್ಮನಹಳ್ಳಿ (ಎಚ್‌ಎಸ್‌ಆರ್‌ ಬಡಾವಣೆ), ಹೊಂಗಸಂದ್ರ, ಕುಡ್ಲು ಗೇಟ್‌, ಸಿಂಗಸಂದ್ರ, ಹೊಸ ರಸ್ತೆ, ಬೆರಟೆನ ಅಗ್ರಹಾರ, ಇಲೆಕ್ಟ್ರಾನಿಕ್‌ ಸಿಟಿ, ಕೊನಪ್ಪನ ಅಗ್ರಹಾರ, ಹುಸ್ಕೂರ್‌ ರೋಡ್‌, ಹೆಬ್ಬಗೋಡಿ ಮತ್ತು ಬೊಮ್ಮಸಂದ್ರ ಹೀಗೆ 16 ನಿಲ್ದಾಣಗಳಿವೆ. ಪ್ರತಿ ನಿಲ್ದಾಣದಲ್ಲೂ ಮೆಟ್ರೋಗೆ ನಿಲುಗಡೆ ನೀಡುತ್ತ ಹೋಗುವ ಸೆಟಲ್‌ ಸೇವೆಗಿಂತ ಕೆಲ ನಿಲ್ದಾಣಗಳಲ್ಲಿ ಮಾತ್ರ ನಿಲುಗಡೆ ನೀಡುವ ಎಕ್ಸ್‌ ಪ್ರಸ್‌ ಸೇವೆಯನ್ನು ತಾತ್ಕಾಲಿಕವಾಗಿ ಆರಂಭಿಸಿದರೆ ಇಡೀ ಮಾರ್ಗದಲ್ಲಿ ಮೆಟ್ರೋ ಸಂಚರಿಸಲು ತೆಗೆದುಕೊಳ್ಳುವ ಸಮಯ ಕಡಿಮೆ ಆಗುವುದರಿಂದ ಕಡಿಮೆ ಸಂಖ್ಯೆಯಲ್ಲೇ ತಾತ್ಕಾಲಿಕವಾಗಿ ಮೆಟ್ರೋ ಸಂಚಾರ ಸಾಧ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಕಾರ್ಯಪ್ರವತ್ತರಾಗಿರುವ ಮೆಟ್ರೋ ಅಧಿಕಾರಿಗಳು 7 ನಿಲ್ದಾಣಗಳಲ್ಲಿ ಮಾತ್ರ ಆರಂಭದಲ್ಲಿ ನಿಲುಗಡೆ ನೀಡಿ ಮೆಟ್ರೋ ಸೇವೆ ನೀಡಿದರೆ ಹೇಗೆ ಎಂಬುದರ ಬಗ್ಗೆ ಕಾರ್ಯಪ್ರವತ್ತರಾಗಿದ್ದಾರೆ.

ಆದ್ದರಿಂದ ಕೊನಪ್ಪನ ಅಗ್ರಹಾರ, ಸೆಂಟ್ರಲ್‌ ಸಿಲ್ಕ್ ಬೋರ್ಡ್‌, ಬಿಟಿಎಂ ಬಡಾವಣೆ, ಜಯದೇವ ಆಸ್ಪತ್ರೆ ಸೇರಿದಂತೆ ಆರಂಭದ ಮತ್ತು ಕೊನೆಯ ನಿಲ್ದಾಣಗಳಲ್ಲಿ ಮಾತ್ರ ನಿಲುಗಡೆ ನೀಡಿ ಈ ವರ್ಷಾಂತ್ಯಕ್ಕೆ ಈ ಮಾರ್ಗದಲ್ಲಿ ಮೆಟ್ರೋ ಸೇವೆ ಆರಂಭಿಸುವುದು ಉಳಿದಂತೆ ಹೊಸ ಮೆಟ್ರೋ ಸೆಟ್‌ಗಳು ಸೇರ್ಪಡೆ ಆಗುತ್ತಿರುವಂತೆ ನಿಲುಗಡೆ ನಿಲ್ದಾಣಗಳ ಸಂಖ್ಯೆಯನ್ನು ಹೆಚ್ಚಿಸುವ ಪ್ರಸ್ತಾಪ ಮೆಟ್ರೋ ನಿಗಮದ ಮುಂದಿದೆ.

ಹಳದಿ ಮಾರ್ಗಕ್ಕೆ ಮೆಟ್ರೋ 90 ಬೋಗಿಗಳು ಅಗತ್ಯ  : ಹಳದಿ ಮಾರ್ಗಕ್ಕೆ 15 ಮೆಟ್ರೋ ಸೆಟ್‌ (90 ಬೋಗಿ)ಗಳನ್ನು ನಿಗದಿ ಪಡಿಸಲಾಗಿದೆ. ಈ ಪೈಕಿ ಕನಿಷ್ಠ 5 ಮೆಟ್ರೋ ಬೋಗಿಗಳು ಲಭ್ಯವಾದರೆ ಹಳದಿ ಮಾರ್ಗದಲ್ಲಿ ತಕ್ಕ ಮಟ್ಟಿಗೆ ಮೆಟ್ರೋ ಸಂಪರ್ಕ ಸರಾಗವಾಗಲಿದೆ. ಆದರೆ ಈ ವರ್ಷದ ಅಂತ್ಯದ ಹೊತ್ತಿಗೆ ಮೂರು ಬೋಗಿಗಳು ಮಾತ್ರ ಲಭ್ಯವಾಗಬಹುದು. ನಮ,¾ ಆರಂಭಿಕ ಗಡುವಿನ ಪ್ರಕಾರ 2021ರ ಡಿಸೆಂಬರ್‌ಗೆ ಹಳದಿ ಮಾರ್ಗ ವಾಣಿಜ್ಯ ಸಂಚಾರಕ್ಕೆ ಮುಕ್ತವಾಗಬೇಕಿತ್ತು. ಆದರೆ ಈಗಾಗಲೇ ಮೂರು ವರ್ಷ ತಡವಾಗಿದ್ದು ಇನ್ನಷ್ಟು ವಿಳಂಬ ಮಾಡದೆ ಲಭ್ಯ ಸಂಪನ್ಮೂಲ ಬಳಸಿಕೊಂಡೇ ರೈಲು ಸಂಚಾರ ಆರಂಭಿಸಲು ಮೆಟ್ರೋ ಅಧಿಕಾರಿಗಳು ಉತ್ಸುಕರಾಗಿದ್ದಾರೆ.

ಟಾಪ್ ನ್ಯೂಸ್

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು

Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು

7

Bengaluru: ನಗರದಲ್ಲಿ ಏಕಕಾಲಕ್ಕೆ  200 ಗಣೇಶ ಮೂರ್ತಿಗಳ ಮೆರವಣಿಗೆ

Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್‌ಗ‌ಳು ಪತ್ತೆ

Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್‌ಗ‌ಳು ಪತ್ತೆ

5

Bengaluru: ಚಿನ್ನಾಭರಣ ಮಳಿಗೆಯಲ್ಲಿ ತಡರಾತ್ರಿ ದುಷ್ಕರ್ಮಿಗಳಿಂದ ಕಳವಿಗೆ ಯತ್ನ

BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು

BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.