ವಿದೇಶಿ ಕರೆನ್ಸಿ ನೆಪದಲ್ಲಿ ವಂಚಿಸುತ್ತಿದ್ದವರ ಸೆರೆ


Team Udayavani, Oct 15, 2019, 3:06 AM IST

videshi

ಬೆಂಗಳೂರು: ವಿದೇಶಿ ಕರೆನ್ಸಿಯನ್ನು ಕಡಿಮೆ ಮೌಲ್ಯಕ್ಕೆ ಕೊಡುವ ಆಮಿಷವೊಡ್ಡಿ ಕಾರು, ಆಟೋ ಚಾಲಕರು ಹಾಗೂ ಮಧ್ಯಮ ವರ್ಗದ ಜನರಿಗೆ ವಂಚನೆ ಮಾಡುತ್ತಿದ್ದ ಬೃಹತ್‌ ಅಂತಾರಾಜ್ಯ ಜಾಲ ನಗರದ ದಕ್ಷಿಣ ವಿಭಾಗ ಪೊಲೀಸರ ಬಲೆಗೆ ಬಿದ್ದಿದ್ದೆ.

ದೆಹಲಿ ಮೂಲದ ಶಾಫಿಯಾ ಬೇಗಂ (34), ಆಕೆಯ ಸಹಚರರಾದ ಉತ್ತರ ಪ್ರದೇಶ ಮೂಲದ ಮೊಹಮ್ಮದ್‌ ಶಕೀಲ್‌ ಶೇಕ್‌ (19) ರಹೀಂ ಖುರೇಶಿ (24), ಮೊಹಮದ್‌ ದಿಲ್ವರ್‌ ಹುಸೇನ್‌ (39), ಮೊಹಮ್ಮದ್‌ ಶಾನವಾಜ್‌ (30), ಮೊಹಮ್ಮದ್‌ ಇಬ್ರಾಹಿಂ (30), ರಹೀಂ ಶೇಖ್‌ (56) ಮತ್ತು ಅನ್ವರ್‌ ಹುಸೇನ್‌ (24) ಬಂಧಿತರು.

ಅವರಿಂದ ಸೌದಿ ಅರೇಬಿಯಾದ 30 “ರಿಯಲ್‌’ ಹಾಗೂ 3.50 ಲಕ್ಷ ರೂ. ನಗದು ಜಪ್ತಿ ಮಾಡಲಾಗಿದೆ. ಆರೋಪಿಗಳ ಬಂಧನದಿಂದ ವಿವೇಕನಗರದ ಮೂರು ಮತ್ತು ಜಯನಗರ ಠಾಣೆ ವ್ಯಾಪ್ತಿಯ ಒಂದು ವಂಚನೆ ಪ್ರಕರಣಗಳು ಪತ್ತೆಯಾಗಿವೆ ಎಂದು ದಕ್ಷಿಣ ವಿಭಾಗದ ಡಿಸಿಪಿ ಡಾ.ರೋಹಿಣಿ ಕಟೋಚ್‌ ಸೆಪಟ್‌ ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಇತ್ತೀಚೆಗೆ ಈ ತಂಡದ ರಹೀಂ, ಇಬ್ರಾಹಿಂ ಮತ್ತು ಮೊಹ್ಮಮದ್‌ ಶಕೀಲ್‌, ಜಯನಗರ ನಿವಾಸಿ, ಓಲಾ ಕ್ಯಾಬ್‌ ಚಾಲಕ ಸೈಯ್ಯದ್‌ ಖಲೀಫ್‌ ಉಲ್ಲಾ ಎಂಬವರನ್ನು ಜಾನ್ಸನ್‌ ಮಾರುಕಟ್ಟೆಯಲ್ಲಿ ಪರಿಚಯಿಸಿಕೊಂಡಿದ್ದರು. ಬಳಿಕ ಸೌದಿ ರಿಯಲ್‌ ಕರೆನ್ಸಿ ತೋರಿಸಿ, ತಮ್ಮ ಬಳಿ ಲಕ್ಷಾಂತರ ರೂ. ವಿದೇಶಿ ಕರೆನ್ಸಿ ಇದ್ದು, ಅದನ್ನು ಭಾರತೀಯ ಹಣಕ್ಕೆ ವರ್ಗಾಯಿಸಲು ಆಗುತ್ತಿಲ್ಲ.

3,50 ಲಕ್ಷ ರೂ. ಕೊಟ್ಟರೆ ತಮ್ಮ ಬಳಿಯಿರುವ ವಿದೇಶಿ ಕರೆನ್ಸಿ ಕೊಡುವುದಾಗಿ ನಂಬಿಸಿದ್ದರು. ಈ ಮಾತನ್ನು ನಂಬಿದ ಸೈಯ್ಯದ್‌ ಖಲೀಫ್‌, ತನ್ನ ಬಳಿಯಿದ್ದ ಹಣ ಕೊಟ್ಟು, ರಿಯಲ್‌ ಪಡೆಯಲು ಒಪ್ಪಿಕೊಂಡಿದ್ದರು. ಸೆ.4ರಂದು ಜಯನಗರದ ಐದನೇ ಹಂತದ ಮಸೀದಿಯೊಂದರ ಬಳಿ ಸೈಯ್ಯದ್‌ ಖಲೀಫ್‌ನನ್ನು ಕರೆಸಿಕೊಂಡು 50 ರಿಯಲ್‌ನ ಒಂದು ನೋಟನ್ನು ಮಾತ್ರ ಕೊಟ್ಟು, ಹಣ ಪಡೆದು, 3.50 ಲಕ್ಷ ರೂ. ಕಸಿದುಕೊಂಡು, ಅವರನ್ನು ಪಕ್ಕಕ್ಕೆ ತಳ್ಳಿ ಪರಾರಿಯಾಗಿದ್ದರು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ, ಆರೋಪಿಗಳ ಮೊಬೈಲ್‌ ಲೊಕೇಷನ್‌ ಆಧರಿಸಿ ಕಾರ್ಯಾಚರಣೆ ನಡೆಸಲಾಗಿತ್ತು. ಅದರಂತೆ, ರಸ್ತೆ ಬದಿಯ ವ್ಯಾಪಾರಿಗೆ ವಂಚಿಸಲು ಯತ್ನಿಸುತ್ತಿದ್ದ ಶಕೀಲ್‌ ಶೇಖ್‌ನನ್ನು ಮೊದಲು ಬಂಧಿಸಿ ವಿಚಾರಣೆ ನಡೆಸಿದಾಗ ಬೃಹತ್‌ ಜಾಲದ ಬೇರು ಪತ್ತೆಯಾಗಿದೆ ಎಂದು ಡಿಸಿಪಿ ಹೇಳಿದರು.

ಪ್ರಕರಣದ ಕಿಂಗ್‌ಪಿನ್‌ ಶಾಫಿಯಾ ಬೇಗಂ ಹತ್ತು ವರ್ಷಗಳ ಹಿಂದೆ ದೆಹಲಿಯಲ್ಲಿ ವಾಸವಾಗಿದ್ದಳು. ಆಗಲೇ ಪರಿಚಿತರ ಮೂಲಕ ಸೌದಿ ಅರೇಬಿಯಾದ ರಿಯಲ್‌ಗ‌ಳನ್ನು ಪಡೆದುಕೊಂಡಿದ್ದಳು. ದೆಹಲಿ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶದ ನಿರುದ್ಯೋಗ ಯುವಕರಿಗೆ ಕೆಲಸ ಕೊಡಿಸುವುದಾಗಿ 2011ರಲ್ಲಿ ಬೆಂಗಳೂರಿಗೆ ಕರೆತಂದು ನಗರದಲ್ಲಿ ಕೃತ್ಯ ಎಸಗುತ್ತಿದ್ದಳು.

2011ರಲ್ಲಿ ವಿವೇಕನಗರ ಮತ್ತು ಎಸ್‌.ಜೆ.ಪಾರ್ಕ್‌ ಠಾಣೆ ವ್ಯಾಪ್ತಿಯಲ್ಲಿ ಮೂರು ಅಪರಾಧ ಪ್ರಕರಣಗಳಲ್ಲಿ ಶಾಫಿಯಾ ಪೊಲೀಸರ ಬಲೆಗೆ ಬಿದ್ದಿದ್ದಳು. ಬಳಿಕ ಜಾಮೀನು ಪಡೆದು ಹೊರಬಂದು ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದಳು. ಈ ಸಂಬಂಧ ಕೋರ್ಟ್‌ ಆರೋಪಿಯ ವಿರುದ್ಧ ಜಾಮೀನು ರಹಿತ ವಾರೆಂಟ್‌ ಹೊರಡಿಸಿತ್ತು.

2018ರಲ್ಲಿ ಮತ್ತೂಮ್ಮೆ ನಗರಕ್ಕೆ ತನ್ನ ತಂಡದೊಂದಿಗೆ ಬಂದಿದ್ದ ಈಕೆ, ವಿವೇಕನಗರ ಠಾಣೆ ವ್ಯಾಪ್ತಿಯ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಹಾಗೂ 2019ನೇ ಸಾಲಿನಲ್ಲಿ ಒಂದು ಅಪರಾಧ ಪ್ರಕರಣದಲ್ಲಿ ಭಾಗಿಯಾಗಿದ್ದಳು ಎಂಬುದು ಗೊತ್ತಾಗಿದೆ ಎಂದು ಅವರು ಹೇಳಿದರು.

ಕೆಲಸ ಕೊಡಿಸುವುದಾಗಿ ಕರೆತಂದಿದ್ದಳು: ಉತ್ತರ ಪ್ರದೇಶ, ಪಶ್ಚಿಮ ಬಂಗಾಳದಿಂದ ನಿರುದ್ಯೋಗಿ ಯುವಕರನ್ನು ನಗರಕ್ಕೆ ಕರೆತರುತ್ತಿದ್ದ ಶಾಫಿಯಾ ಬೇಗಂ, ಹೊರವಲಯದ ಪರಪ್ಪನ ಅಗ್ರಹಾರ, ದೊಡ್ಡ ನಾಗಮಂಗಲ ಮತ್ತು ಹೆಗ್ಗನ ಹಳ್ಳಿಯಲ್ಲಿ ಕಡಿಮೆ ವೆಚ್ಚದ ಬಾಡಿಗೆ ಮನೆ ಮಾಡಿಕೊಡುತ್ತಿದ್ದಳು.

ಆದರೆ, ಎಂದಿಗೂ ತಾನೂ ವಾಸ ಮಾಡುತ್ತಿದ್ದ ಮನೆ ವಿಳಾಸ ನೀಡುತ್ತಿರಲಿಲ್ಲ. ಬಳಿಕ ನಿರ್ಜನ ಪ್ರದೇಶಕ್ಕೆ ಯುವಕರನ್ನು ಕರೆದೊಯ್ದು ತನ್ನ ಬಳಿಯಿದ್ದ ವಿದೇಶಿ ಕರೆನ್ಸಿ ಕೊಡುತ್ತಿದ್ದಳು. ಬಳಿಕ ಅಮಾಯಕರನ್ನು ಸೆಳೆಯುವುದು ಹೇಗೆ ಮತ್ತು ವಂಚಿಸುವುದು ಹೇಗೆ ಎಂದು ತಾನೇ ತರಬೇತಿ ನೀಡುತ್ತಿದ್ದಳು.

ಶಾಫಿಯಾ ಸೂಚನೆ ಮೇರೆಗೆ ಆರೋಪಿಗಳು ಕ್ಯಾಬ್‌, ಆಟೋದಲ್ಲಿ ಪ್ರಯಾಣಿಕರಂತೆ ಸಂಚರಿಸಿ ಚಾಲಕರು ಮತ್ತು ಮಧ್ಯಮ ವರ್ಗದ ಜನರನ್ನು ಸಂಪರ್ಕಿಸಿ ವಿದೇಶಿ ಕರೆನ್ಸಿಯನ್ನು ಕಡಿಮೆ ಮೌಲ್ಯಕ್ಕೆ ಕೊಡುವುದಾಗಿ ನಂಬಿಸಿ ನಿಗದಿತ ಪ್ರದೇಶಕ್ಕೆ ಕರೆಸಿಕೊಂಡು ದರೋಡೆ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.