![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Sep 22, 2019, 5:03 PM IST
ಬೆಂಗಳೂರು : ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿಯಿಂದ ಜನ ಸಂಕಷ್ಟದಲ್ಲಿದ್ದಾರೆ. ಆದರೆ ರಾಜ್ಯ ಸರ್ಕಾರ ಇದರ ಬಗ್ಗೆ ತಕರಾರು ಎತ್ತುತ್ತಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿಯಿಂದ ಜನ ತತ್ತರಿಸಿದ್ದಾರೆ. ಈ ವೇಳೆಯಲ್ಲಿ ಸಿಎಂ ಯಡಿಯೂರಪ್ಪರವರು ದೆಹಲಿಗೆ ಹೋಗಿರುವುದು ಪ್ರವಾಹ ಪರಿಹಾರ ಕೇಳುವುದಕ್ಕಲ್ಲ, ಬದಲಾಗಿ ಅನರ್ಹತೆಗೊಂಡಿರುವ ಶಾಸಕರ ಪರ ವಕಾಲತ್ತು ವಹಿಸಿ ಸರ್ಕಾರ ಉಳಿಸಿಕೊಳ್ಳಲು ಕಸರತ್ತು ಮಾಡಲು ಎಂದು ಹೇಳಿದರು.
ಅಧಿಕಾರ ಉಳಿಸಿಕೊಳ್ಳಲು ಯಡಿಯೂರಪ್ಪ ದೆಹಲಿಗೆ ಹೋಗಿದ್ದಾರೆ. ಅವರಿಗೆ ರಾಜ್ಯದ ಜನರ ಸಂಕಷ್ಟ ಬೇಕಾಗಿಲ್ಲ. ಸರ್ಕಾರ ಉಳಿಸಿಕೊಳ್ಳಲು ಏನು ಬೇಕಾದರೂ ಮಾಡಲು ಸಿದ್ದವಾಗಿದ್ದಾರೆ ಎಂದು ಟೀಕೆ ಮಾಡಿದರು.
You seem to have an Ad Blocker on.
To continue reading, please turn it off or whitelist Udayavani.