ರಾಜಧಾನಿಯಲ್ಲಿ ಶ್ರದ್ಧಾ-ಭಕ್ತಿಯ ಬಸವ ಜಯಂತಿ


Team Udayavani, May 8, 2019, 3:07 AM IST

rajadhani

ಬೆಂಗಳೂರು: ಹನ್ನೆರಡನೆ ಶತಮಾನದಲ್ಲಿಯೇ ಸಮಾನತೆ ಸಾರಿದ ಸಮಾಜ ಸುಧಾರಕ ಬಸವೇಶ್ವರರ ಜಯಂತಿಯನ್ನು ನಗರ ವಿವಿಧೆಡೆ ಶ್ರದ್ಧಾ- ಭಕ್ತಿಯಿಂದ ಆಚರಿಸಲಾಯಿತು.

ಬಸವ ಜಯಂತಿ ಹಿನ್ನೆಲೆಯಲ್ಲಿ ನಗರದ ಬಸವೇಶ್ವರ ವೃತ್ತ ಹಾಗೂ ವಿವಿಧ ಬಡಾವಣೆಯಲ್ಲಿರುವ ಬಸವೇಶ್ವವರರ ಪ್ರತಿಮೆ, ಪುತ್ಥಳಿಗಳನ್ನು ಹೂವುಗಳಿಂದ ಸಿಂಗರಿಸಲಾಗಿತ್ತು. ಜಯಂತಿ ಆಚರಣೆ ವೇಳೆ ವಚನಗಳ ಗಾಯನ ಮೊಳಗಿದವು. ಬಸವೇಶ್ವರ ಸೇರಿ ಇತ್ಯಾದಿ ಶರಣರ ವಿಚಾರಗಳ ಕುರಿತ ಭಾಷಣ, ಚರ್ಚೆಗಳು ನಡೆದವು.

ಬಸವ ಸಮಿತಿ ವತಿಯಿಂದ ನಡೆದ “ಬಸವ ಜಯಂತಿ ಮತ್ತು ವಾರ್ಷಿಕ ಪ್ರಶಸ್ತಿ ಸಮಾರಂಭ’ಕ್ಕೆ ಆಗಮಿಸಿದ್ದ ರಾಜ್ಯಪಾಲ ವಿ.ಆರ್‌.ವಾಲಾ, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಬೆಳಗ್ಗೆ 9.30ಕ್ಕೆ ಚಾಲುಕ್ಯವೃತ್ತದಲ್ಲಿರುವ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು. ನಂತರ ಭಾರತೀಯ ವಿದ್ಯಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ರಾಮಯ್ಯ ವೃತ್ತದ ಸಮೀಪದ ಗುರು ಬಸವಣ್ಣ ಉದ್ಯಾನದಲ್ಲಿನ ಪುತ್ಥಳಿಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಮಲ್ಲೇಶ್ವರದ ಶಾಸಕ ಸಿ.ಎನ್‌.ಅಶ್ವಥನಾರಾಯಣ್‌ ಅವರು ಮಾಲಾರ್ಪಣೆ ಮಾಡಿದರು.

ಅಖೀಲ ಭಾರತ ವೀರಶೈವ ಮಹಾಸಭೆಯ ಬೆಂಗಳೂರು ನಗರ ಜಿಲ್ಲಾ ಘಟಕ, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಘಟಕ, ಮಹಿಳಾ ಮತ್ತು ಯುವ ವಿಭಾಗಗಳ ಸಂಯುಕ್ತಾಶ್ರಯದಲ್ಲಿ ಸದಾಶಿವನಗರದ ವೀರಶೈವ-ಲಿಂಗಾಯತ ಭವನದ ಹಾನಗಲ್‌ ಕುಮಾರಸ್ವಾಮಿಗಳ ಸಭಾಂಗಣದಲ್ಲಿ ಬಸವ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೀರಶೈವ ಮಹಾಸಭೆಯ ಕಾರ್ಯಕಾರಿ ಸಮಿತಿ ಸದಸ್ಯ ಬಿ.ಎಸ್‌.ಸಚ್ಚಿದಾನಂದಮೂರ್ತಿಯವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮೇಯರ್‌ ಗಂಗಾಂಬಿಕೆ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಬಸವ ಜಯಂತಿ ಕುರಿತು ಉಪನ್ಯಾಸ ನೀಡಿದ ಡಾ. ಶಾಲಿನಿಯವರು, ಬಸವೇಶ್ವರರು ಹಾಗೂ ಸಮಕಾಲೀನ ಶರಣರು ವಚನ ಮಾಧ್ಯಮದ ಮೂಲಕ ಪ್ರತಿಪಾದಿಸಿದ ಜಾತ್ಯಾತೀತ ಭಾವನೆ, ಸ್ತ್ರೀ ಸ್ವಾತಂತ್ರ್ಯ, ಅಸ್ಪೃಶ್ಯತೆ ನಿವಾರಣೆ, ಸಮಾನತೆ, ಕಾಯಕದ ಗೌರವ ಹಾಗೂ ದಾಸೋಹ ತತ್ವಗಳ ಕುರಿತು ಪ್ರಸ್ತಾಪ ಮಾಡಿದರು. ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಜಿಲ್ಲಾ ಘಟದಕ ಅಧ್ಯಕ್ಷ ಎಸ್‌.ಗುರುಸ್ವಾಮಿ, ಬಿಬಿಎಂಪಿ ವೀರಶೈವ ಮಹಾಸಭೆ ಅಧ್ಯಕ್ಷ ಎಸ್‌.ಚಂದ್ರಮೌಳಿಯವರು ಉಪಸ್ಥಿತರಿದ್ದರು.

ವಚನ ಜ್ಯೋತಿ ಬಳಗದ ವತಿಯಿಂದ ವಿಜಯನಗರದ ಬಸವೇಶ್ವರ ವಿದ್ಯಾರ್ಥಿ ನಿಲಯದಲ್ಲಿ ಬಸವ ಉತ್ಸವ ನಡೆಯಿತು. ಕಾರ್ಯಕ್ರಮವನ್ನು ವಿದ್ವಾಂಸ ಡಾ.ಗೊ.ರು. ಚನ್ನಬಸಪ್ಪ ಉದ್ಘಾಟಿಸಿದರು. ಕರ್ನಾಟಕ ವೀರಶೈವ ವಿದ್ಯಾಭಿವೃದ್ಧಿ ಸಂಸ್ಥೆ ಅಧ್ಯಕ್ಷ ಬಿ.ಎಸ್‌. ಪರಮಶಿವಯ್ಯ, ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಮಂಡಳಿ ಅಧ್ಯಕ್ಷ ಜಯವಿಭವ ಸ್ವಾಮಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಬಸವಣ್ಣನ ವಚನಗಳ ಸಂದೇಶ ಸಾರಿದರು.

ಮಂಜುನಾಥ ಸ್ವಾಮಿ ಟೆಂಪಲ್‌ ಟ್ರಸ್ಟ್‌ ರಾಜಾಜಿನಗರದಲ್ಲಿ ಬಸವೇಶ್ವರ ಅವರ ಭಾವಚಿತ್ರ ಮೆರವಣಿಗೆ, ವಾದ್ಯಗೋಷ್ಠಿ, ಮಕ್ಕಳ ವೇಷ ಭೂಷಣ ಸ್ಪರ್ಧೆ, ವಚನ ಗಾಯನ ಆಯೋಜಿಸಿತ್ತು. ಬಸವ ಅಂತರರಾಷ್ಟ್ರೀಯ ಪ್ರತಿಷ್ಠಾನವು ಕನ್ನಲ್ಲಿಯಲ್ಲಿ ಶಿವರಾತ್ರಿ ನಾಟಕ ಪ್ರದರ್ಶನ ಆಯೋಜಿಸಿತ್ತು.

ವೀರಶೈವ ಲಿಂಗಾಯತ ಬಳಗ ವತಿಯಿಂದ ಮಲ್ಲತ್ತಹಳ್ಳಿಯ ಅಕ್ಷಯ ಪಾರ್ಟಿ ಹಾಲ್‌ನಲ್ಲಿ ಬಸವಜಯಂತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಐಟಿಐ ಬಡಾವಣೆ ಕ್ಷೇಮಾಭಿವೃದ್ಧಿ ಸಂಘ ಅಧ್ಯಕ್ಷ ಪಾರ್ಥಸಾರಥಿ, ಎಂಪಿಎಂ ಬಡಾವಣೆ ಕ್ಷೇಮಾಭಿವೃದ್ಧಿ ಅಧ್ಯಕ್ಷ ಹರಿಪ್ರಸಾದ್‌ ಆಗಮಿಸಿದ್ದರು.

ನಗರದ ವಿವಿಧೆಡೆ ಕ್ರಾಂತಿ ಪುರುಷನ ಮೆರವಣಿಗೆ: ವಚನ ಜ್ಯೋತಿ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬಸವ ಉತ್ಸವ’ ಹಮ್ಮಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಬೆಳಗ್ಗೆ 7ಕ್ಕೆ ವಿಜಯ ನಗರ ಮೆಟ್ರೋ ನಿಲ್ದಾಣದಿಂದ ಬಸವೇಶ್ವರ ವಿದ್ಯಾರ್ಥಿ ನಿಲಯದ ವರೆಗೆ ಕನ್ನಡ ಜಾನಪದ ತಂಡಗಳ ಅದ್ಧೂರಿ ಮೆರವಣಿಗೆ ಸಾಗಿತು.

ಬೆಳಗ್ಗೆ 8ಕ್ಕೆ ವೀರಶೈವ ಲಿಂಗಾಯತ ಬಳಗ ವತಿಯಿಂದ ಐ.ಟಿ.ಐ ಬಡಾವಣೆಯಲ್ಲಿ ವಿವಿಧ ಕಲಾ ತಂಡಗಳೊಂದಿಗೆ ಬಸವೇಶ್ವರ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಸಲಾಯಿತು. ಅಖೀಲ ಭಾರತ ವೀರಶೈವ ಮಹಾಸಭೆ ವತಿಯಿಂದ ಮಧ್ಯಾಹ್ನ 2 ಗಂಟೆಗೆ ಸದಾಶಿವನಗರದ ಭಾಷ್ಯಂ ವೃತ್ತದಿಂದ ಸದಾಶಿವನಗರದ ಮಹಾಸಭೆಯ ಕೇಂದ್ರ ಕಚೇರಿವರೆಗೂ ಜಗಜ್ಯೋತಿ ಬಸವೇಶ್ವರ,

ಜಗದ್ಗುರು ರೇಣುಕಾಚಾರ್ಯರ, ಹಾನಗಲ್‌ ಕುಮಾರೇಶ್ವರ ಹಾಗೂ ಡಾ.ಶಿವಕುಮಾರ ಸ್ವಾಮೀಜಿಗಳ ಭಾವಚಿತ್ರಗಳನ್ನು ಪಲ್ಲಕ್ಕಿಯಲ್ಲಿ ಕೂರಿಸಿ ಮೆರವಣಿಗೆ ಮಾಡಲಾಯಿತು. ಮೆರವಣಿಗೆಯುದ್ದಕ್ಕೂ ವೀರಗಾಸೆ ಹಾಗೂ ಡೊಳ್ಳುಕುಣಿತ ಕಲಾತಂಡಗಳೊಂದಿಗೆ ಸಾಥ್‌ ನೀಡಿದವು. ಇನ್ನು ಭಾಗವಹಿದ್ದ ಭಕ್ತರು ಜೈಕಾರ ಕೂಗುತ್ತಾ ಸಾಗಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.