ಆಡಳಿತದ ಆಯಕಟ್ಟಿನ ಹುದ್ದೆಗಳ ಸ್ಥಾನಪಲ್ಲಟ

ಡಿಪಿಎಆರ್‌ ಕಾರ್ಯದರ್ಶಿ, ನಗರ ಪೊಲೀಸ್‌ ಆಯುಕ್ತರು, ಗುಪ್ತಚರ ದಳದ ಮುಖ್ಯಸ್ಥರ ಹುದ್ದೆ ಬದಲಾವಣೆ ಸಾಧ್ಯತೆ

Team Udayavani, Jul 27, 2019, 2:31 PM IST

bng-tdy-6

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್‌.ಯಡಿಯೂರಪ್ಪ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಕಾರ್ಯಾಂಗದ (ಆಡಳಿತ)ದ ಆಯಕಟ್ಟಿನ ಹುದ್ದೆಗಳಲ್ಲಿ ಭಾರೀ ಸ್ಥಾನಪಲ್ಲಟ ನಡೆಯುವ ಬಗ್ಗೆ ಚರ್ಚೆಗಳು ಆರಂಭವಾಗಿವೆ.

ಪ್ರತಿ ಬಾರಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಆಡಳಿತದ ಮೇಲೆ ಹಿಡಿತ ಸಾಧಿಸುವ ಸಲುವಾಗಿ ಆಯಕಟ್ಟಿನ ಹುದ್ದೆಗಳ ‘ಮೇಜರ್‌ ಸರ್ಜರಿ’ ನಡೆಸುವ ವಾಡಿಕೆಯಿದೆ. ಈ ಹಿಂದಿನ ಕಾಂಗ್ರೆಸ್‌ ನೇತೃತ್ವದ ಸರ್ಕಾರ, ಹದಿನಾಲ್ಕು ತಿಂಗಳು ಅಧಿಕಾರದಲ್ಲಿದ್ದ ಸಮ್ಮಿಶ್ರ ಸರ್ಕಾರ ಕೂಡ ಉನ್ನತ ಹುದ್ದೆಗಳ ಸ್ಥಾನಪಲ್ಲಟಕ್ಕೆ ಕೈ ಹಾಕಿತ್ತು.

ಇದೀಗ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಕೂಡ ಉನ್ನತ ಹುದ್ದೆಗಳಿಗೆ ಸರ್ಜರಿ ಮಾಡಲು ಸಿದ್ಧತೆ ನಡೆಸಿದೆ. ಇದರಲ್ಲಿ ಪ್ರಮುಖವಾಗಿ ಆಡಳಿತ ಹಾಗೂ ಸಿಬ್ಬಂದಿ ಸುಧಾರಣಾ ಇಲಾಖೆ (ಡಿಪಿಎಆರ್‌), ಲೋಕೋಪಯೋಗಿ, ಗೃಹ ಇಲಾಖೆಯಲ್ಲಿ ಭಾರೀ ಬದಲಾವಣೆಗಳಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಡಿಪಿಎಆರ್‌ ಕಾರ್ಯದರ್ಶಿಗಳು, ರಾಜ್ಯ ಗುಪ್ತಚರ ದಳದ ಮುಖ್ಯಸ್ಥರು, ನಗರ ಪೊಲೀಸ್‌ ಆಯುಕ್ತರು, ವಲಯ ಐಜಿಪಿಗಳ ಹುದ್ದೆಗಳಲ್ಲಿ ಬದಲಾವಣೆಯಾಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಅಧಿಕಾರಿಗಳಿಂದ ಲಾಭಿ ಶುರು: ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿಯೇ ನಡೆದ ಲೋಕೋಪಯೋಗಿ, ಪೊಲೀಸ್‌ ಇಲಾಖೆಯ ಕೆಲ ಹುದ್ದೆಗಳ ವರ್ಗಾವಣೆ ರದ್ದುಗೊಳ್ಳುವುದನ್ನು ತಳ್ಳಿ ಹಾಕುವಂತಿಲ್ಲ. ಮತ್ತೂಂದೆಡೆ, ಹೊಸ ಸರ್ಕಾರ ಅಧಿಕಾರಕ್ಕೆ ಬರುತ್ತಿರುವ ಬೆನ್ನಲ್ಲೇ ಆಯಕಟ್ಟಿನ ಹುದ್ದೆಗಳಲ್ಲಿ ಪ್ರತಿಷ್ಠಾಪನೆಗೊಳ್ಳುವ ಸಲುವಾಗಿ ಅಧಿಕಾರಿಗಳ ವರ್ಗ ಲಾಭಿ ಶುರು ಮಾಡಿದೆ. ವಿವಿಧ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ಬೆಂಗಳೂರಿನ ಕಚೇರಿಗಳಿಗೆ ವರ್ಗಾವಣೆಗೊಳ್ಳ ಬಹುದು. ಸಮ್ಮಿಶ್ರ ಸರ್ಕಾರದ ನೆರಳಲ್ಲಿ ಆಯಕಟ್ಟಿನ ಹುದ್ದೆಗಳಲ್ಲಿ ಆಶ್ರಯ ಪಡೆದುಕೊಂಡಿದ್ದ ಹಲವು ಐಎಎಸ್‌, ಐಪಿಎಸ್‌, ಕೆಎಎಸ್‌ ಅಧಿಕಾರಿಗಳು ವರ್ಗಾವಣೆಯಾಗುವ ಆತಂಕ ಎದುರಿಸುತ್ತಿದ್ದಾರೆ.

ಅಧಿಕಾರಿಗಳಿಗೆ ಆಯಕಟ್ಟಿನ ಹುದ್ದೆಗಳನ್ನು ಅಲಂಕರಿಸುವ ಅದೃಷ್ಟ ಕೂಡ ರಾಜಕೀಯ ಪಕ್ಷಗಳ ನಡುವೆ ಹೊಂದಿರುವ ಒಡನಾಟ, ಜಾತಿ ಲೆಕ್ಕಾಚಾರದ ಮೇಲೆಯೂ ಅವಲಂಬಿತವಾಗಿರಲಿದೆ ಎಂಬ ಸಂಗತಿ ಗುಟ್ಟಾಗಿ ಏನೂ ಉಳಿದಿಲ್ಲ. ಸರ್ಕಾರಗಳು ಬದಲಾದ ಮೇಲೆ ನಡೆಯುವ ಸಾಮಾನ್ಯ ಪ್ರಕ್ರಿಯೆ ಇದಾಗಿ ಬಿಟ್ಟಿದೆ ಎಂದು ನಿವೃತ್ತ ಅಧಿಕಾರಿಯೊಬ್ಬರು ಹೇಳುತ್ತಾರೆ.

ಕನ್ನಡಿಗರಿಗೆ ಸಿಗಲಿದೆಯೇ ಸಿಟಿ ಕಮಿಷನರ್‌ ಹುದ್ದೆ?:

ಐಪಿಎಸ್‌ ಆಧಿಕಾರಿಗಳ ಸ್ಥಾನಪಲ್ಲಟ ಸಾಧ್ಯವಾದರೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತರ ಹುದ್ದೆ ಹಲವು ವರ್ಷಗಳ ನಂತರ ಕನ್ನಡಿಗ ಐಪಿಎಸ್‌ ಅಧಿಕಾರಿಯೊಬ್ಬರ ಪಾಲಾಗಲಿದೆ. ಐಜಿಪಿ ಹುದ್ದೆಯನ್ನು ಎಡಿಜಿಪಿ ಹುದ್ದೆಗೆ ಮೇಲ್ದರ್ಜೆಗೆ ಏರಿಸಿ ಅಲೋಕ್‌ ಕುಮಾರ್‌ ಅವರನ್ನು ಸಮ್ಮಿಶ್ರ ಸರ್ಕಾರ ನಗರ ಪೊಲೀಸ್‌ ಆಯುಕ್ತರನ್ನಾಗಿ ನೇಮಕಗೊಳಿಸಿ ರಾತ್ರೋ ರಾತ್ರಿ ಆದೇಶ ಹೊರಡಿಸಿತ್ತು. ಆಯುಕ್ತರ ಹುದ್ದೆಗಳ ಮೇಲೆ ಕಣ್ಣಿಟ್ಟಿದ್ದ ಹಿರಿಯ ಐಪಿಎಸ್‌ ಅಧಿಕಾರಿಗಳ ಸೇವಾ ಹಿರಿತನ ಕಡೆಗಣಿಸಿ ಅಲೋಕ್‌ ಕುಮಾರ್‌ ಅವರಿಗೆ ಆಯುಕ್ತರ ಹುದ್ದೆ ಅವಕಾಶ ಲಭಿಸಿದ್ದಕ್ಕೆ ಇಲಾಖೆಯೊಳಗೆ ಅಪಸ್ವರ ಕೇಳಿ ಬಂದಿತ್ತು. ಸದ್ಯ, ನಗರ ಪೊಲೀಸ್‌ ಆಯುಕ್ತರ ಹುದ್ದೆಯ ರೇಸ್‌ನಲ್ಲಿ ಕೆಎಸ್‌ಆರ್‌ಪಿ ಎಡಿಜಿಪಿ ಕನ್ನಡಿಗರಾದ ಭಾಸ್ಕರ್‌ರಾವ್‌, ಎಡಿಜಿಪಿಗಳಾದ ಪ್ರತಾಪ್‌ ರೆಡ್ಡಿ, ಸುನೀಲ್ ಅಗರ್‌ವಾಲ್, ಆರ್‌.ಪಿ ಶರ್ಮಾ, ಕಮಲ್ಪಂಥ್‌ ಇದ್ದು ಯಾರಿಗೆ ಅದೃಷ್ಟ ಒಲಿಯಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
● ಮಂಜುನಾಥ್‌ ಲಘುಮೇನಹಳ್ಳಿ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.