![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 27, 2019, 2:31 PM IST
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಕಾರ್ಯಾಂಗದ (ಆಡಳಿತ)ದ ಆಯಕಟ್ಟಿನ ಹುದ್ದೆಗಳಲ್ಲಿ ಭಾರೀ ಸ್ಥಾನಪಲ್ಲಟ ನಡೆಯುವ ಬಗ್ಗೆ ಚರ್ಚೆಗಳು ಆರಂಭವಾಗಿವೆ.
ಪ್ರತಿ ಬಾರಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಆಡಳಿತದ ಮೇಲೆ ಹಿಡಿತ ಸಾಧಿಸುವ ಸಲುವಾಗಿ ಆಯಕಟ್ಟಿನ ಹುದ್ದೆಗಳ ‘ಮೇಜರ್ ಸರ್ಜರಿ’ ನಡೆಸುವ ವಾಡಿಕೆಯಿದೆ. ಈ ಹಿಂದಿನ ಕಾಂಗ್ರೆಸ್ ನೇತೃತ್ವದ ಸರ್ಕಾರ, ಹದಿನಾಲ್ಕು ತಿಂಗಳು ಅಧಿಕಾರದಲ್ಲಿದ್ದ ಸಮ್ಮಿಶ್ರ ಸರ್ಕಾರ ಕೂಡ ಉನ್ನತ ಹುದ್ದೆಗಳ ಸ್ಥಾನಪಲ್ಲಟಕ್ಕೆ ಕೈ ಹಾಕಿತ್ತು.
ಇದೀಗ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಕೂಡ ಉನ್ನತ ಹುದ್ದೆಗಳಿಗೆ ಸರ್ಜರಿ ಮಾಡಲು ಸಿದ್ಧತೆ ನಡೆಸಿದೆ. ಇದರಲ್ಲಿ ಪ್ರಮುಖವಾಗಿ ಆಡಳಿತ ಹಾಗೂ ಸಿಬ್ಬಂದಿ ಸುಧಾರಣಾ ಇಲಾಖೆ (ಡಿಪಿಎಆರ್), ಲೋಕೋಪಯೋಗಿ, ಗೃಹ ಇಲಾಖೆಯಲ್ಲಿ ಭಾರೀ ಬದಲಾವಣೆಗಳಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಡಿಪಿಎಆರ್ ಕಾರ್ಯದರ್ಶಿಗಳು, ರಾಜ್ಯ ಗುಪ್ತಚರ ದಳದ ಮುಖ್ಯಸ್ಥರು, ನಗರ ಪೊಲೀಸ್ ಆಯುಕ್ತರು, ವಲಯ ಐಜಿಪಿಗಳ ಹುದ್ದೆಗಳಲ್ಲಿ ಬದಲಾವಣೆಯಾಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಅಧಿಕಾರಿಗಳಿಂದ ಲಾಭಿ ಶುರು: ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿಯೇ ನಡೆದ ಲೋಕೋಪಯೋಗಿ, ಪೊಲೀಸ್ ಇಲಾಖೆಯ ಕೆಲ ಹುದ್ದೆಗಳ ವರ್ಗಾವಣೆ ರದ್ದುಗೊಳ್ಳುವುದನ್ನು ತಳ್ಳಿ ಹಾಕುವಂತಿಲ್ಲ. ಮತ್ತೂಂದೆಡೆ, ಹೊಸ ಸರ್ಕಾರ ಅಧಿಕಾರಕ್ಕೆ ಬರುತ್ತಿರುವ ಬೆನ್ನಲ್ಲೇ ಆಯಕಟ್ಟಿನ ಹುದ್ದೆಗಳಲ್ಲಿ ಪ್ರತಿಷ್ಠಾಪನೆಗೊಳ್ಳುವ ಸಲುವಾಗಿ ಅಧಿಕಾರಿಗಳ ವರ್ಗ ಲಾಭಿ ಶುರು ಮಾಡಿದೆ. ವಿವಿಧ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ಬೆಂಗಳೂರಿನ ಕಚೇರಿಗಳಿಗೆ ವರ್ಗಾವಣೆಗೊಳ್ಳ ಬಹುದು. ಸಮ್ಮಿಶ್ರ ಸರ್ಕಾರದ ನೆರಳಲ್ಲಿ ಆಯಕಟ್ಟಿನ ಹುದ್ದೆಗಳಲ್ಲಿ ಆಶ್ರಯ ಪಡೆದುಕೊಂಡಿದ್ದ ಹಲವು ಐಎಎಸ್, ಐಪಿಎಸ್, ಕೆಎಎಸ್ ಅಧಿಕಾರಿಗಳು ವರ್ಗಾವಣೆಯಾಗುವ ಆತಂಕ ಎದುರಿಸುತ್ತಿದ್ದಾರೆ.
ಅಧಿಕಾರಿಗಳಿಗೆ ಆಯಕಟ್ಟಿನ ಹುದ್ದೆಗಳನ್ನು ಅಲಂಕರಿಸುವ ಅದೃಷ್ಟ ಕೂಡ ರಾಜಕೀಯ ಪಕ್ಷಗಳ ನಡುವೆ ಹೊಂದಿರುವ ಒಡನಾಟ, ಜಾತಿ ಲೆಕ್ಕಾಚಾರದ ಮೇಲೆಯೂ ಅವಲಂಬಿತವಾಗಿರಲಿದೆ ಎಂಬ ಸಂಗತಿ ಗುಟ್ಟಾಗಿ ಏನೂ ಉಳಿದಿಲ್ಲ. ಸರ್ಕಾರಗಳು ಬದಲಾದ ಮೇಲೆ ನಡೆಯುವ ಸಾಮಾನ್ಯ ಪ್ರಕ್ರಿಯೆ ಇದಾಗಿ ಬಿಟ್ಟಿದೆ ಎಂದು ನಿವೃತ್ತ ಅಧಿಕಾರಿಯೊಬ್ಬರು ಹೇಳುತ್ತಾರೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.