ಪಿಐಎಲ್‌ ಆಗಿ ಬದಲಾದ ತಕರಾರು ಅರ್ಜಿ


Team Udayavani, Jan 5, 2018, 11:30 AM IST

highcourt.jpg

ಬೆಂಗಳೂರು: ನಿಯಮ ಉಲ್ಲಂ ಸಿ ಹೈಕೋರ್ಟ್‌ ಆವರಣದಲ್ಲಿ “ಅನಂತು ವರ್ಸಸ್‌ ನುಸ್ರತ್‌’ ಚಿತ್ರದ ನಾಯಕ ನಟ ವಿನಯ್‌ ರಾಜ್‌ಕುಮಾರ್‌ ಅವರ ಫೋಟೋ ಶೂಟ್‌ ನಡೆಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನಾಗಿ (ಪಿಐಎಲ್‌) ಪರಿವರ್ತಿಸಲಾಗಿದೆ.

ವಕೀಲ ಎನ್‌.ಪಿ.ಅಮೃತೇಶ್‌ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎ.ಎಸ್‌. ಬೋಪಣ್ಣ ಅವರಿದ್ದ ಏಕಸದಸ್ಯ ಪೀಠ, ಅರ್ಜಿಯಲ್ಲಿ ಯಾವುದೇ ವೈಯುಕ್ತಿಕ ಹಿತಾಸಕ್ತಿ ಇಲ್ಲ. ಇದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಾಗಲಿದೆ ಎಂದು ಅಭಿಪ್ರಾಯಪಟ್ಟು, ಈ ಅರ್ಜಿಯನ್ನು ವಿಭಾಗೀಯ ಪೀಠಕ್ಕೆ ವರ್ಗಾಯಿಸುವಂತೆ ಹೈಕೋರ್ಟ್‌ ರಿಜಿಸ್ಟ್ರಾರ್‌ಗೆ ಸೂಚಿಸಿತು.

ಹೈಕೋರ್ಟ್‌ ಆವರಣ ಮತ್ತು ಬೆಂಗಳೂರು ವಕೀಲರ ಸಂಘದ ಗ್ರಂಥಾಯಲದಲ್ಲಿ 2017ರ ಆ.15ರಂದು “ಅನಂತು ವರ್ಸಸ್‌ ನುಸ್ರತ್‌’ ಚಿತ್ರಕ್ಕಾಗಿ ನಟ ವಿನಯ್‌ ರಾಜ್‌ಕುಮಾರ್‌ ಅವರ ಫೋಟೋ ಶೂಟ್‌ ನಡೆದಿತ್ತು ಇದನ್ನು ಪ್ರಶ್ನಿಸಿ ತಕರಾರು ಅರ್ಜಿ ಸಲ್ಲಿಸಲಾಗಿತ್ತು. 

ಲಾಂಛನಗಳು ಮತ್ತು ಹೆಸರುಗಳು (ಅನುಚಿತ ನಿಯಂತ್ರಣ) ಕಾಯ್ದೆ-1950ರ ಪ್ರಕಾರ ಸಂಸತ್‌, ರಾಜ್ಯ ಶಾನಸಭೆ, ಸುಪ್ರೀಂಕೋರ್ಟ್‌, ರಾಜ್ಯ ಹೈಕೋರ್ಟ್‌, ಕೇಂದ್ರ ಸಚಿವಾಲಯ ಅಥವಾ ರಾಜ್ಯ ಸಚಿವಾಲಯ ಹಾಗೂ ಇತರೆ ಸರಕಾರಿ ಕಚೇರಿಗಳ ಹೆಸರು ಅಥವಾ ಈ ಮೇಲ್ಕಂಡ  ಕಚೇರಿ ಕಟ್ಟಡಗಳ ಚಿತ್ರಗಳನ್ನು ಬಳಸುವುದು ನಿಷಿದ್ಧ.

ಈ ನಿಯಮ ಮತ್ತು ಹೈಕೋರ್ಟ್‌ ಭದ್ರತಾ ವ್ಯವಸ್ಥೆ ಉಲ್ಲಂ ಸಿ, ಹೈಕೋರ್ಟ್‌ ಆಚರಣದಲ್ಲಿ ವಿನಯ್‌ ರಾಜ್‌ಕುಮಾರ್‌ ಅವರ ಫೊಟೋ ಶೂಟ್‌ ನಡೆಸಲಾಗಿದೆ. ಅಲ್ಲದೇ ಹಳದಿ ನಾಮಫ‌ಲಕದ  ವಾಹನ, ಮಾಧ್ಯಮದವರ ಕ್ಯಾಮರಾ ಹಾಗೂ ಲ್ಯಾಪ್‌ಟಾಪ್‌ ಸೇರಿ ಇನ್ನಿತರ ವಸ್ತುಗಳನ್ನು ಹೈಕೋರ್ಟ್‌ ಆವರಣದೊಳಗೆ ತರಲು ಹೈಕೋರ್ಟ್‌ ರಿಜಿಸ್ಟ್ರಾರ್‌ ಅನುಮತಿ ಪಡೆಯಬೇಕು. ಆದರೆ, ಫೋಟೋ ಶೂಟ್‌ಗೆ ಅನುಮತಿ ಪಡೆದಿಲ್ಲ.

ಹೈಕೋರ್ಟ್‌ ಸಹಾಯಕ ಪೊಲೀಸ್‌ ಆಯುಕ್ತರು ದಾಖಲಿಸಿದ ದೂರಿನ ಮೇಲೆ ಈವರೆಗೂ ವಿಧಾನಸೌಧ ಠಾಣೆ ಎಸ್‌ಐ ಯಾವುದೇ ಕ್ರಮ ಜರುಗಿಸಿಲ್ಲ. ಹೀಗಾಗಿ, ಎಸಿಪಿ ದೂರಿನ ತನಿಖೆ ನಡೆಸಲು ಮತ್ತು ಹೈಕೋರ್ಟ್‌ ಭದ್ರತಾ ವ್ಯವಸ್ಥೆ ಉಲ್ಲಂ ಸಿದವರನ್ನು ಬಂಧಿಸಿ, ಮ್ಯಾಜಿಸ್ಟ್ರೇಟ್‌ ಕೋರ್ಟ್‌ಗೆ ಹಾಜರುಪಡಿಸಲು ವಿಧಾನಸೌಧ ಠಾಣೆ ಎಸ್‌ಐಗೆ ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಕೋರಲಾಗಿದೆ.

ಟಾಪ್ ನ್ಯೂಸ್

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

11

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

1-aaccc

Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು

3

Uppala: ಸುಮಾರು 3.5 ಕೋಟಿ ರೂ. ಮೌಲ್ಯದ ಅಮಲು ಪದಾರ್ಥ ವಶಕ್ಕೆ : ಬಂಧನ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

crime

Bidar; ಪತ್ನಿ ಜತೆ ಅನೈತಿಕ ಸಂಬಂಧ‌:ಯುವಕನ ಮರ್ಮಾಂಗಕ್ಕೆ ಕತ್ತರಿ ಹಾಕಿದ ಪತಿ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.