ಮನೆ ಬಾಗಿಲಿಗೆ ತೆರಳಿ ಕನ್ನಡ ಪುಸ್ತಕ ಮಾರಾಟ


Team Udayavani, Nov 24, 2021, 10:21 AM IST

ಬೆಂ.ನಗರ ಜಿಲ್ಲೆ ಕಸಾಪ ಗದ್ದುಗೆಗೆ ಪ್ರಕಾಶಮೂರ್ತಿ

ಬೆಂಗಳೂರು: “ನಮ್ಮ ನಡೆ ಕಾಲೇಜು ಕಡೆ’ ಕಾರ್ಯಕ್ರಮ ಮೂಲಕ ವಿದ್ಯಾರ್ಥಿಗಳಿಗೆ ರಿಯಾ ಯಿತಿ ದರದಲ್ಲಿ ಪರಿಷತ್ತಿನ ಅಜೀವ ಸದಸ್ಯತ್ವ ನೀಡಿ ಕನ್ನಡ ಕಟ್ಟುವ ಕಾಯಕದಲ್ಲಿ ತೊಡಗಿಸಿ ಕೊಳ್ಳಲಾಗುವುದು. ಇದು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ 11ನೇ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಎಂ.ಪ್ರಕಾಶ ಮೂರ್ತಿ ಅವರ ಮಾತುಗಳು.

ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷರಾಗಿ ಆಯ್ಕೆಯಾದ ಸಂದರ್ಭದಲ್ಲಿ “ಉದಯವಾಣಿ’ಗೆ ಸಂದರ್ಶನ ನೀಡಿದ ಅವರು, ಐಟಿಬಿಟಿ, ಪದವಿ ಕಾಲೇಜು ಮತ್ತು ಗಾರ್ಮೆಂಟ್ಸ್‌ಗಳಿಗೆ ತೆರಳಿ ಕನ್ನಡ ಭಾಷೆ ಬಗ್ಗೆ ಆಸಕ್ತಿ ಹೊಂದಿರುವವರನ್ನು ಪರಿಷತ್ತಿನ ಸದಸ್ಯರನ್ನಾಗಿ ಮಾಡಿಕೊಳ್ಳುವ ಯೋಜನೆ ರೂಪಿಸಿವುದಾಗಿಯೂ ಹೇಳಿದರು.

ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿ ಸಾರಥ್ಯ ವಹಿಸಿದ್ದೀರಿ, ನಿಮ್ಮ ಮುಂದಿನ ರೂಪುರೇಷೆಗಳು ಹೇಗಿರಲಿವೆ?

“ಕನ್ನಡ ಸಂವರ್ಧನ ನಿಧಿ’ ಸ್ಥಾಪನೆ ಮಾಡಿ ಅದರ ಮೂಲಕ ಪರಿಸರ ಮತ್ತು ವೈಜ್ಞಾನಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ “ಕೆ.ಪಿ.ಪೂರ್ಣ ಚಂದ್ರ ತೇಜಸ್ವಿ’ ಅವರ ಹೆಸರಿನಲ್ಲಿ ಪ್ರಶಸ್ತಿ, ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ “ಜಿ.ಎಸ್‌.ಶಿವರುದ್ರಪ್ಪ’ ಅವರ ಹೆಸರಿನಲ್ಲಿ ಪ್ರಶಸ್ತಿ, ಸಾಮಾಜಿಕ ನ್ಯಾಯಕ್ಕಾಗಿ ದುಡಿದವರಿಗಾಗಿ “ದೇವರಾಜ ಅರಸು’ ಹೆಸರಿನಲ್ಲಿ, ಸಮಾಜ ವಾದಿ ಚಳವಳಿ ಮತ್ತು ಚಿಂತನೆಗಳಲ್ಲಿ ತೊಡಗಿದವರಿಗೆ “ಶಾಂತವೇರಿ ಗೋಪಾಲಗೌಡ’ ಹೆಸರಿನಲ್ಲಿ ಪ್ರಶಸ್ತಿ, ಕನ್ನಡಪರ ಹೋರಾಟದಲ್ಲಿ ತೊಡಗಿಸಿಕೊಂಡವರಿಗೆ “ಅನಕೃ’ ಹೆಸರಿನಲ್ಲಿ ಪ್ರಶಸ್ತಿ, ಜಾನಪದ ಕ್ಷೇತ್ರದಲ್ಲಿ ಹೆಸರು ಮಾಡಿದವರಿಗೆ “ಎಸ್‌.ಕೆ.ಕರೀಂಖಾನ್‌’ ಹೆಸರಿನಲ್ಲಿ, ಸಂಶೋಧನಾ ಕ್ಷೇತ್ರದಲ್ಲಿ ಹೆಸರು ಮಾಡಿದವರಿಗೆ “ಎಂ. ಎಂ.ಕಲಬುರಗಿ’ಅವರ ಹೆಸರಿನಲ್ಲಿ ಜತೆಗೆ ಸಂಘಟನೆ ಮತ್ತು ಸೇವೆ ಮಾಡಿದವರಿಗೆ “ಜಿ.ನಾರಾಯಣ’ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡುವ ಗುರಿ ಹೊಂದಿದ್ದೇನೆ.

ನಿಮ್ಮ ಆಡಳಿತ ಅವಧಿಯಲ್ಲಿ ಪರಿಷತ್ತಿನ ಸ್ವರೂಪ ಹೇಗಿರಲಿದೆ?

ಇನ್ನೊಂದು ತಿಂಗಳಲ್ಲಿ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳಲ್ಲಿ ಪರಿಷತ್ತಿನ ಘಟಕ ಸ್ಥಾಪನೆ ಮಾಡುತ್ತೇನೆ.ಆ ಘಟಕಗಳಲ್ಲಿ ಅಧ್ಯಕ್ಷರನ್ನು ನೇಮಕ ಮಾಡುವ ಸಂದರ್ಭದಲ್ಲಿ ಅಪ್ಪಟ ಕನ್ನಡಪರ ಚಿಂತನೆ ಇರುವವರಿಗೆ ಮಣೆಹಾಕುತ್ತೇನೆ.

ಸಂಪನ್ಮೂಲ ಕ್ರೋಢೀಕರಣದ ಬಗ್ಗೆ ಹೇಳುವುದಾದರೆ?

“ಕನ್ನಡ ಸಂವರ್ಧನ ನಿಧಿ’ ಮೂಲಕ ಕನ್ನಡ ಕಾಯಕಕ್ಕಾಗಿ ದೇಣಿಗೆ ಸಂಗ್ರಹ ಮಾಡುತ್ತೇನೆ. ಕಾರ್ಪೋರೇಟ್‌ ವಲಯದವರ ಮನವೊಲಿಸಿ ಸಾಮಾಜಿಕ ಹೊಣೆಗಾರಿಕೆ ನಿಧಿ ಪಡೆದು ಆ ಮೂಲಕ ಕನ್ನಡ ಪುಸ್ತಕಗಳನ್ನು ಪ್ರಕಟ ಮಾಡುತ್ತೇನೆ. ನಾನು ತಂಡವನ್ನು ಕಟ್ಟಿಕೊಂಡು ಪ್ರತಿ ವಿಧಾನ ಸಭಾ ಕ್ಷೇತ್ರಗಳಲ್ಲಿ ತಿಂಗಳಿಗೊಮ್ಮೆ ಮನೆಬಾಗಿಲಿಗೆ ಹೋಗಿ ಪುಸ್ತಕಗಳನ್ನು ರಿಯಾಯ್ತಿ ದರದಲ್ಲಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದೇನೆ.

ಬೆಂಗಳೂರಿನಲ್ಲಿ ಕನ್ನಡ ಭಾಷೆ ಮಾಯವಾಗುತ್ತಿದೆ ಎಂಬ ಮಾತಿದೆ.ಬೆಂ.ನಗರ.ಜಿಲ್ಲಾ ಕಸಾಪ ಅಧ್ಯಕ್ಷರಾಗಿ ನಿಮ್ಮ ಕನ್ನಡ ಕಟ್ಟುವಿಕೆ ಕೆಲಸ ಹೇಗಿರಲಿದೆ?

ಕನ್ನಡ ಭಾಷೆ “ಸೂರ್ಯ-ಚಂದ್ರ’ ಇವರುವ ವರೆಗೂ ಮಾಯವಾಗುವುದಿಲ್ಲ.ನಾವು ನಿರಾಭಿಮಾನಿಗಳಾಗಿದ್ದೇನೆ, ನಾವು ಎಚ್ಚೆತ್ತುಕೊಳ್ಳಬೇಕಾಗಿದೆ. ಆದಗ್ಯೂ, ಐಟಿಬಿಟಿ, ಪದವಿ ಕಾಲೇಜು ಮತ್ತು ಗಾರ್ಮೆಂಟ್ಸ್‌ಗಳಿಗೆ ಹೋಗಿ ಕನ್ನಡದ ಬಗ್ಗೆ ಆಸಕ್ತಿ ಹೊಂದಿರುವವರನ್ನು ಪರಿಷತ್ತಿನ ಸದಸ್ಯರನ್ನಾಗಿ ಮಾಡಿಕೊಳ್ಳುವ ಯೋಜನೆ ರೂಪಿಸುತ್ತೇನೆ. ಜತೆಗೆ ಅಲ್ಲೇ ಒಂದು ಪರಿಷತ್ತಿನ ಕನ್ನಡ ವಿಭಾಗ ತೆರೆಯುತ್ತೇನೆ.

ಹೊಸ ಸವಾಲುಗಳೊಂದಿಗೆ ಕನ್ನಡ ಕಟ್ಟುವಿಕೆ ಕಾರ್ಯ ಹೇಗಿರಲಿದೆ?

ಯುವ ಸಮೂಹದ ಜತೆಗೆ ವಿದ್ಯುನ್ಮಾನ ಬಳಕೆ ಮಾಡಿಕೊಂಡು ಕನ್ನಡವನ್ನು ಬೆಳಗಿಸಬೇಕಿದೆ ಆ ನಿಟ್ಟಿನಲ್ಲಿ ಕೆಲಸ ನಡೆಯಲಿದೆ. ಹೊಸ ತಲೆಮಾರಿನ ವರನ್ನು ಹೆಚ್ಚು ಹೆಚ್ಚು ಸದಸ್ಯರನ್ನಾಗಿ ಮಾಡಿ ಕನ್ನಡ ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳನ್ನು ತಲುಪಿಸು ತ್ತೇನೆ.”ನಮ್ಮ ನಡೆ ಕಾಲೇಜು ಕಡೆ’ ಕಾರ್ಯಕ್ರಮ ರೂಪಿಸಿ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಪರಿಷತ್ತಿನ ಅಜೀವ ಸದಸ್ಯತ್ವ ನೀಡುವ ಉದ್ದೇಶವಿದೆ.

  • ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.