Ganesh Chaturthi: ಕರೆಂಟ್‌ ಕಂಬಕ್ಕೆ ಗಣೇಶ ಪೆಂಡಾಲ್‌ ಕಟ್ಟಬೇಡಿ


Team Udayavani, Sep 5, 2024, 11:57 AM IST

Ganesh Chaturthi: ಕರೆಂಟ್‌ ಕಂಬಕ್ಕೆ ಗಣೇಶ ಪೆಂಡಾಲ್‌ ಕಟ್ಟಬೇಡಿ

ಬೆಂಗಳೂರು: ಗಣೇಶೋತ್ಸವ ಅಂಗವಾಗಿ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆಯಲು ಆಯಾ ಉಪ ವಿಭಾಗಾಧಿಕಾರಿಗಳ ನಿಯೋಜಿಸಿರುವ ಬೆಸ್ಕಾಂ ಈ ಸಂಬಂಧ ಗಣೇಶ ಮೂರ್ತಿ ಮೆರವಣಿಗೆ ಹಾಗೂ ವಿಸರ್ಜನೆ ವೇಳೆ ಅನು ಸರಿಸಬೇಕಾದ ಮಾರ್ಗಸೂಚಿ ಹಾಗೂ ಸುರಕ್ಷತಾ ಕ್ರಮಗಳನ್ನು ಬಿಡುಗಡೆಗೊಳಿಸಿದೆ.

ಅದರಂತೆ ವಿದ್ಯುತ್‌ ತಂತಿ, ವಿದ್ಯುತ್‌ ಕಂಬ ಅಥವಾ ಪರಿವರ್ತಕ ಕೇಂದ್ರಗಳಿಗೆ ಚಪ್ಪರ, ಶಾಮಿಯಾನ ಕಟ್ಟುವಂತಿಲ್ಲ. ತೋರಣ, ಪೆಂಡಾಲ್ ಸೀರಿ ಯಲ್‌ ದೀಪ ಹಾಕುವ ಮುನ್ನ ವಿದ್ಯುತ್‌ ತಂತಿಗಳ ಬಗ್ಗೆ ಗಮನ ವಿರಬೇಕು. ಗಣೇಶ ಮೂರ್ತಿ ಮೆರವಣಿಗೆ ಯಲ್ಲಿ ರಸ್ತೆ ಬದಿಯ ವಿದ್ಯುತ್‌ ಮಾರ್ಗಗಳಿದ್ದಲ್ಲಿ ಎಚ್ಚರವಹಿಸಬೇಕು. ಮೆರವಣಿಗೆ ಮಾರ್ಗದ ಬಗ್ಗೆ ಮುಂಚಿತವಾಗಿ ಉಪ ವಿಭಾಗಾಧಿಕಾರಿಗಳಿಗೆ ತಿಳಿಸಿ ಅಗತ್ಯ ನೆರವು ಪಡೆದುಕೊಳ್ಳಬೇಕು. ಸೀರಿಯಲ್‌ ಲೈಟ್‌, ದೀಪಗಳನ್ನು ಅಳ ವಡಿಸು ವಾಗ ವಿದ್ಯುತ್‌ ಕಂಬ ದಿಂದ ಸಂಪರ್ಕ ಪಡೆಯ ಬಾರದು. ವಿದ್ಯುತ್‌ ಪರಿ ಕರಗಳು ಇರುವ ಜಾಗ ವನ್ನು “ಡೇಂಜರ್‌ ಜೋನ್‌’ ಎಂದು ಸೂಚಿಸಲಾಗಿದ್ದು ತುಂಡಾದ ತಂತಿ ಗಳು, ವಿದ್ಯುತ್‌ ಕಿಡಿ ಕಂಡಲ್ಲಿ ಸಹಾಯ ವಾಣಿ 1912 ಸಂಪರ್ಕಿಸುವಂತೆ ತಿಳಿಸಿದೆ. ‌

ಗಣೇಶೋತ್ಸವಕ್ಕೆ ಬೆಳಕು, ದೀಪಾಲಂಕಾರಕ್ಕೆ ಬೆಸ್ಕಾಂ ಸಹ ಕಾರ ನೀಡಲಿದೆ. ಸಾರ್ವಜನಿಕ ಗಣೇತ್ಸವದಲ್ಲಿ ಮೂರ್ತಿ ಪ್ರತಿ ಷ್ಠಾಪನೆ ಮತ್ತು ವಿಸರ್ಜನೆ ವೇಳೆ ಯಾವುದೇ ವಿದ್ಯುತ್‌ ಅವಘಡಗಳಾಗದಂತೆ ಎಚ್ಚರವಹಿಸಿ, ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್‌ ಬೀಳಗಿ ಕೋರಿದ್ದಾರೆ.

ಬೆಸ್ಕಾಂ ಸಿಬ್ಬಂದಿ ಅಣಿ: ಗಣೇಶೋತ್ಸವ ಮೆರವಣಿಗೆ ವೇಳೆ ಯಾವುದೇ ರೀತಿಯ ಅವಘಡ ಗಳು ಆಗದಂತೆ ಎಚ್ಚರಿಕೆ ವಹಿಸಲಾಗಿದೆ. ಆ ಹಿನ್ನೆಲೆಯಲ್ಲಿ ಮೆರವಣಿಗೆ ಸಾಗು ವ ಪ್ರದೇಶಗಳಲ್ಲಿ ವಿದ್ಯುತ್‌ ದುರಸ್ತಿ ಕಾರ್ಯ ನಡೆಸುವಂತೆ ಪಾಲಿಕೆ ಮುಖ್ಯ ಆಯು ಕ್ತರು ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಸ್ಕಾಂ ಅಧಿಕಾರಿಗಳು ಕೂಡ ವಿದ್ಯುತ್‌ ಸಂಪರ್ಕ ದುರಸ್ತಿ ಸಂಪರ್ಕ ವ್ಯವಸ್ಥೆ  ಸರಿಪಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ವಿಸರ್ಜನೆ ವೇಳೆ ಇಲಾವಾರು ಸಿಬ್ಬಂದಿಗೆ ಡ್ರೇಸ್‌ ಕೋಡ್‌ ಧರಿಸುವಂತೆ ಸೂಚನೆ ನೀಡಲಾಗಿದೆ. ಆಯಾ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಇಲಾಖೆ ಪ್ರತಿನಿಧಿಸುವ ಜರ್ಕಿನ್‌, ಟೀಶರ್ಟ್‌ ಧರಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕಲ್ಯಾಣಿಗಳ ಬಳಿ ಪ್ರಥಮ ಚಿಕಿತ್ಸೆಗಾಗಿ ವ್ಯವಸ್ಥೆ ಗಣೇಶ ವಿಸರ್ಜನೆಗಾಗಿ ವಲಯವಾರು ವ್ಯಾಪ್ತಿಯಲ್ಲಿ ನಿರ್ಮಿಸಿರುವ ಕಲ್ಯಾಣಿಗಳಲ್ಲಿ ಮತ್ತು ತಾತ್ಕಾಲಿಕ ಕೊಳಗಳಲ್ಲಿ ಆರೋಗ್ಯ ಸೇವೆ ನೀಡಲು ಬಿಬಿಎಂಪಿ ಆರೋಗ್ಯವಿಭಾಗವು ತಜ್ಞ ವೈದ್ಯಕೀಯ ಸಿಬ್ಬಂದಿಯೊಂದಿಗೆ ಸಿದ್ಧವಾಗುತ್ತಿದೆ. ಸಣ್ಣ ಪುಟ್ಟ ಗಾಯಗಳು ಸೇರಿದಂತೆ ಇನ್ನಿತರ ವೈದ್ಯಕೀಯ ಆರೈಕೆಗಳನ್ನು ನೀಡಲಾಗುವುದು. ಎಲ್ಲ ಕಲ್ಯಾಣಿಗಳ ಬಳಿಯೂ ಪ್ರಾಥಮಿಕ ಚಿಕಿತ್ಸೆ ನೀಡಲು ಅಗತ್ಯ ಸಿಬ್ಬಂದಿ ಹಾಗೂ ವೈದ್ಯಕೀಯ ಸೇವೆ ವ್ಯವಸ್ಥೆಗೊಳಿಸಲಾಗುತ್ತದೆ. ಆಯಾ ವಲಯದಲ್ಲಿ ವಿಸರ್ಜನೆಯಾಗುವ ಗಣೇಶ ಮೂರ್ತಿ ಹಾಗೂ ಸಾರ್ವಜನಿಕರ ಸಂಖ್ಯೆಯ ಆಧಾರದ ಮೇಲೆ ಅಗತ್ಯಬಿದ್ದರೆ ಹೆಚ್ಚಿನ ಆ್ಯಂಬುಲೆನ್ಸ್‌ ಹಾಗೂ ವೈದ್ಯಕೀಯ ಸಿಬ್ಬಂದಿಯನ್ನು ನಿಯುಕ್ತಿಗೊಳಿಸಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ಡಾ.ಸೈಯದ್‌ ಸಿರಾಜುದ್ದೀನ್‌ ತಿಳಿಸಿದ್ದಾರೆ.

ಗಣೇಶೋತ್ಸವಕ್ಕೆ ಪಾಲಿಕೆ ಎಲ್ಲ ರೀತಿಯಲ್ಲೂ ಸಿದ್ಧವಾಗಿದೆ. ಖರ್ಚು ವೆಚ್ಚಗಳಿಗಾಗಿ ಸುಮಾರು 7 ಕೋಟಿ ರೂ.ಹಣವನ್ನು ಮೀಸಲಿಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದ ರೀತಿಯಲ್ಲಿ ಎಚ್ಚರಿಕೆ ವಹಿಸಲಾಗಿದೆ. ವಲಯವಾರು ನೋಡೆಲ್‌ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ತುಷಾರ್‌ ಗಿರಿನಾಥ್‌, ಬಿಬಿಎಂಪಿ ಮುಖ್ಯ ಆಯುಕ ಎಕ್ಸ್‌ಪ್ರೆಸ್‌ ವೇನಲ್ಲಿ  ತಗ್ಗಿದ ಸಾವಿನ ಪ್ರಮಾಣ

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.